Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
How-To-Pamper-Your-Hair-With-A-Hot-Oil-Massage-To-Prevent-Hair-Loss

Winter Hair Care Tips: ತಲೆ ಕೂದಲು ರಕ್ಷಣೆ: ಚಳಿಗಾಲದಲ್ಲಿ ಕೂದಲು ಉದುರದಂತೆ ಕಾಪಾಡುವ ಬೆಸ್ಟ್ Essential Oils

22/11/2025 2:00 PM

ಟ್ರಾವಿಸ್ ಸ್ಕಾಟ್ ಮುಂಬೈ ಸಂಗೀತ ಕಚೇರಿಯಲ್ಲಿ ಗೊಂದಲ: 18 ಲಕ್ಷ ಮೌಲ್ಯದ ಚಿನ್ನ ಕಳ್ಳತನ

22/11/2025 1:53 PM
Explosion in a car near the Red Fort in Delhi

5 ಲಕ್ಷಕ್ಕೆ ಖರೀದಿಸಿದ ಎಕೆ-47, ಡೀಪ್ ಫ್ರೀಜರ್ ನಲ್ಲಿ ಸ್ಫೋಟಕಗಳನ್ನು ಸಂಗ್ರಹ| ದೆಹಲಿ ಬಾಂಬ್ ಸ್ಫೋಟದ ಮಾಹಿತಿ ಬಹಿರಂಗ

22/11/2025 1:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹೊಳಲೂರು ಏತ ನೀರಾವರಿ ಉಳಿದ ಕಾಮಗಾರಿಗೆ ಶೀಘ್ರ ಕಾಯಕಲ್ಪ : ಎನ್.ಎಸ್.ಬೋಸರಾಜು
KARNATAKA

BIG NEWS : ಹೊಳಲೂರು ಏತ ನೀರಾವರಿ ಉಳಿದ ಕಾಮಗಾರಿಗೆ ಶೀಘ್ರ ಕಾಯಕಲ್ಪ : ಎನ್.ಎಸ್.ಬೋಸರಾಜು

By kannadanewsnow5711/03/2025 11:49 AM

ಶಿವಮೊಗ್ಗ : ಶಿವಮೊಗ್ಗ ಸಮೀಪದ ಹೊಳಲೂರು ಏತ ನೀರಾವರಿ ಉಳಿದ ಕಾಮಗಾರಿಯನ್ನು ಮುಂದಿನ ಮೂರು ತಿಂಗಳ ಅವಧಿಯಲ್ಲಿ ನೀರಾವರಿ ತಜ್ಞರ ಸಲಹೆಯ ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ರೈತಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್.ಬೋಸರಾಜು ಅವರು ಹೇಳಿದರು.

ಅವರು ಇಂದು ಶಿವಮೊಗ್ಗ ತಾಲೂಕಿನ ಹೊಳಲೂರು ಏತ ನೀರಾವರಿ ಯೋಜನಾ ಪ್ರದೇಶದ ವ್ಯಾಪ್ತಿಗೊಳಪಟ್ಟ ವಿವಿಧ ಸ್ಥಳಗಳಿಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಖುದ್ದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಈ ಕಾಮಗಾರಿ ಕೈಗೆತ್ತಿಕೊಳ್ಳುವ ಸಂಬಂಧ ಶೀಘ್ರದಲ್ಲಿ ಬೆಂಗಳೂರಿನಲ್ಲಿ ಸಂಬಂಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಅವರು ತಿಳಿಸಿದರು.

ಈಗಾಗಲೇ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾಪೂರ್ಯನಾಯ್ಕ್ಹಾಗೂ ಸ್ಥಳೀಯ ಮುಖಂಡರು ಅಪೂರ್ಣಗೊಂಡಿರುವ ಹಾಗೂ ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಈ ಏತ ನೀರಾವರಿ ಯೋಜನೆಯ ಪ್ರಾಥಮಿಕ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡಿದ್ದು, 2008ರಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ ಅಂದಿನ ಸರ್ಕಾರ ಸುಮಾರು 21ಕೋಟಿ ರೂ.ಗಳಿಗೆ ಅಧಿಕ ಮೊತ್ತ ವ್ಯಯ ಮಾಡಿರುವ ಬಗ್ಗೆ ಮಾಹಿತಿ ಇದೆ. ಈಗಿರುವ ಯಂತ್ರಗಳು ಹಾಗೂ ಅವುಗಳ ಸಾಮರ್ಥ್ಯದ ಬಗ್ಗೆಯೂ ಮಾಹಿತಿ ಪಡೆಯುವ ಅಗತ್ಯವಿದೆ ಎಂದ ಅವರು ಇಲ್ಲಿನ ಕಾಮಗಾರಿಯ ಕುರಿತು ಜನರಲ್ಲಿ ಸಾಕಷ್ಟು ದೂರುಗಳಿದ್ದು, ಅವುಗಳನ್ನು ಮುಂದಿನ ದಿನಗಳಲ್ಲಿ ಮಾಹಿತಿ ಪಡೆದು, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. ಅದಕ್ಕೂ ಮುನ್ನ ಸ್ಥಗಿತಗೊಂಡ ಕಾಮಗಾರಿಯನ್ನು ವ್ಯವಸ್ಥಿತವಾಗಿ ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಲು ಅಗತ್ಯವಿರುವ ಎಲ್ಲಾ ಸಾಧ್ಯತೆಗಳನ್ನು ಪರಿಶೀಲಿಸಲಾಗುವುದು. ಈಗಾಗಲೇ ಜಿಲ್ಲೆಗೆ ಹಿಂದಿನ ಭೇಟಿ ಸಂದರ್ಭದಲ್ಲಿ ಸೊರಬ ತಾಲೂಕಿನಲ್ಲಿ ಆರು ಏತ ನೀರಾವರಿ ಯೋಜನೆಗಳಿಗೆ ಚಾಲನೆ ನೀಡಿರುವುದಾಗಿ ಅವರು ತಿಳಿಸಿದರು.

