ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಇನ್ನೂ ಎರಡು ದಿನ ಉಷ್ಣ ಮಾರುತ ಎಚ್ಚರಿಕೆ ನೀಡಲಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಉಷ್ಣ ಮಾರುತ ಎಚ್ಚರಿಕೆ ನೀಡಲಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ತಾಪ ದಿಂದ ಇನ್ನೂ ಎರಡು ದಿನ ಉಷ್ಣ ಅಲೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನೂಚನೆ ನೀಡಿದೆ.
ಬಿಸಿಲ ತಾಪ ಹೆಚ್ಚಾಗುತ್ತಿರು ವುದರಿಂದ ಗರಿಷ್ಠ ಉಷ್ಣಾಂಶ ದಲ್ಲಿ ಹೆಚ್ಚಳವಾಗುತ್ತಿದೆ. 4 -5 ದಿನಗಳಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿಉಷ್ಣ ಅಲೆ ಭೀತಿ ಇದ್ದು, ಎರಡು ದಿನ ಇದೇ ಸ್ಥಿತಿ ಇರಲಿದೆ ಎಂದಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಅತಿ ಹೆಚ್ಚು 38.2 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇದು ವಾಡಿಕೆ ಪ್ರಮಾಣಕ್ಕಿಂತ 4.8 ಡಿ.ಸೆ. ಹೆಚ್ಚಾಗಿದೆ. ಹೊನ್ನಾವರ ದಲ್ಲಿಯೂ 36.6 ಡಿ.ಸೆ. ಗರಿಷ್ಠ ಉಷ್ಣಾಂಶ (ವಾಡಿಕೆಗಿಂತ 3.9 ಹೆಚ್ಚು) ದಾಖಲಾಗಿದೆ. ಮಂಗಳೂರಿನಲ್ಲಿ ಗರಿಷ್ಠ 36.3 ಡಿ.ಸೆ. (ವಾಡಿಕೆಗಿಂತ 2.4 ಹೆಚ್ಚು). ಪಣಂಬೂ ರಿನಲ್ಲಿ 36.7 ಡಿ.ಸೆ. ಗರಿಷ್ಠ ಉಷ್ಣಾಂಶ (3.4 ಡಿ.ಸೆ ಹೆಚ್ಚು) ದಾಖಲಾಗಿದೆ.
ತೀವ್ರ ಬಿಸಿಲಿನ ತಾಪದ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ 3 ಗಂಟೆ ನಡುವೆ ಬಿಸಿಲಿಗೆ ಹೋಗುವುದು ತಪ್ಪಿ ಸಬೇಕು. ಹಗುರವಾದ, ತಿಳಿ ಬಣ್ಣದ, ಸಡಿಲ ಹತ್ತಿಯ ಬಟ್ಟೆ ಧರಿಸಿ, ತಲೆ ಮುಚ್ಚಿ ಕೊಳ್ಳುವಂತೆ ಟೋಪಿ, ಬಟ್ಟೆ, ಛತ್ರಿ ಬಳಕೆ ಮಾಡುವಂತೆ ಸಲಹೆ ನೀಡಿದೆ.