Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಧುನಿಕ ತಂತ್ರಜ್ಞಾನಗಳಿಗೆ ಶಿಕ್ಷಕರು ಹೊಂದಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

10/09/2025 3:34 PM

ನಿಮ್ಮ ಮಕ್ಕಳನ್ನು ವಿದೇಶದಿಂದ ಕರೆಸಿ ಮದ್ದೂರು ಚಲೋ ಮಾಡಿ : ಮದ್ದೂರಿಗೆ ಬಿಜೆಪಿ ನಾಯಕರ ಭೇಟಿಗೆ ಪ್ರಿಯಾಂಕ್ ಖರ್ಗೆ ಕಿಡಿ

10/09/2025 3:28 PM

ಕೊಪ್ಪಳದಲ್ಲಿ 2,345 ಕೋಟಿ ವೆಚ್ಚದ ಉಕ್ಕು ಘಟಕ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

10/09/2025 3:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಸ್ಕಾಂನಿಂದ ಕಡಿಮೆ ವಿದ್ಯುತ್ ಬಳಸುವ ‘BLDC ಫ್ಯಾನ್‌’ ಲೋಕಾರ್ಪಣೆ: ಇದನ್ನು ಬಳಸಿ, ಎಲೆಕ್ಟ್ರಿಸಿಟಿ ಜತೆ ಹಣ ಉಳಿಸಿ | BLDC Ceiling Fan
KARNATAKA

ಬೆಸ್ಕಾಂನಿಂದ ಕಡಿಮೆ ವಿದ್ಯುತ್ ಬಳಸುವ ‘BLDC ಫ್ಯಾನ್‌’ ಲೋಕಾರ್ಪಣೆ: ಇದನ್ನು ಬಳಸಿ, ಎಲೆಕ್ಟ್ರಿಸಿಟಿ ಜತೆ ಹಣ ಉಳಿಸಿ | BLDC Ceiling Fan

By kannadanewsnow0927/02/2025 6:38 PM

ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್‌ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ.

ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ ನಡೆದ ಡಿಸ್ಕಾಂಗಳ ಸಾಮರ್ಥ್ಯಾಭಿವೃದ್ದಿ ಕಾರ್ಯಕ್ರಮದ ಭಾಗವಾಗಿ ಬೆಸ್ಕಾಂನ ಬೇಡಿಕೆ ನಿರ್ವಹಣಾ ವಿಭಾಗದ (ಡಿಎಸ್‌ಎಂ) ವತಿಯಿಂದ ಗುರುವಾರ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಅನ್ನು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌.ಶಿವಶಂಕರ್‌ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌.ಶಿವಶಂಕರ್‌ “ಬೇಸಿಗೆ ಆರಂಭದಲ್ಲೇ ಬಿ.ಎಲ್‌.ಡಿ.ಸಿ. ಫ್ಯಾನ್‌ಗಳನ್ನು ಬಿಡುಗಡೆ ಮಾಡಿ, ಬಳಕೆಗೆ ಗ್ರಾಹಕರನ್ನು ಉತ್ತೇಜಿಸಲಾಗುತ್ತಿದೆ. ಸಾಮಾನ್ಯ ಫ್ಯಾನ್‌ಗಳಿಗಿಂತ ಅತಿ ಕಡಿಮೆ ವಿದ್ಯುತ್ ಬಳಸಿಕೊಳ್ಳುವಂತೆ ಈ ಫ್ಯಾನ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಒಟ್ಟಾರೆ ವಿದ್ಯುತ್ ಬೇಡಿಕೆ ಕಡಿತಗೊಳಿಸುವ ನಮ್ಮ ಈ ಪ್ರಯತ್ನ ಗ್ರಾಹಕರ ವಿದ್ಯುತ್ ವೆಚ್ಚವನ್ನೂ ಕಡಿಮೆ ಮಾಡಲಿದೆ. ಸುಸ್ಥಿರ ಹಾಗೂ ಇಂಧನ ದಕ್ಷತೆಯ ಭವಿಷ್ಯಕ್ಕೆ ಇದು ಮಹತ್ವದ ಹೆಜ್ಜೆಯಾಗಿದೆ,” ಎಂದು ಹೇಳಿದರು.