ಹೊಳಲೂರಿನ ಪಂಪ್ಹೌಸ್ನಲ್ಲಿ ಮೂರು ಮೋಟಾರುಗಳು ಸಕ್ರಿಯವಾಗಿದ್ದು ಅದರಲ್ಲಿ ಎರಡು ಮೋಟಾರುಗಳು ಕಾರ್ಯನಿರ್ವಹಿಸುತ್ತಿವೆ. ಒಂದನ್ನು ಹೆಚ್ಚುವರಿಯಾಗಿ ಉಳಿಸಿಕೊಳ್ಳಲಾಗಿದೆ. ಮಳೆಗಾಲದಲ್ಲಿ ಮಳೆಯ ನೀರು ಊರೊಳಗೆ ಹಾಗೂ ಚಾನಲ್ನ ಸಮೀಪದಲ್ಲಿರುವ ಶಾಲೆಗೆ ನುಗ್ಗಿ ತೀವ್ರ ತರಹದ ಅಡಚಣೆ ಉಂಟು ಮಾಡುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಪಂಪ್ಹೌಸ್ನಿಂದ ಮೇಲೆತ್ತುವ ನೀರು ನಿರೀಕ್ಷೆಯಂತೆ ಸಣ್ಣ ಕೆರೆಗಳಿಗೆ ತಲುಪದಿರುವ ಬಗ್ಗೆ ಸಾರ್ವಜನಿಕರು ಗಮನಕ್ಕೆ ತಂದಿದ್ದಾರೆ. ಮೊದಲು ಇಲ್ಲಿನ ಒ೦ದು ಸಣ್ಣ ಕೆರೆಗೆ ನೀರನ್ನು ಭರ್ತಿಗೊಳಿಸಿ, ನಂತರ ಅಗತ್ಯತೆಗಳಿಗೆ ಬಳಸಬೇಕು ಎಂಬ ಅವರ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅವರ ಈ ಅಭಿಪ್ರಾಯವನ್ನು ಸಹ ಸಕಾಲದಲ್ಲಿ ಪರಿಶೀಲಿಸಿ ಸೂಕ್ತ ಕ್ರಮವಹಿಸಲಾಗುವುದು ಎಂದರು.

ಆಡಳಿತಾರೂಢ ಸರ್ಕಾರದ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮಂಡಿಸಿದ 16ನೇ ಜನಪ್ರಿಯ ಬಜೆಟ್ಇದಾಗಿದ್ದು, ರಾಜ್ಯದ ಜನಸಾಮಾನ್ಯರ ನೋವು-ನಲಿವುಗಳನ್ನು ತಿಳಿದು, ಎಲ್ಲ ವರ್ಗದ ಜನರ ಹಿತಕಾಪಾಡುವ ನಿಟ್ಟಿನಲ್ಲಿ ಜನಸ್ನೇಹಿಯಾಗಿದೆ. ಅನ್ನಭಾಗ್ಯ ಯೋಜನೆಯ ವ್ಯವಸ್ಥಿತ ಅನುಷ್ಠಾನಕ್ಕೆ ಅಗತ್ಯವಿರುವಷ್ಟು ಹಣಕಾಸನ್ನು ಕಾಯ್ದಿರಿಸಲಾಗಿದೆ. ಅಲ್ಲದೇ ಗ್ಯಾರೆಂಟಿ ಯೋಜನೆಯ ಲಾಭವನ್ನು ರಾಜ್ಯದ ಜನರು ಯಾವುದೇ ಮದ್ಯವರ್ತಿಗಳ ಪ್ರವೇಶವಿಲ್ಲದೇ ನೇರವಾಗಿ ಪಡೆದುಕೊಳ್ಳುತ್ತಿದ್ದಾರೆ ಎಂದರು.

