Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇ.21ರಂದು ವಿಧಾನಸೌಧದ ಮುಂದೆ ಆಂಧ್ರಕ್ಕೆ ಆನೆಗಳ ಹಸ್ತಾಂತರ: ಸಚಿವ ಈಶ್ವರ್ ಖಂಡ್ರೆ

18/05/2025 2:48 PM

ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ: HDK ವ್ಯಂಗ್ಯ

18/05/2025 2:42 PM

BREAKING : ರಾತ್ರೋ ರಾತ್ರಿ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ದಂಪತಿಗಳಿಂದ ದಾಳಿ : 6 ಜನ ಅರೆಸ್ಟ್!

18/05/2025 2:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ದರಾಮಯ್ಯ 4 ಲಕ್ಷ ಕೋಟಿ ಬಜೆಟ್ ನಲ್ಲಿ ಎಲ್ಲ ವರ್ಗಕ್ಕೂ ಸಮಾನವಾಗಿ ಅನುದಾನ ಹಂಚಿಕೆ: ಡಿಕೆಶಿ
KARNATAKA

ಸಿಎಂ ಸಿದ್ದರಾಮಯ್ಯ 4 ಲಕ್ಷ ಕೋಟಿ ಬಜೆಟ್ ನಲ್ಲಿ ಎಲ್ಲ ವರ್ಗಕ್ಕೂ ಸಮಾನವಾಗಿ ಅನುದಾನ ಹಂಚಿಕೆ: ಡಿಕೆಶಿ

By kannadanewsnow0908/03/2025 3:21 PM

ಕಲಬುರಗಿ: “ಸಿಎಂ ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತದ ಐತಿಹಾಸಿಕ ಬಜೆಟ್ ಮಂಡನೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೂ ಸಮತೋಲನವಾಗಿ ಅನುದಾನ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕಲಬುರಗಿಯಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶನಿವಾರ ಮಾತನಾಡಿದರು. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ. ಅಜಯ್ ಸಿಂಗ್ ಅವರು ಉಪಸ್ಥಿತರಿದ್ದರು.

“ಹೆಣ್ಣು ಕುಟುಂಬದ ಕಣ್ಣು ಎಂದು ಭಾವಿಸಿ ಮಹಿಳೆಯರಿಗೆ ಹೆಚ್ಚು ಶಕ್ತಿ ತುಂಬಬೇಕು ಎಂಬ ಉದ್ದೇಶದಿಂದ ನಾವು ಅನೇಕ ಕಾರ್ಯಕ್ರಮಗಳನ್ನು ನೋಡಿದ್ದೇವೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರ ಬದುಕಿನಲ್ಲಿ ಪ್ರೋತ್ಸಾಹ ನೀಡುವ ಪ್ರಯತ್ನ ಮಾಡಿದ್ದೇವೆ. ಚುನಾವಣೆಗೂ ಮುನ್ನ ನಾವು ಕೊಟ್ಟ ಮಾತಿನಂತೆ ಪ್ರತಿ ವರ್ಷ 5 ಸಾವಿರ ಕೋಟಿ ಕೊಡುತ್ತಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೆವು. ಈ ವರ್ಷವೂ ಕೊಟ್ಟಿದ್ದೇವೆ. ಇಂದು ಜೇವರ್ಗಿಯಲ್ಲಿ 1 ಸಾವಿರ ಕೋಟಿ ಮೊತ್ತದ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು. ನೀರಾವರಿ ಯೋಜನೆ ಮೂಲಕ ಶಕ್ತಿ ತುಂಬಲು 27 ಸಾವಿರ ಕೋಟಿ ಹಣವನ್ನು ಮೀಸಲಿಡಲಾಗಿದೆ” ಎಂದು ತಿಳಿಸಿದರು.

“ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದಂತೆ ತುಂಗಭದ್ರಾ ಅಣೆಕಟ್ಟಿನಿಂದ ವ್ಯರ್ಥವಾಗುತ್ತಿರುವ 25-30 ಟಿಎಂಸಿ ನೀರನ್ನು ಉಳಿಸಿಕೊಳ್ಳಲು ಯೋಜನೆ ರೂಪಿಸುವ ಬಗ್ಗೆ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಸಿಎಂ ರೇವಂತ ರೆಡ್ಡಿ ಅವರ ಸಮಯ ಕೇಳಿದ್ದೇನೆ. ನವಲಿ ಅಣೆಕಟ್ಟು ಹಾಗೂ ಇದಕ್ಕೆ ಪರ್ಯಾಯವಾಗಿ ಮತ್ತೊಂದು ಯೋಜನೆಯನ್ನು ಪ್ರಸ್ತಾಪಿಸಲಾಗಿದೆ. ಇನ್ನು ಸಿಎಂ ತಾಂತ್ರಿಕ ಸಲಹೆಗಾರರಾದ ಕನ್ಹಯ್ಯ ನಾಯ್ಡು ಅವರ ಬಳಿಯು ನಮ್ಮ ಅಧಿಕಾರಿಗಳು ಚರ್ಚೆ ಮಾಡಲು ಸೂಚಿಸಿದ್ದೇವೆ” ಎಂದರು.

