ಬೆಂಗಳೂರು: ನಗರದಲ್ಲಿ ದಿಢೀರ್ ಮಳೆಯ ಆಗಮನವಾಗಿದೆ. ನಗರದ ವಿವಿಧೆಡೆ ವರುಣಾರ್ಭಟ ಜೋರಾಗಿದೆ. ಗಾಳಿ, ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಹೀಗಾಗಿ ಬೇಸಿಗೆಯ ಬಿಸಿಲಿನಿಂದ ತತ್ತರಿಸಿದ್ದಂತ ಜನರಿಗೆ ತಂಪನೆರದಂತೆ ಆಗಿದೆ.
ಬೆಂಗಳೂರಿನಲ್ಲಿ ದಿಢೀರ್ ಮಳೆಯಾಗುತ್ತಿದೆ. ಬೆಂಳೂರಿನ ಶಾಂತಿನಗರ, ಕಾರ್ಪೋರೇಷನ್, ರಿಚ್ಮಂಡ್ ಸರ್ಕಲ್ ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ.
ಕೆ ಆರ್ ಮಾರ್ಕೆಟ್, ಬೆಂಗಳೂರಿನ ಹೃದಯಭಾಗವಾದಂತ ಮೆಜೆಸ್ಟಿಕ್ ಸೇರಿದಂತೆ ಇತರೆಡೆ ಮಳೆಯಾಗುತ್ತಿದೆ. ದಿಢೀರ್ ಸುರಿಯುತ್ತಿರುವಂತ ಮಳೆಯಿಂದಾಗಿ ವಾಹನ ಸವಾರರು ತತ್ತರಿಸಿ ಹೋಗಿದ್ದಾರೆ. ಅಲ್ಲಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ತನಕ ಗ್ಯಾರಂಟಿ ನಿಲ್ಲಿಸಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ
‘ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ’ ಎನ್ನುವ ಡಿವಿಜಿ ಕಗ್ಗದ ಮೂಲಕ ವಿಪಕ್ಷಗಳ ಗದ್ದಲಕ್ಕೆ ‘DKS ಉತ್ತರ’