ವಿಜಯಪುರ : ಪ್ರತಿ ವರ್ಷದಂತೆ ಈ ವರ್ಷವೂ ವಿಜಯಪುರ ಜಿಲ್ಲೆಯ ಸಾರವಾಡ ಬಳಿ ಇರುವ ಬಬಲಾದಿ ಸದಾಶಿವ ಮುತ್ಯಾ ಮಠದ ಪೀಠಾಧಿಪತಿ ಸಿದ್ದರಾಮಯ್ಯ ಹೊಳಿಮಠ ಕಾಲಜ್ಞಾನ ಭವಿಷ್ಯ ನುಡಿದ್ದಾರೆ. 2025 ನೇ ಸಾಲಿನ ಭವಿಷ್ಯ ವಾಣಿ ನುಡಿದಿದ್ದಾರೆ. ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡೆಯುವ ಸಂದರ್ಭದಲ್ಲೆ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆ ಆಗಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಹಾಗೂ ದೇಶದ ರಾಜಕೀಯ ಬಗ್ಗೆ ಅಚ್ಚರಿ ಭವಿಷ್ಯ ನುಡಿದಿದ್ದಾರೆ. ಕಲಿಯುಗದ ಆಟ ಸರ್ವನಾಶ ಹೊಂದುವ ಸಮಯ ಬಂದಿತು. ತಿಳಿಯಿರಣ್ಣ. Bಶಿಕ್ಷಣ ಕ್ಷೇತ್ರದಲ್ಲಿ ಹೊಸ ತಿರುವು ಆಗುತ್ತದೆ. ಹಣದ ಹಿಂದೆ ಹೋಗುವವರ ಬಂಧುತ್ವ ಸಮಯ ತಿಳಿಯಿರಣ್ಣ. ಈ ವರ್ಷ ವಿದ್ಯುತ್ ಶಕ್ತಿ ಹಾಗೂ ನೀರಿನ ಕೊರತೆ ಬಹಳ ಆಗುತ್ತದೆ ಎಂದು ಬರದ ಮುನ್ಸೂಚನೆ ನೀಡಿದ ಸದಾಶಿವ ಮುತ್ಯಾನ ಕಾಲಜ್ಞಾನ ಭವಿಷ್ಯ.
ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆ ಆಗುತ್ತದೆ ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೆ ಅಚ್ಚರಿಯ ಭವಿಷ್ಯವಾಣಿ ನುಡಿದಿದ್ದಾರೆ. ಭೂಕಂಪ, ಅಗ್ನಿ ದುರಂತಗಳು ಸಹ ಜಾಸ್ತಿ ಆಗುತ್ತವೆ. ಧರ್ಮ ಧರ್ಮಗಳ ನಡುವೆ ಕಿತ್ತಾಟ ಹೆಚ್ಚಾಗುತ್ತದೆ. ಈ ವರ್ಷದಲ್ಲಿ ಮಾನವೀಯತೆ ಮನುಷ್ಯತ್ವದ ಹೊಸ ಸಂಚಲನ ಮೂಡುತ್ತದೆ. ಎಂದು 2025 ನೇ ಸಾಲಿನ ಭವಿಷ್ಯ ವಾಣಿ ನುಡಿದಿದ್ದಾರೆ. ಬಬಲಾದಿ ಮಠದ ಸದಾಶಿವ ಮುತ್ಯ ಕಾಲಜ್ಞಾನ ಭವಿಷ್ಯ ಬೆಂಕಿ ಬಬಲಾದಿ ಸದಾಶಿವ ಮುತ್ಯಾನ ಮಠ ಪ್ರಸಿದ್ಧಿಯಾಗಿದೆ. ಪ್ರತಿ ವರ್ಷ ಶಿವರಾತ್ರಿ ಅಮಾವಾಸ್ಯೆಯ ದಿನ ಇಲ್ಲಿ ಜಾತ್ರೆ ಆರಂಭವಾಗುತ್ತದೆ. ಅಮಾವಾಸ್ಯೆ ಬಳಿಕ ಶುಭಾಶಯಗಳು ಮುತ್ಯಾನ ಕಾಲ ನುಡಿಯಲಾಗುತ್ತದೆ.