“ಆರೋಗ್ಯ ಇಲಾಖೆಯಿಂದ ಈ ಭಾಗದಲ್ಲಿ ಅನೇಕ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಕಟ್ಟಲು ಮುಂದಾಗಿದ್ದೇವೆ. ಇನ್ನು ದೇವಾಲಯದ ಅರ್ಚಕರಿಗೆ ನೀಡುವ ವೇತನ ಹೆಚ್ಚಿಸಿದ್ದೇವೆ. ಆದರೂ ಬಿಜೆಪಿಯವರು ಟೀಕೆ ಮಾಡುತ್ತಾರೆ. ಗ್ರಾಮೀಣ ಭಾಗದಲ್ಲಿ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇವೆ. ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ನಾವು ಬಜೆಟ್ ಮಂಡಿಸಿದ್ದೇವೆ” ಎಂದು ಹೇಳಿದರು..

ಮುಸಲ್ಮಾನರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವ ಬಗ್ಗೆ ಕೇಳಿದಾಗ, “ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಮುಸಲ್ಮಾನರಿಗೆ ಎದೆ ಸೀಳಿದರೆ ನಾಲ್ಕು ಅಕ್ಷರ ಇಲ್ಲ. ಪಂಚರ್ ಹಾಕಿಕೊಂಡು ಇರುತ್ತಾರೆ ಎಂದು ಹೇಳಿದ್ದರು. ಮುಸಲ್ಮಾನರಲ್ಲಿ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು ಇದ್ದಾರೆ ಎಂದು ಅವರಿಗೂ ಅರ್ಥವಾಗಬೇಕಲ್ಲವೇ. ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡಿರುವಂತೆ ಮುಸಲ್ಮಾನರಿಗೂ ಶೇ.4ರಷ್ಟು ಮೀಸಲಾತಿ ನೀಡಲಾಗಿದೆ. ಅವರಿಗೂ ಆದ್ಯತೆ ನೀಡಿ ಆರ್ಥಿಕ ಶಕ್ತಿ ತುಂಬಲು ಈ ನಿರ್ಧಾರ ಮಾಡಿದ್ದೇವೆ” ಎಂದು ತಿಳಿಸಿದರು.

ತೊಗರಿ ಬೆಳೆ ವಿಚಾರವಾಗಿ ಕೇಳಿದಾಗ, “ತೊಗರಿ ವಿಚಾರವಾಗಿ ಅರ್ಜಿ ಸಲ್ಲಿಸಿ ಸರ್ಕಾರದ ಗಮನ ಸೆಳೆದಿದ್ದಾರೆ. ನಾವು ತಾಂತ್ರಿಕ ಸಮಿತಿ, ಸಂಶೋಧನಾ ಕೇಂದ್ರದ ಬಗ್ಗೆ ಚರ್ಚೆ ಮಾಡಿದ್ದಾರೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಈ ವಿಚಾರವಾಗಿ ಜಾಗೃತರಾಗಿ ಈ ವಿಚಾರ ನೋಡಿಕೊಳ್ಳುತ್ತಿದ್ದಾರೆ. ನಮ್ಮ ಸರ್ಕಾರಕ್ಕೆ ರೈತರ ಬಗ್ಗೆ ವಿಶೇಷವಾದ ಕಾಳಜಿ ಇದೆ. ರೈತರ ಬದುಕನ್ನು ಉಳಿಸುತ್ತೇವೆ. ಅವರಿಗೆ ಬೆಂಬಲವಾಗಿ ನಿಲ್ಲುತ್ತೇವೆ. ತೊಗರಿ ಬೆಳೆಯ ಸಮಸ್ಯೆ ಬಗ್ಗೆ ಸಂಶೋಧನೆ ನಡೆಸಲಾಗುತ್ತಿದೆ” ಎಂದರು.

