Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT : `ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : `14967’ ಬೋಧಕ, ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

15/11/2025 1:52 PM

ದಕ್ಷಿಣಕನ್ನಡ : ವಿಚಾರಣೆಯ ವೇಳೆ ಬಾಲಕ ಸೇರಿ ಮೂವರ ಮೇಲೆ ಇನ್ಸ್ಪೆಕ್ಟರ್ ಹಲ್ಲೆ : ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

15/11/2025 1:46 PM

solar Eclipse : ಮುಂದಿನ ಸೂರ್ಯಗ್ರಹಣ ಯಾವಾಗ ಸಂಭವಿಸುತ್ತದೆ? ಇಲ್ಲಿದೆ ವಿವರ

15/11/2025 1:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಜನೆವರಿ, ಫೆಬ್ರವರಿ ತಿಂಗಳ ‘ಗೃಹಲಕ್ಷ್ಮೀ’ ಹಣ ಸದ್ಯದಲ್ಲೇ ಖಾತೆಗೆ ಜಮೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌
KARNATAKA

GOOD NEWS : ಜನೆವರಿ, ಫೆಬ್ರವರಿ ತಿಂಗಳ ‘ಗೃಹಲಕ್ಷ್ಮೀ’ ಹಣ ಸದ್ಯದಲ್ಲೇ ಖಾತೆಗೆ ಜಮೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

By kannadanewsnow0507/03/2025 2:04 PM

ಬೆಂಗಳೂರು : ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಖಾತೆಗೆ ಬಂದಿಲ್ಲ ಎಂದು ರಾಜ್ಯದ ಯಜಮಾನಿಯರು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಒಂದು ತಿಂಗಳ ಗೃಹಲಕ್ಷ್ಮಿ ಹಣ ಖಾತಿಗೆ ಜಮೆ ಆಗಿತ್ತು. ಇದೀಗ ಗೃಹಲಕ್ಷ್ಮೀ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ, ಜನೆವರಿ ಮತ್ತು ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರ ಖಾತೆಗೆ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆಯು ಸದ್ಯ ಈಗ ಯಾವ ರೀತಿ ನಡೆದುಕೊಂಡು ಹೋಗುತ್ತಿದೆಯೇ; ಹಾಗೆಯೇ ಮುಂದುವರೆದುಕೊಂಡು ಹೋಗಲಿದೆ; ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಅನುದಾನ ಸರಿಯಾಗಿ ಸದ್ಭಳಕೆ

ಕೆಲವೊಂದು ಇಲಾಖೆಗಳಲ್ಲಿ ಕಳೆದ ಬಜೆಟ್‌ ನಲ್ಲಿ ನೀಡಿದ ಹಣವೇ ಖರ್ಚಾಗುತ್ತಿಲ್ಲವೆಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ನನ್ನ ಇಲಾಖೆ ಇಷ್ಟು ವರ್ಷ ಬೇರೆ ರೀತಿಯಲ್ಲಿ ಇತ್ತು. ಆದರೆ, ಈಗ ಬಹುದೊಡ್ಡ ಗಾತ್ರದ ಬಜೆಟ್‌ನ್ನು ಒಳಗೊಂಡಂತಹ ಇಲಾಖೆಯಾಗಿದೆ. ಅದರಲ್ಲೂ ಗೃಹಲಕ್ಷ್ಮೀ ಯೋಜನೆ ಬಂದಿರುವುದರಿಂದ ಒಂದು ವರ್ಷಕ್ಕೆ ಸುಮಾರು ೩೨ ಸಾವಿರ ಕೋಟಿ ರೂಪಾಯಿಯಷ್ಟು ಹಣವನ್ನು ಗೃಹಲಕ್ಷ್ಮೀಯವರಿಗೆ ನೀಡಲಾಗುತ್ತಿದೆ. ನಮ್ಮ ಇಲಾಖೆಗೆ ನೀಡಿದ ಅನುದಾನ ಪೈಕಿ ಯಾವುದೇ ಅನುದಾನ ಉಳಿದಿಲ್ಲ. ಎಲ್ಲವೂ ಸರಿಯಾದ ರೀತಿಯಲ್ಲಿ ಖರ್ಚಾಗಿದೆ. ಶೇಕಡ ೧೦ರಷ್ಟು ಮಾತ್ರ ಅನುದಾನ ಮಿಕ್ಕಿರಬಹುದು. ಅದು ಕೂಡ ಮಾರ್ಚ್‌ ೩೧ರೊಳಗೆ ಖರ್ಚಾಗಲಿದೆ ಎಂದು ಸಚಿವರು ಹೇಳಿದರು.

