ಬೆಂಗಳೂರು : ರಾಜ್ಯದ ನಿವೃತ್ತ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದ್ದು, ಪ್ರಸ್ತಕ ಸರ್ಕಾರದಿಂದ ಸಾರ್ವಜನಿಕರಿಗೆ / ಹಿರಿಯ ನಾಗರೀಕರಿಗೆ ಆರೋಗ್ಯ ಭಾಗ್ಯ ಯೋಜನೆ (Pradhan Manthri Jan Arogya Yojana – PM JAY) ಮತ್ತು ಆರೋಗ್ಯ ಕರ್ನಾಟಕ ಯೋಜನೆಯು ಜಾರಿಯಲ್ಲಿದ್ದು, ಇಲಾಖೆಯ ನಿವೃತ್ತ ನೌಕರರು ಮತ್ತು ಕುಟುಂಬದವರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದ್ದು, ಎಲ್ಲಾ ಇಲಾಖೆಗಳು ಪ್ರತ್ಯೇಕವಾಗಿ ಆರೋಗ್ಯ ಭಾಗ್ಯ ಯೋಜನೆಯನ್ನು ಜಾರಿಗೊಳಿಸುವ ಅವಶ್ಯಕತೆ ಇರುವುದಿಲ್ಲವೆಂದು ನಿರ್ದೇಶಿಸಲಾಗಿದೆ.