“ಇಂಧನ ದಕ್ಷತೆಯೆಡೆಗಿನ ನಮ್ಮ ಪ್ರಯತ್ನವು ಪಾಲುದಾರರ ಸಹಕಾರವಿಲ್ಲದೇ ಸಾಧ್ಯವಾಗುತ್ತಿರಲಿಲ್ಲ. ಆ ನಿಟ್ಟಿನಲ್ಲಿ ಬಿಇಇ, ಕ್ರೆಡಲ್, ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್‌ಸಿ) ಹಾಗೂ ಇನ್ನಿತರ ಪಾಲುದಾರರ ಪ್ರೋತ್ಸಾಹಕ್ಕೆ ಧನ್ಯವಾದ. ವಿದ್ಯುತ್ ಬಳಕೆಯಲ್ಲಿ ಜಾಗೃತಿ ಹಾಗೂ ಸುಸ್ಥಿರ ನಾಳೆಗಾಗಿ, ನಾವು ಒಂದಾಗಿ ನಡೆಯಬೇಕಿದೆ,” ಎಂದು ಡಾ. ಎನ್‌. ಶಿವಶಂಕರ್‌ ಕರೆ ನೀಡಿದರು.

ಕ್ರೆಡಲ್ ವ್ಯವಸ್ಥಾಪಕ ನಿರ್ದೆಶಕ ಕೆ.ಪಿ.ರುದ್ರಪ್ಪಯ್ಯ ಮಾತನಾಡಿ, “ಒಂದು ಯೂನಿಟ್ ವಿದ್ಯುತ್‌ ಉಳಿಸಿದರೆ, ಎರಡು ಯೂನಿಟ್ ವಿದ್ಯುತ್‌ ಉತ್ಪಾದಿಸಿದಂತೆ. ವಿದ್ಯುತ್ ಉತ್ಪಾದನೆ ಎಷ್ಟು ಮುಖ್ಯವೋ, ಅದನ್ನು ಸಂರಕ್ಷಿಸುವುದೂ ಅಷ್ಟೇ ಮುಖ್ಯವಾಗುತ್ತದೆ. ದೇಶದಲ್ಲಿ ಮೊದಲ ಬಾರಿಗೆ ವಿದ್ಯುತ್ ಸಂರಕ್ಷಣೆ ಮತ್ತು ದಕ್ಷತೆ ನೀತಿ-2022-27 ಜಾರಿಗೊಳಿಸಿದ ಹೆಮ್ಮೆ ಕರ್ನಾಟಕದ್ದು . ಈ ನೀತಿಯು 744 ಬಿಲಿಯನ್ ಕಿಲೋ ವ್ಯಾಟ್ ಅವರ್ ವಿದ್ಯುತ್ ಉಳಿತಾಯ ಜತೆಗೆ 6 ಲಕ್ಷ ಟನ್ ಇಂಗಾಲದ ಡೈ ಆಕ್ಸೈಡ್ ಹೊರಸೂಸುವಿಕೆ ತಡೆಯುವ ಗುರಿ ಹೊಂದಿದೆ,” ಎಂದು ತಿಳಿಸಿದರು.

“ಇಂಧನ ದಕ್ಷತೆ ಹಾಗೂ ಸಂರಕ್ಷಣೆಯ ಗುರಿ ತಲುಪಲು ವಿವಿಧ ವಲಯಗಳಿಗೆ ಗುರಿಗಳನ್ನು ನೀಡಲಾಗಿತ್ತು. ಈ ನಿಟ್ಟಿನಲ್ಲಿ ಬೆಸ್ಕಾಂ ಸಾಧನೆ ಮಹತ್ವದ್ದಾಗಿದೆ. ಬಿ.ಎಲ್‍.‍‍‍ಡಿ.ಸಿ. ಫ್ಯಾನ್‌ಗಳ ಬಳಕೆ ಹೆಚ್ಚಬೇಕಿದ್ದು, ವಿದ್ಯುತ್ ಉಳಿತಾಯ ಪ್ರಯತ್ನಗಳು ನಮ್ಮಿಂದಲೇ ಆರಂಭವಾಗಲಿ,” ಎಂದರು.