ಸದ್ಯದಲ್ಲೇ ಜನವರಿ, ಫೆಬ್ರವರಿಯದು ಕ್ಲಿಯರ್‌

ಗೃಹಲಕ್ಷ್ಮೀ ಹಣ ಎರಡ್ಮೂರು ತಿಂಗಳಿಗೊಮ್ಮೆ ಬರುತ್ತದೆ ಎನ್ನುವುದು ತಪ್ಪು. ಸರ್ಕಾರ ಬಹುದೊಡ್ಡ ಯೋಜನೆ ಮಾಡಿದೆ. ನವೆಂಬರ್‌, ಡಿಸೆಂಬರ್‌ ತಿಂಗಳ ಹಣ ಕ್ಲೀಯರ್‌ ಆಗಿದೆ. ಜನವರಿ, ಫೆಬ್ರವರಿ ಸದ್ಯದಲ್ಲೇ ಕ್ಲಿಯರ್‌ ಆಗಲಿದೆ. ಹತ್ತ-ಹದಿನೈದು ದಿನ ಹೆಚ್ಚುಕಡಿಮೆ ಆಗಬಹುದೇನೋ ವಿನಃ ಯಾವುದೇ ಕಾರಣಕ್ಕೂ ಕ್ಲಿಯರ್‌ ಆಗದೇ ಉಳಿಯುವುದಿಲ್ಲ ಎಂದು ಹೇಳಿದರು.

 ಮಹಾರಾಷ್ಟ್ರದಲ್ಲಿ ಯೋಜನೆ ಸ್ಥಬ್ಧ

ನಮ್ಮ ನೆರೆಯ ಮಹಾರಾಷ್ಟ್ರ ರಾಜ್ಯವನ್ನು ನೋಡಿ, ಅಲ್ಲಿ ಚುನಾವಣೆಗೆ ಮುನ್ನ ಎರಡು ತಿಂಗಳ ದುಡ್ಡನ್ನು ಹಾಕಿದರು. ಅಲ್ಲಿನ ʻಮಾಝಿ ಲಡಕಿ ಬಹಿನ್‌ʼ ಯೋಜನೆಗೆ ಹಣನೇ ಇಲ್ಲ. ಇಲ್ಲಿ ನಮ್ಮನ್ನು ಮಾತ್ರ ಬಿಜೆಪಿಯವರು ದೊಡ್ಡದಾಗಿ ಪ್ರಶ್ನೆ ಮಾಡುತ್ತಾರೆಂದು ಖಾರವಾಗಿ ಹೇಳಿದ ಸಚಿವರು, ನಮ್ಮ ಕರ್ನಾಟಕದಲ್ಲೇ ಗೃಹಲಕ್ಷ್ಮೀ ಹಣ ಸರಿಯಾಗಿ ತಲುಪಿಸುತ್ತಿರುವುದು. ಅದೇ ಮಹಾರಾಷ್ಟ್ರದಲ್ಲಿ ಚುನಾವಣೆಗಿಂತ ಮುಂಚೆ ಅಷ್ಟೇ ಹಾಕಿದ್ದರು. ಆದರೆ, ಚುನಾವಣೆ ನಂತರ ಯೋಜನೆ ಜಾರಿಗೊಳ್ಳದೆ ನಿಂತಿದೆ ಎಂದರು.

 ಸಿಎಂ ಅವರಿಗೆ ಅಭಿನಂದನೆ

ಸಿಎಂ ಸಿದ್ದರಾಮಯ್ಯನವರದು ಇದು ಕೊನೆಯ ಬಜೆಟ್‌ ಎಂದೆಲ್ಲ ಬಿಜೆಪಿಯವರು ಹೇಳುತ್ತಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನಂತೂ ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುತ್ತೇನೆ; ೧೬ನೇ ದಾಖಲೆ ಬಜೆಟ್‌ ಮಂಡಿಸಿದ್ದಾರೆ. ಕರ್ನಾಟಕದಲ್ಲಿ ಎಲ್ಲರನ್ನೂ ಒಳಗೊಂಡ ಸಮಗ್ರವಾದ ಬಜೆಟ್‌ ಮಾಡುತ್ತಿರುವುದು ವಿಶೇಷ ಎಂದು ಸಚಿವರು ತಿಳಿಸಿದರು.

