ಬೆಂಗಳೂರು : ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಆರಂಭಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯಪಾಲರಾದಂತಹ ಥಾವರ್ ಚಂದ್ ಗೆಹ್ಲೊಟ್ ಅವರು, ಜಂಟಿ ಅಧಿವೇಶನದ ಕುರಿತು ಭಾಷಣ ಮಾಡಿದರು ಈ ವೇಳೆ ರಾಜ್ಯ ಸರ್ಕಾರ ಜಿಎಸ್ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನದ ಕುರಿತು ರಾಜ್ಯಪಾಲರು ಭಾಷಣ ಆರಂಭಿಸಿದರು. ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ. ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್ಟಿ ಸಂಗ್ರಹದಲ್ಲೂ ರಾಜ್ಯ ಮಂಚೂಣಿಯಲ್ಲಿದೆ ಎಂದು ತಿಳಿಸಿದರು.
ಉತ್ತಮ ಮಳೆಯಿಂದಾಗಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ನಮ್ಮ ಸರ್ಕಾರ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದೆ. ರಾಜ್ಯದ ಆಯವ್ಯಯ ವರದಿಯಾಗುತ್ತಿದೆ ರಾಜ್ಯದಲ್ಲಿ ಉತ್ತಮವಳಿಯಾಗಿದ್ದರಿಂದ ಉತ್ತಮ ಬೆಳೆ ಬಂದಿದೆ. ರಾಜ ಸರ್ಕಾರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಅನುಕೂಲವಾಗಿದೆ ರೈತರ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಹಿಂದುಳಿದ ವರ್ಗಗಳಿಗೆ ಸಬ್ಸಿಡಿ ಇಂದ ಕುಟುಂಬಗಳಿಗೆ ಲಾಭವಾಗಿದೆ. ಆರ್ಥಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಯ್ ಉದಯ ಆಗಿದೆ ಅಲ್ಲದೆ ಕತ್ತಲಿನಲ್ಲಿ ಇರುವವರಿಗೆ ಬೆಳಕು ತೋರಿಸುವ ಕೆಲಸ ಆಗಿದೆ ಎಂದು ತಿಳಿಸಿದರು.