ಪಿ.ಡ್ಲ್ಯೂ.ಸಿ. ಭಾರತದ ಕ್ಲೀನ್ ಎನರ್ಜಿ ವಿಭಾಗದ ಮುಖ್ಯಸ್ಥರಾದ ರಾಜೀವ್ ರಲ್ಹಾನ್ ಮಾತನಾಡಿ, ” ಸದ್ಯ ಬಳಕೆಯಲ್ಲಿರುವ ಹಳೆಯ ತಂತ್ರಜ್ಞಾನದ ಫ್ಯಾನ್‌ಗಳಿಗೆ ಹೋಲಿಸಿದರೆ ಬಿ.ಎಲ್.ಡಿ.ಸಿ. ಫ್ಯಾನ್ ಬಳಕೆಯಿಂದ ಶೇಕಡ 50ರಷ್ಟು ವಿದ್ಯುತ್ ಬಳಕೆ ಕಡಿಮೆಗೊಳಿಸಬಹುದಾಗಿದೆ. ಬಿ.ಎಲ್.ಡಿ.ಸಿ. ಫ್ಯಾನ್ ಬಳಕೆ ಉತ್ತೇಜಿಸುತ್ತಿರುವ ಸರ್ಕಾರದ ಜತೆ ಸಹಕರಿಸಲು ಹೆಮ್ಮೆಯಾಗುತ್ತಿದೆ,” ಎಂದು ಹೇಳಿದರು.

ಇಇಎಸ್‌ಎಲ್ ರಾಜ್ಯ ಮುಖ್ಯಸ್ಥರಾದ ದೀಪಕ್ ಸಹನಿ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್‌.ಜೆ. ರಮೇಶ್‌, ಬೆಸ್ಕಾಂ ಡಿಎಸ್‌ಎಂ ಪ್ರಧಾನ ವ್ಯವಸ್ಥಾಪಕರಾದ ರಮೇಶ್ ವಿ.ಎಸ್., ಪಿಎಂಎಸ್ ನಿರ್ದೇಶಕರಾದ ಅಮೇಯ ಸುಬೋಧ್ ಉದ್ಘಾಂವ್ಕರ್ ಸೇರಿದಂತೆ ಬೆಸ್ಕಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಬಿ.ಎಲ್‌.ಡಿ.ಸಿ. ಸೀಲಿಗ್‌ ಫ್ಯಾನ್‌ ಖರೀದಿ ಹೇಗೆ?

ಹೆಚ್ಎಸ್ಆರ್‌ ಲೇಔಟ್‌ನಲ್ಲಿರುವ ಬೆಸ್ಕಾಂನ ಸೆಂಟರ್ ಆಫ್ ಎಕ್ಸಲೆನ್ಸ್ ಕಚೇರಿ ಮತ್ತು ಬೆಸ್ಕಾಂ ಅಧಿಕೃತ ಜಾಲತಾಣದಲ್ಲಿನ ಇಇಎಸ್‌ಎಲ್‌ ಲಿಂಕ್ https://eeslmart.in/fan?affiliateid=13285

(website link: eeslmart.in) ಮೇಲೆ ಕ್ಲಿಕ್ ಮಾಡುವುದರ ಮೂಲಕ ಆನ್‌ಲೈನ್‌ನಲ್ಲಿ ಫ್ಯಾನ್ ಖರೀದಿಸಬಹುದಾಗಿದೆ. 5 ಸ್ಟಾರ್ ಪ್ರಮಾಣೀಕೃತ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಬೆಲೆ 2,699 ರೂ. ಇದೆ.

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ನೋಂದಣಿ ಕುರಿತು ಇಲ್ಲಿದೆ ಮಾಹಿತಿ

BREAKING : ರಾಜ್ಯಕ್ಕೂ ಕಾಲಿಟ್ಟ ‘ಹಕ್ಕಿ ಜ್ವರ’ : ರಾಯಚೂರಲ್ಲಿ ಪಕ್ಷಿಗಳು ನಿಗೂಢ ಸಾವು, ಜನರಲ್ಲಿ ಹೆಚ್ಚಿದ ಆತಂಕ!

