ಬೆಂಗಳೂರು : ಬೆಳಗಾವಿಯಲ್ಲಿ ಕನ್ನಡ ಮಾತನಾಡು ಎಂದಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಳಿಕ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಹಲವಾರು ರೀತಿ ಬೆಳವಣಿಗೆ ಆದವು. ಇದೀಗ ಶಿವಸೇನೆ ಹಾಗೂ ಎಂಇಎಸ್ ಪುಂಡರ ವಿರುದ್ಧ ಸಿಡಿದೆದ್ದಿರುವ ಕನ್ನಡಪರ ಸಂಘಟನೆಗಳು ಮಾರ್ಚ್ 22 ರಂದು ಕರ್ನಾಟಕ ಬಂದ್ ಮಾಡಲು ಘೋಷಿಸಿದೆ.
ಹೌದು ಇಂದು ಬೆಂಗಳೂರಿನ ವುಡ್ ಲ್ಯಾಂಡ್ ಹೋಟೆಲ್ ನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು ಈ ಒಂದು ಸಭೆಯಲ್ಲಿ ಅನೇಕ ಕನ್ನಡ ಸಂಘಟನೆಗಳ ಅಧ್ಯಕ್ಷರು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು ಕಂಡಕ್ಟರ್ ಮೇಲೆ ಹಲ್ಲಿಯನ್ನು ಖಂಡಿಸಿ ಶಿವಸೇನೆ ಹಾಗೂ ಎಂಇಎಸ್ ವಿರುದ್ಧ ಕನ್ನಡಪರ ಸಂಘಟನೆಗಳು ಮಾರ್ಚ್ 22 ರಂದು ಕರ್ನಾಟಕ ಬಂದ್ ಎಂದು ಘೋಷಣೆ ಮಾಡಿವೆ.
ಸಭೆಯಲ್ಲಿ ವಾಟಾಳ್ ನಾಗರಾಜ್, ರಾಜ್ಯದ ಕನ್ನಡ ಪರ ಸಂಘಟನೆಗಳಾದ ಕರವೇ ನಾರಾಯಣ ಗೌಡ, ಪ್ರವೀಣ್ ಕುಮಾರ್ ಶೆಟ್ಟಿ ಬಣ, ಶಿವರಾಮೇಗೌಡ ಬಣ, ಕನ್ನಡ ಜಾಗೃತಿ ಮಂಜುನಾಥ್ ಕೆ. ಗಿರೀಶ್ ಗೌಡ ಕನ್ನಡ ಸೇನೆ ಅಧ್ಯಕ್ಷ ಕುಮಾರ ಸೇರಿ ವಿವಿಧ ಮುಖಂಡರು ಈ ಸಭೆಯಲ್ಲಿ ಭಾಗಿಯಾದ್ದರು. ಮಾರ್ಚ್ 22 ರಂದು ಕರ್ನಾಟಕ ಬಂದ್ ಮಾಡುವ ಕುರಿತು ಅಧಿಕೃತ ಆದೇಶ ಹೊರಬೀಳಬೇಕಾಗಿದೆ.