ಲಕ್ನೋ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಲಕ್ನೋ ನ್ಯಾಯಾಲಯ 200 ರೂಪಾಯಿ ದಂಡ ವಿಧಿಸಿದೆ. ವಿನಾಯಕ್ ದಾಮೋದರ್ ಸಾವರ್ಕರ್ ಕುರಿತ ಹೇಳಿಕೆಯಿಂದಾಗಿ ಉದ್ಭವಿಸಿದ ಪ್ರಕರಣದ ವಿಚಾರಣೆಯ ಸಮಯದಲ್ಲಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ. ಏಪ್ರಿಲ್ 14 ರಂದು ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಏಪ್ರಿಲ್ 14 ರಂದು ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಅಕೋಲಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ವೀರ್ ಸಾವರ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರು ಸಾವರ್ಕರ್ ಅವರನ್ನು ಬ್ರಿಟಿಷ್ ಸೇವಕ ಮತ್ತು ಪಿಂಚಣಿದಾರ ಎಂದು ಕರೆದಿದ್ದರು. ರಾಹುಲ್ ಗಾಂಧಿ ಅವರ ಈ ಹೇಳಿಕೆಯ ವಿರುದ್ಧ ಅರ್ಜಿದಾರರಾದ ನೃಪೇಂದ್ರ ಪಾಂಡೆ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರವಾಗಿ ವಕೀಲ ಪ್ರಾಂಶು ಅಗರ್ವಾಲ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅವರು ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರು. ಲಕ್ನೋದ ಎಸಿಜೆಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.
ಪದೇ ಪದೇ ಸಮನ್ಸ್ ನೀಡಿದ್ದರೂ ರಾಹುಲ್ ಗಾಂಧಿ ಹಾಜರಾಗಿಲ್ಲ ಎಂದು ವಕೀಲ ನೃಪೇಂದ್ರ ಪಾಂಡೆ ನ್ಯಾಯಾಲಯಕ್ಕೆ ತಿಳಿಸಿದರು. ನ್ಯಾಯಾಲಯವು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳೋ ಸಾಧ್ಯತೆ ಇದೆ.
BREAKING: ಮಂಗಳೂರು ಕಾರಾಗೃಹದಲ್ಲಿನ 40ಕ್ಕೂ ಹೆಚ್ಚು ಖೈದಿಗಳಿಗೆ ಪುಡ್ ಪಾಯಿಸನ್: ಹೊಟ್ಟೆ ನೋವಿನಿಂದ ನರಳಾಟ
BREAKING: ಸಭಾಪತಿ ಬಸವರಾಜ ಹೊರಟ್ಟಿ ತೋಟದ ಪಕ್ಕದಲ್ಲೇ ‘ನಕಲಿ ಮದ್ಯ’ ತಯಾರಿಕೆ: ಇಬ್ಬರು ಅರೆಸ್ಟ್