ಚಿಕ್ಕಬಳ್ಳಾಪುರ : ಕ್ಷುಲ್ಲಕ ಕಾರಣಕ್ಕೆ ಬಾರ್ ನಲ್ಲಿ ಸಪ್ಲೈ ಆಗಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಾಗೇಪಲ್ಲಿ ಎಂಬಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಬಾಗೇಪಲ್ಲಿ ಪಟ್ಟಣದ ಶ್ರೀನಿವಾಸ್ (48) ಎಂದು ತಿಳಿದು ಬಂದಿದೆ. ಕೊಲೆಯಾದ ದುರ್ದೈವಿ ಬಾಗೇಪಲ್ಲಿ ಪಟ್ಟಣದ ಪ್ರೀತಿ ಬಾರ್ನಲ್ಲಿ ಸಪ್ಲೆಯರ್ ಆಗಿ ಕೆಲಸ ಮಾಡುತ್ತಿದ್ದ.ಸ್ಥಳಕ್ಕೆ ಬಾಗೇಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.