ಈ ಭೇಟಿಯ ಸಂದರ್ಭದಲ್ಲಿ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್, ವಿಧಾನಪರಿಷತ್ಸದಸ್ಯೆ ಶ್ರೀಮತಿ ಬಲ್ಕಿಶ್ಬಾನು, ಮುಖಂಡ ಆಯನೂರು ಮಂಜುನಾಥ್ಸೇರಿದಂತೆ ಅಧಿಕಾರಿಗಳು, ಹೊಳಲೂರಿನ ಅನೇಕ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

BIG NEWS: Holalur Lift Irrigation remaining work to be completed soon: N.S. Bosaraju
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ `ಪಡಿತರ ಚೀಟಿ’ದಾರರಿಗೆ ಗುಡ್ ನ್ಯೂಸ್ : ಫೆಬ್ರವರಿಗೆ ‘ಇಂದಿರಾ ಕಿಟ್’ ಯೋಜನೆ ಜಾರಿ.!

22/11/2025 1:43 PM1 Min Read

ಬೆಂಗಳೂರಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ : ಆರೋಪಿ ಅರೆಸ್ಟ್

22/11/2025 1:27 PM1 Min Read

BREAKING : ಸಿಪಿ ಯೋಗೇಶ್ವರ್ ಗೆ ಬಿಗ್ ರಿಲೀಫ್ : ಮೆಗಾ ಸಿಟಿ ಪ್ರಾಜೆಕ್ಟ್‌ ಪ್ರಕರಣದಿಂದ ಖುಲಾಸೆಗೊಳಿಸಿದ ಕೋರ್ಟ್

22/11/2025 1:24 PM1 Min Read
Recent News
How-To-Pamper-Your-Hair-With-A-Hot-Oil-Massage-To-Prevent-Hair-Loss

Winter Hair Care Tips: ತಲೆ ಕೂದಲು ರಕ್ಷಣೆ: ಚಳಿಗಾಲದಲ್ಲಿ ಕೂದಲು ಉದುರದಂತೆ ಕಾಪಾಡುವ ಬೆಸ್ಟ್ Essential Oils

22/11/2025 2:00 PM

ಟ್ರಾವಿಸ್ ಸ್ಕಾಟ್ ಮುಂಬೈ ಸಂಗೀತ ಕಚೇರಿಯಲ್ಲಿ ಗೊಂದಲ: 18 ಲಕ್ಷ ಮೌಲ್ಯದ ಚಿನ್ನ ಕಳ್ಳತನ

22/11/2025 1:53 PM
Explosion in a car near the Red Fort in Delhi

5 ಲಕ್ಷಕ್ಕೆ ಖರೀದಿಸಿದ ಎಕೆ-47, ಡೀಪ್ ಫ್ರೀಜರ್ ನಲ್ಲಿ ಸ್ಫೋಟಕಗಳನ್ನು ಸಂಗ್ರಹ| ದೆಹಲಿ ಬಾಂಬ್ ಸ್ಫೋಟದ ಮಾಹಿತಿ ಬಹಿರಂಗ

22/11/2025 1:49 PM

ALERT : ಧೂಮಪಾನ ಮಾಡದವರಲ್ಲೂ ಹೆಚ್ಚುತ್ತಿವೆ ‘ಶ್ವಾಸಕೋಶದ ಕ್ಯಾನ್ಸರ್’ ಪ್ರಕರಣಗಳು.!

22/11/2025 1:47 PM
State News
KARNATAKA

GOOD NEWS : ರಾಜ್ಯದ `ಪಡಿತರ ಚೀಟಿ’ದಾರರಿಗೆ ಗುಡ್ ನ್ಯೂಸ್ : ಫೆಬ್ರವರಿಗೆ ‘ಇಂದಿರಾ ಕಿಟ್’ ಯೋಜನೆ ಜಾರಿ.!

By kannadanewsnow5722/11/2025 1:43 PM KARNATAKA 1 Min Read

ನವದೆಹಲಿ : ರಾಜ್ಯದ ಪಡಿತರ ಚೀಟಿದಾರರಿಗೆ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷ ಫೆಬ್ರವರಿಗೆ ಇಂದಿರಾ ಕಿಟ್…

ಬೆಂಗಳೂರಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ : ಆರೋಪಿ ಅರೆಸ್ಟ್

22/11/2025 1:27 PM

BREAKING : ಸಿಪಿ ಯೋಗೇಶ್ವರ್ ಗೆ ಬಿಗ್ ರಿಲೀಫ್ : ಮೆಗಾ ಸಿಟಿ ಪ್ರಾಜೆಕ್ಟ್‌ ಪ್ರಕರಣದಿಂದ ಖುಲಾಸೆಗೊಳಿಸಿದ ಕೋರ್ಟ್

22/11/2025 1:24 PM

ವಿಕ್ರಾಂತ ಭಾರತ ಪತ್ರಿಕೆ ಸಂಪಾದಕ ಎಂ.ಸಿ. ಗೋಂದಿ ಅವರ ನಿಧನಕ್ಕೆ ‘KUWJ’ ಸಂತಾಪ

22/11/2025 1:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.