ಕೊಪ್ಪಳ : ಹಿಂದೂ ದಾರ್ಮಿಕ ದತ್ತಿ ಇಲಾಖೆಯ ಶ್ರೀ ಹುಲಿಗೆಮ್ಮದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಮಾಂಗಲ್ಯ ಭಾಗ್ಯ ಯೋಜನೆಯ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಮಾರ್ಚ 2 ರಂದು ರವಿವಾರ ಪೂರ್ವಾಹ್ನ 12 ಗಂಟೆಗೆ ಶ್ರೀಕ್ಷೇತ್ರ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತರಿರುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ, ಹುಲಿಗಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ನೀಲಮ್ಮ ಗವಿಸಿದ್ದಪ್ಪ ಗುಂಗಾಡಿ ಅವರು ಪಾಲ್ಗೊಳ್ಳುವರು. ವಿಶೇಷ ಆಹ್ವಾನಿತರಾಗಿ ಕಂದಾಯ ಇಲಾಖೆ (ಧಾರ್ಮಿಕ ದತ್ತಿ ಇಲಾಖೆ) ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ್ ಕುಮಾರ್ ಕಟಾರಿಯಾ, ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ಡಾ. ಎಂ.ವಿ.ವೆಂಕಟೇಶ, ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಭಾಗವಹಿಸುವರು ಎಂದು ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಯಂ.ಎಚ್.ಪ್ರಕಾಶರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.