ಎಲ್ಲವೂ ಹೈಕಮಾಂಡ್‌ ತೀರ್ಮಾನ

ಸದ್ಯದಲ್ಲೇ ಸಂಪುಟ ಪುನರ್‌ ರಚನೆ ಆಗಲಿದೆ; ಇದು ಕೆಲ ಸಚಿವರಿಗೆ ಕೊನೆಯ ಬಜೆಟ್‌ ಎಂದೆಲ್ಲ ಹೇಳುತ್ತಿದ್ದಾರೆಂಬ ಸುದ್ದಿಗಾರರ ಪ್ರಶ್ನೆಗೆ ಸಚಿವರು, ಈವೊಂದು ಒಳ್ಳೆಯ ಸಂದರ್ಭದಲ್ಲಿ ಏನನ್ನೂ ಮಾತನಾಡಲು ಹೋಗುವುದಿಲ್ಲ. ಏಕೆಂದರೆ, ನಮ್ಮ ಕಾಂಗ್ರೆಸ್‌ ಪಕ್ಷದಲ್ಲಿ ಒಂದು ಶಿಸ್ತು ಇದೆ. ಏನೇ ಚರ್ಚೆ, ತೀರ್ಮಾನಗಳಿದ್ದರೂ ಅದನ್ನು ಹೈಕಮಾಂಡ್‌ ಮಾಡುತ್ತದೆ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

ದಕ್ಷಿಣಕನ್ನಡ : ವಿಚಾರಣೆಯ ವೇಳೆ ಬಾಲಕ ಸೇರಿ ಮೂವರ ಮೇಲೆ ಇನ್ಸ್ಪೆಕ್ಟರ್ ಹಲ್ಲೆ : ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

15/11/2025 1:46 PM1 Min Read

ಬೆಳಗಾವಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಅಮೆರಿಕ ನಾಗರಿಕರನ್ನು ವಂಚಿಸುತಿದ್ದ 33 ಸೈಬರ್ ವಂಚಕರು ಅರೆಸ್ಟ್!

15/11/2025 1:31 PM1 Min Read

BREAKING : ಮಂಗಳೂರಲ್ಲಿ ಟ್ಯಾಂಕರ್, ಕಾರು, ಆಟೋ ಮಧ್ಯ ಸರಣಿ ಅಪಘಾತ : ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವು!

15/11/2025 1:19 PM1 Min Read
Recent News

JOB ALERT : `ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : `14967’ ಬೋಧಕ, ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

15/11/2025 1:52 PM

ದಕ್ಷಿಣಕನ್ನಡ : ವಿಚಾರಣೆಯ ವೇಳೆ ಬಾಲಕ ಸೇರಿ ಮೂವರ ಮೇಲೆ ಇನ್ಸ್ಪೆಕ್ಟರ್ ಹಲ್ಲೆ : ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

15/11/2025 1:46 PM

solar Eclipse : ಮುಂದಿನ ಸೂರ್ಯಗ್ರಹಣ ಯಾವಾಗ ಸಂಭವಿಸುತ್ತದೆ? ಇಲ್ಲಿದೆ ವಿವರ

15/11/2025 1:34 PM

ಬೆಳಗಾವಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಅಮೆರಿಕ ನಾಗರಿಕರನ್ನು ವಂಚಿಸುತಿದ್ದ 33 ಸೈಬರ್ ವಂಚಕರು ಅರೆಸ್ಟ್!

15/11/2025 1:31 PM
State News
KARNATAKA

ದಕ್ಷಿಣಕನ್ನಡ : ವಿಚಾರಣೆಯ ವೇಳೆ ಬಾಲಕ ಸೇರಿ ಮೂವರ ಮೇಲೆ ಇನ್ಸ್ಪೆಕ್ಟರ್ ಹಲ್ಲೆ : ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

By kannadanewsnow0515/11/2025 1:46 PM KARNATAKA 1 Min Read

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ತಾಲೂಕಿನ ಪೊಲೀಸ್ ಠಾಣೆಯಲ್ಲಿ, ವಿಚಾರಣೆಯ ವೇಳೆ ಮೂವರ ಮೇಲೆ ಇನ್ಸ್ಪೆಕ್ಟರ್ ಹಲ್ಲೆ…

ಬೆಳಗಾವಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಅಮೆರಿಕ ನಾಗರಿಕರನ್ನು ವಂಚಿಸುತಿದ್ದ 33 ಸೈಬರ್ ವಂಚಕರು ಅರೆಸ್ಟ್!

15/11/2025 1:31 PM

BREAKING : ಮಂಗಳೂರಲ್ಲಿ ಟ್ಯಾಂಕರ್, ಕಾರು, ಆಟೋ ಮಧ್ಯ ಸರಣಿ ಅಪಘಾತ : ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವು!

15/11/2025 1:19 PM

BREAKING : ಬೆಳಗಾವಿ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 28 `ಕೃಷ್ಣ ಮೃಗಗಳ’ ನಿಗೂಢ ಸಾವು : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

15/11/2025 1:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.