ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ 16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಕನ್ನಡ ಚಲನಚಿತ್ರರಂಗದ ಕಲಾವಿದರಿಗೆ ನಟ್ಟು ಬೋಲ್ಟ್ ಸರಿ ಮಾಡುವುದು ನನಗೆ ಗೊತ್ತಿದೆ ಎಂಬ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಇದೀಗ ಬಿಜೆಪಿ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯರ ಕುರ್ಚಿಯ ಮತ್ತು ಬೋಲ್ಟ್ ಲೂಸ್ ಮಾಡುವುದರಲ್ಲಿ ನಿರಾತಾರಾಗಿದ್ದಾರೆ ಎಂದು ವ್ಯಂಗ್ಯವಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡ ಬಿಜೆಪಿ, ನಟ್ಟು-ಬೋಲ್ಟು ಟೈಟ್ ಮಾಡುವುದರಲ್ಲಿ ನಿಸ್ಸೀಮರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಸಿಎಂ ಕುರ್ಚಿಯ ನಟ್ಟು ಬೋಲ್ಟುಗಳನ್ನು ಕಳಚುವುದರಲ್ಲಿ ಹೆಚ್ಚು ಆಸಕ್ತರಾಗಿದ್ದಾರೆ.
ಅಕ್ಟೋಬರ್-ನವೆಂಬರ್ ಅಂತ್ಯಕ್ಕೆ ಹಾಲಿ ಸಿಎಂ ಸಿದ್ದರಾಮಯ್ಯ ಅವರ ಗದ್ದುಗೆಯ ಎಕ್ಸ್ಪ್ರೆರಿ ಡೇಟ್ ಮುಗಿಯಲಿದ್ದು, ಆ ಸ್ಥಾನಕ್ಕೆ ಹೊಂಚು ಹಾಕಿರುವ ಡಿಕೆಶಿ ಅವರು ಈಗಿನಿಂದಲೇ ಸಿದ್ದರಾಮಯ್ಯ ಅವರ ಕುರ್ಚಿಯ ನಟ್ಟು-ಬೋಲ್ಟುಗಳನ್ನು ಲೂಸ್ ಮಾಡುವುದರಲ್ಲಿ ನಿರತರಾಗಿದ್ದಾರೆ ಎಂದು ಬರೆದುಕೊಂಡಿದೆ.