ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರವು ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದೆ.
ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಮಾಹಿತಿ ನೀಡಿದ್ದು, ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯ ಪಡೆದು ಸಂಚಾರ ನಡೆಸುತ್ತಿದ್ದು, ನಿಜಾರ್ಥದಲ್ಲಿ ಶಕ್ತಿ ನಾಡಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದೆ ಎಂದಿದ್ದಾರೆ.
ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಹೆಚ್ಚುವರಿ ಬಸ್ಗಳನ್ನು ಖರೀದಿಸಲಾಗಿದೆ. ಈ ಮೂಲಕ ಉದ್ಯೋಗ ಸೃಷ್ಟಿಯು ಹೆಚ್ಚಾಗಿದೆ. ಈಗಾಗಲೇ ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡುವುದರ ಜೊತೆಗೆ 2,000 ಚಾಲಕ ಕಂ ನಿರ್ವಾಹಕರು ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯ ಪಡೆದು ಸಂಚಾರ ನಡೆಸುತ್ತಿದ್ದು, ನಿಜಾರ್ಥದಲ್ಲಿ ಶಕ್ತಿ ನಾಡಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದೆ.
ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಹೆಚ್ಚುವರಿ… pic.twitter.com/l3j83rqDRu
— DIPR Karnataka (@KarnatakaVarthe) February 26, 2025
ಫೆ.28ರಂದು ರಾಜ್ಯದ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಹೀಗೆ ಮಾಡುವುದು ಕಡ್ಡಾಯ: ಸರ್ಕಾರ ಆದೇಶ
BIG NEWS : ಫೆ.28ರಿಂದ 3 ದಿನ `ಹಂಪಿ ಉತ್ಸವ’ : CM ಸಿದ್ದರಾಮಯ್ಯ ಚಾಲನೆ.!