ಶಿವಮೊಗ್ಗ : ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ಸ್ ಫಲಾನುಭವಿಗಳಿಗೆ ಮಾರ್ಚ್ ತಿಂಗಳಿನಲ್ಲಿ ಫೆಬ್ರವರಿ ಮತ್ತು ಮಾರ್ಚ್ ಎರಡು ತಿಂಗಳನದು ಸೇರಿಸಿ 10 ಕೇಜಿ ಹೆಚ್ಚುವರಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.
ಈ ಕುರಿತು ಸಚಿವರು ಮಾಹಿತಿ ನೀಡಿದ್ದು, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಮಾರ್ಚ್ ತಿಂಗಳಿನಲ್ಲಿ ಫೆಬ್ರವರಿ ಮತ್ತು ಮಾರ್ಚ್ ಎರಡು ತಿಂಗಳನದು ಸೇರಿಸಿ ಅಕ್ಕಿ ಕೊಡುತ್ತೇವೆ ರಾಜ್ಯದಲ್ಲಿ 2.90 ಲಕ್ಷ ಪಡಿತರ ಕಾರ್ಡ್ಗಳನ್ನು ಪರೀಕ್ಷರಣೆ ಮಾಡಲಾಗಿದ್ದು, ಆ ಪೈಕಿ 1.65 ಲಕ್ಷಕ್ಕೂ ಹೆಚ್ಚು ಎಪಿಎಲ್ ಕಾರ್ಡ್ಗಳನ್ನು ಬಿಪಿಎಲ್ಗೆ ಸೇರಿಸಲಾಗಿದೆ. ಉಳಿದ ಕಾರ್ಡ್ ಗಳನ್ನು ಎಪಿಎಲ್ನಲ್ಲಿ ಇಟ್ಟಿದ್ದೇವೆ ಎಂದರು. 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿತ್ತು. ಆಗ ಕೇಂದ್ರ ಸರ್ಕಾರ ಮತ್ತು ಪುಡ್ ಕಾರ್ಪೊರೇಷನ್ ಅಕ್ಕಿ ಕೊಡಲಿಲ್ಲ. ಇದೀಗ ಅಕ್ಕಿ ಕೊಡುವುದಾಗಿ ಮುಂದೆ ಬಂದಿದ್ದಾರೆ. ಹೀಗಾಗಿ ಫೆಬ್ರವರಿ ತಿಂಗಳಿನಿಂದಲೇ ಹಣದ ಬದಲು ಅಕ್ಕಿ ವಿತರಣೆ ಮಾಡುತ್ತೇವೆ ಎಂದು ತಿಳಿಸಿದರು.