ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ಡಿ ಆರ್ ಐ ಅಧಿಕಾರಿಗಳಿಂದ ನಟಿ ರಮ್ಯಾ ರಾವ್ ಬಂಧನ ಹಿನ್ನೆಲೆಯಲ್ಲಿ ಬಂಧನದ ಭೀತಿಯಿಂದ ಇದೀಗ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ಬಂಧನದ ಭೀತಿಯಿಂದಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ವೇಳೆ ಹೈ ಕೋರ್ಟ್ ಕಾನೂನು ಪ್ರಕ್ರಿಯೆ ಪಾಲಿಸದೆ ಬಂಧಿಸದಂತೆ ಆದೇಶ ಹೊರಡಿಸಿದೆ.
ಹೈಕೋರ್ಟ್ ನಲ್ಲಿ ಜತಿನ್ ಹುಕ್ಕೇರಿ ಪರವಾಗಿ ಪ್ರಭುಲಿಂಗ್ ನಾವದಗಿ ಅವರು ವಾದ ಮಂಡಿಸಿದರು. ಪತ್ನಿಯ ಮೇಲಿನ ಆರೋಪಕ್ಕೂ ಜತಿನ್ ಗು ಯಾವುದೇ ರೀತಿಯಾದ ಸಂಬಂಧವಿಲ್ಲ. ಡಿ ಆರ್ ಐ ಅಧಿಕಾರಿಗಳು ಸಮನ್ಸ್ ನೀಡಿದಾಗ ಜತಿನ್ ಅವರಿಗೆ ತನಿಖೆಗೆ ಸಹಕರಿಸಿದ್ದಾರೆ. ಅಲ್ಲದೆ 2ನೇ ಬಾರಿಯೂ ಕರೆದೊಯ್ದು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನ ಪಾಲಿಸದೆ ಬಂಧಿಸುವ ಸಾಧ್ಯತೆ ಇದೆ ಎಂದು ವಾದ ಮಂಡಿಸಿದರು. ಕಾನೂನಿನ ಪ್ರಕ್ರಿಯೆ ಪಾಲಿಸದೆ ಬಣ್ಣಿಸದಂತೆ ಇದೆ ವೇಳೆ ಹೈಕೋರ್ಟ್ ಆದೇಶ ಹೊರಡಿಸಿತು ರನ್ಯಾರಾವ್ ಪತಿಗೆ ಹೈಕೋರ್ಟ್ ಈ ಮೂಲಕ ಬಿಗ್ ರಿಲೀಸ್ ನೀಡಿತು.