Share. Facebook Twitter LinkedIn WhatsApp Email

Related Posts

ಆಧುನಿಕ ತಂತ್ರಜ್ಞಾನಗಳಿಗೆ ಶಿಕ್ಷಕರು ಹೊಂದಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

10/09/2025 3:34 PM4 Mins Read

ನಿಮ್ಮ ಮಕ್ಕಳನ್ನು ವಿದೇಶದಿಂದ ಕರೆಸಿ ಮದ್ದೂರು ಚಲೋ ಮಾಡಿ : ಮದ್ದೂರಿಗೆ ಬಿಜೆಪಿ ನಾಯಕರ ಭೇಟಿಗೆ ಪ್ರಿಯಾಂಕ್ ಖರ್ಗೆ ಕಿಡಿ

10/09/2025 3:28 PM1 Min Read

ಕೊಪ್ಪಳದಲ್ಲಿ 2,345 ಕೋಟಿ ವೆಚ್ಚದ ಉಕ್ಕು ಘಟಕ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

10/09/2025 3:26 PM2 Mins Read
Recent News

ಆಧುನಿಕ ತಂತ್ರಜ್ಞಾನಗಳಿಗೆ ಶಿಕ್ಷಕರು ಹೊಂದಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

10/09/2025 3:34 PM

ನಿಮ್ಮ ಮಕ್ಕಳನ್ನು ವಿದೇಶದಿಂದ ಕರೆಸಿ ಮದ್ದೂರು ಚಲೋ ಮಾಡಿ : ಮದ್ದೂರಿಗೆ ಬಿಜೆಪಿ ನಾಯಕರ ಭೇಟಿಗೆ ಪ್ರಿಯಾಂಕ್ ಖರ್ಗೆ ಕಿಡಿ

10/09/2025 3:28 PM

ಕೊಪ್ಪಳದಲ್ಲಿ 2,345 ಕೋಟಿ ವೆಚ್ಚದ ಉಕ್ಕು ಘಟಕ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

10/09/2025 3:26 PM
high court

ದೇವಾಲಯದ ಸುತ್ತ ಮಾಂಸಾಹಾರ ನಿಷೇಧ ನೋಟಿಸ್‌ ವಾಪಸ್ ​: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ

10/09/2025 3:19 PM
State News
KARNATAKA

ಆಧುನಿಕ ತಂತ್ರಜ್ಞಾನಗಳಿಗೆ ಶಿಕ್ಷಕರು ಹೊಂದಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0910/09/2025 3:34 PM KARNATAKA 4 Mins Read

ಬೆಂಗಳೂರು: “ಶಿಕ್ಷಕರು ಆಧುನಿಕ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಬೇಕು. ಇಲ್ಲದಿದ್ದರೆ ಉತ್ತಮ ಶಿಕ್ಷಣ ನೀಡುವಲ್ಲಿ ಮಕ್ಕಳಿಗೆ ಸರಿಯಾಗಿ ನ್ಯಾಯ ಒದಗಿಸಲು ಆಗುವುದಿಲ್ಲ” ಎಂದು ಡಿಸಿಎಂ…

ನಿಮ್ಮ ಮಕ್ಕಳನ್ನು ವಿದೇಶದಿಂದ ಕರೆಸಿ ಮದ್ದೂರು ಚಲೋ ಮಾಡಿ : ಮದ್ದೂರಿಗೆ ಬಿಜೆಪಿ ನಾಯಕರ ಭೇಟಿಗೆ ಪ್ರಿಯಾಂಕ್ ಖರ್ಗೆ ಕಿಡಿ

10/09/2025 3:28 PM

ಕೊಪ್ಪಳದಲ್ಲಿ 2,345 ಕೋಟಿ ವೆಚ್ಚದ ಉಕ್ಕು ಘಟಕ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

10/09/2025 3:26 PM
high court

ದೇವಾಲಯದ ಸುತ್ತ ಮಾಂಸಾಹಾರ ನಿಷೇಧ ನೋಟಿಸ್‌ ವಾಪಸ್ ​: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ

10/09/2025 3:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.