ಕಲಬುರ್ಗಿ : ಮನೆ ಇಲ್ಲದವರಿಗೆ ಸರ್ಕಾರದಿಂದ ಮಂಜೂರಾದ ಮನೆಗಳನ್ನು ಹಂಚಲಾಗುತ್ತದೆ. ಆದರೆ ಈ ಒಂದು ಮನೆಗಾಗಿ ಮಹಿಳೆಯೊಬ್ಬರು ಗ್ರಾಮ ಪಂಚಾಯತ್ ಸದಸ್ಯನ ಬಳಿಗೆ ಮನೆ ನೀಡಿ ಎಂದು ಮನವಿ ಮಾಡಿದಾಗ, ಮೊದಲು ಆತ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಬಳಿಕ ಹಣದ ಬದಲು ನೀನು ಬಾ ಇಲ್ಲ ನಿನ್ನ ಮಗಳನ್ನು ಕಳಿಸು ಎಂದು ಮಂಚಕ್ಕೆ ಕರೆದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ.
ಹೌದು ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ಮನೆ ಕೇಳಲು ಬಂದ ಮಹಿಳೆಗೆ ಮರಗುತ್ತಿ ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್ ಮಂಚಕ್ಕೆ ಕರೆದಿದ್ದಾನೆ. ಪಂಚಾಯತಿ ಮನೆ ಮಾಡಿಸಿಕೊಡುತ್ತೇನೆ ನನ್ನ ಜೊತೆ ಮಲಕೋ. ನೀನು ಬರಲಿಲ್ಲ ಅಂದ್ರೆ ನಿನ್ನ ಮಗಳನ್ನಾದರೂ ಕಳಿಸು ಎಂದಿದ್ದಾನೆ. ಈ ಸಂಬಂಧ ಮಹಿಳೆ, ನೀಲಕಂಠ ರಾಠೋಡ್ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಮಳಸಾಪುರ ಗ್ರಾಮದ ಮಹಿಳೆ ಮನೆ ಮಾಡಿಸಿಕೊಡಿ ಎಂದು ಗ್ರಾಮ ಪಂಚಾಯಿತಿ ಸದಸ್ಯ ನೀಲಕಂಠಗೆ ಮನವಿ ಮಾಡಿದ್ದಾಳೆ. ಆಗ ನೀಲಕಂಠ, ಪಂಚಾಯತಿಯಿಂದ ಮನೆ ಮಾಡಿಸಿಕೊಡಲು ದುಡ್ಡಿಗೆ ಬೇಡಿಕೆ ಇಟ್ಟಿದ್ದಾನೆ. ದುಡ್ಡು ಕೊಡಲು ಆಗದಿದ್ದರೆ ನನ್ನ ಜೊತೆ ಮಲಕೋ ಎಂದು ಒತ್ತಾಯ ಮಾಡಿದ್ದಾನೆ. ಅಲ್ಲದೇ ನೀನು ಬರಲಿಲ್ಲ ಅಂದ್ರೆ ನಿನ್ನ ಮಗಳನ್ನ ಕಳುಹಿಸು ಎಂದಿದ್ದಾನೆ. ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.