ಮುಸಲ್ಮಾನರಿಗೆ ಬೈಯೋದೆ ಪ್ರಹ್ಲಾದ್ ಜೋಷಿ ಕೆಲಸ:

ರಾಜ್ಯ ಬಜೆಟ್ ಮುಸಸ್ಮಾನರ ಬಜೆಟ್ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಟೀಕಿಸಿರುವ ಬಗ್ಗೆ ಕೇಳಿದಾಗ, “ಜೋಷಿ ಅವರಿಗೆ ಮುಸಲ್ಮಾನರನ್ನು ಬೈಯೋದೆ ಕೆಲಸ. ಅವರಿಗೆ ಇನ್ನೇನು ಮಾಡಲು ಸಾಧ್ಯ? ಬಿಜೆಪಿಯವರು ತಾವು ಹಿಂದೂ ತಾವು ಮಾತ್ರ ಮುಂದು ಎನ್ನುತ್ತಾರೆ. ಆದರೆ ನಾವುಗಳು ಆಗಲ್ಲ, ಹಿಂದೂ, ಮುಸ್ಲಿಂ, ಕ್ರೈಸ್ತ, ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟರು ಎಲ್ಲರೂ ಒಂದು ಎನ್ನುತ್ತೇವೆ. ಅವರಿಗೆ ಒಂದು ವರ್ಗದ ಜನ ಮಾತ್ರ ಬೇಕು. ನಮಗೆ ಎಲ್ಲ ವರ್ಗದ ಜನರೂ ಬೇಕು” ಎಂದು ತಿರುಗೇಟು ನೀಡಿದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕವಾಗಿ 5 ಸಾವಿರ ಕೋಟಿ ನೀಡಬೇಕಿತ್ತು. ಬೇರೆ ಯೋಜನೆಗಳನ್ನು ಕೆಕೆಆರ್ ಡಿಬಿಗೆ ಸೇರಿಸಲಾಗುತ್ತಿದೆ ಎಂದು ಕೇಳಿದಾಗ, “5 ಸಾವಿರ ಕೋಟಿ ನೀಡುತ್ತಿರುವುದು ಹೆಚ್ಚಿನ ಅನುದಾನ. ಇದರ ಜತೆಗೆ ಬೇರೆ ಯೋಜನೆಗಳಿಂದ ಏನು ಬರಬೇಕೋ ಅದು ಬರಲಿದೆ. ನಮ್ಮಲ್ಲಿ ಶಾಸಕರಿಗೆ 25% ಹಣ ಸಿಕ್ಕರೆ ಉಳಿದ 75% ಹಣ ಈ ಭಾಗದ ಶಾಸಕರಿಗೆ ಸಿಗುತ್ತಿದೆ” ಎಂದು ವಿವರಿಸಿದರು.

ಇನ್ನು ಅನೇಕ ಯೋಜನೆಗಳಿಗೆ ಮನಮೋಹನ್ ಸಿಂಗ್ ಅವರ ಹೆಸರು

ಇದಕ್ಕೂ ಮುನ್ನ ಶಿವಕುಮಾರ್ ಅವರು ಕಲಬುರಗಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಅವರ ಹೆಸರು ಇಟ್ಟಿರುವ ಬಗ್ಗೆ ಕೇಳಿದಾಗ, “ಮನಮೋಹನ್ ಸಿಂಗ್ ಅವರು ಮಾಜಿ ಪ್ರಧಾನಮಂತ್ರಿಗಳು ಹಾಗೂ ದೇಶ ಎಂದಿಗೂ ಮರೆಯಲು ಸಾಧ್ಯವಾಗದಂತಹ ನಾಯಕ. ನೆಹರೂ, ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ನಂತರ ದೇಶಕ್ಕೆ ಅಪಾರ ಕೊಡುಗೆ ನೀಡಿರುವ ಪ್ರಧಾನಿ ಮನಮೋಹನ್ ಸಿಂಗ್. ಅವರಿಗೆ ಮತ್ತೊಬ್ಬರು ಸಾಟಿಯಿಲ್ಲ. ದೇಶದಲ್ಲಿ ಕೋಟ್ಯಂತರ ಜನ ಹಸಿವಿನಿಂದ ದೂರವಿದ್ದರೆ ಅದಕ್ಕೆ ಕಾರಣ ಮನಮೋಹನ್ ಸಿಂಗ್ ಅವರ ಕೊಡುಗೆ. ಗ್ರಾಮೀಣ ಭಾಗದಲ್ಲಿ ಉದ್ಯೋಗ ಖಾತರೆ ಮೂಲಕ ಉದ್ಯೋಗ ಮಾಡುತ್ತಿದ್ದರೆ ಅದಕ್ಕೆ ಕಾರಣ ಮನಮೋಹನ್ ಸಿಂಗ್. ಸಂವಿಧಾನಿಕ ತಿದ್ದುಪಡಿ ತಂದು ದೇಶಕ್ಕೆ ಅವರು ಶಕ್ತಿ ತುಂಬಿದ್ದಾರೆ. ದೇಶದ ಆರ್ಥಿಕ ಶಕ್ತಿಯನ್ನು ಬಲಿಷ್ಠಗೊಳಿಸಿದ ನಾಯಕ. ಹೀಗಾಗಿ ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ಕೇವಲ ಬೆಂಗಳೂರು ವಿವಿಗೆ ಮಾತ್ರ ಅವರ ಹೆಸರನ್ನು ಸೀಮಿತವಾಗಿಸುವುದಿಲ್ಲ. ಮುಂಬರುವ ಅನೇಕ ಯೋಜನೆಗಳಿಗೆ ಅವರ ಹೆಸರನ್ನು ಇಡುತ್ತೇವೆ” ಎಂದು ತಿಳಿಸಿದರು.

BREAKING: ಬೆಂಗಳೂರಲ್ಲಿ ಕಂಪನಿ ಕಿರುಕುಳಕ್ಕೆ ಬೇಸತ್ತು ಕಟ್ಟಡದಿಂದ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಪುರುಷರಿಗಿಂತ ಮಹಿಳಾ ಹೂಡಿಕೆದಾರರು ಮೇಲುಗೈ ಸಾಧಿಸಿದ್ದಾರೆ: ವರದಿ | Mutual fund

Share. Facebook Twitter LinkedIn WhatsApp Email

Related Posts

ಮೇ.21ರಂದು ವಿಧಾನಸೌಧದ ಮುಂದೆ ಆಂಧ್ರಕ್ಕೆ ಆನೆಗಳ ಹಸ್ತಾಂತರ: ಸಚಿವ ಈಶ್ವರ್ ಖಂಡ್ರೆ

18/05/2025 2:48 PM2 Mins Read

ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ: HDK ವ್ಯಂಗ್ಯ

18/05/2025 2:42 PM1 Min Read

BREAKING : ರಾತ್ರೋ ರಾತ್ರಿ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ದಂಪತಿಗಳಿಂದ ದಾಳಿ : 6 ಜನ ಅರೆಸ್ಟ್!

18/05/2025 2:26 PM1 Min Read
Recent News

ಮೇ.21ರಂದು ವಿಧಾನಸೌಧದ ಮುಂದೆ ಆಂಧ್ರಕ್ಕೆ ಆನೆಗಳ ಹಸ್ತಾಂತರ: ಸಚಿವ ಈಶ್ವರ್ ಖಂಡ್ರೆ

18/05/2025 2:48 PM

ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ: HDK ವ್ಯಂಗ್ಯ

18/05/2025 2:42 PM

BREAKING : ರಾತ್ರೋ ರಾತ್ರಿ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ದಂಪತಿಗಳಿಂದ ದಾಳಿ : 6 ಜನ ಅರೆಸ್ಟ್!

18/05/2025 2:26 PM

ಎಷ್ಟು ಸಲ ಮದ್ಯದ ದರ ಹೆಚ್ಚಳ ಮಾಡ್ತೀರಿ.? ಎಣ್ಣೆ ಪ್ರಿಯರು ಪ್ರತಿಭಟನೆ ಮಾಡಲ್ಲ ಅಂತನಾ.?: ಆರ್ ಅಶೋಕ್ ಆಕ್ರೋಶ

18/05/2025 2:17 PM
State News
KARNATAKA

ಮೇ.21ರಂದು ವಿಧಾನಸೌಧದ ಮುಂದೆ ಆಂಧ್ರಕ್ಕೆ ಆನೆಗಳ ಹಸ್ತಾಂತರ: ಸಚಿವ ಈಶ್ವರ್ ಖಂಡ್ರೆ

By kannadanewsnow0918/05/2025 2:48 PM KARNATAKA 2 Mins Read

ಬೆಂಗಳೂರು: ನೆರೆಯ ಆಂಧ್ರಪ್ರದೇಶಕ್ಕೆ ಮೇ 21 ರಂದು ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದ್ದು, ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ…

ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ: HDK ವ್ಯಂಗ್ಯ

18/05/2025 2:42 PM

BREAKING : ರಾತ್ರೋ ರಾತ್ರಿ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ದಂಪತಿಗಳಿಂದ ದಾಳಿ : 6 ಜನ ಅರೆಸ್ಟ್!

18/05/2025 2:26 PM

ಎಷ್ಟು ಸಲ ಮದ್ಯದ ದರ ಹೆಚ್ಚಳ ಮಾಡ್ತೀರಿ.? ಎಣ್ಣೆ ಪ್ರಿಯರು ಪ್ರತಿಭಟನೆ ಮಾಡಲ್ಲ ಅಂತನಾ.?: ಆರ್ ಅಶೋಕ್ ಆಕ್ರೋಶ

18/05/2025 2:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.