ಬೆಂಗಳೂರು: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಇನ್ನೂ ಯಾವ ತೀರ್ಮಾನ ಆಗಿಲ್ಲ. ಕ್ಯಾಬಿನೆಟ್ ಉಪ ಸಮಿತಿ ವರದಿ ಕೂಡ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ? ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಪ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ವರದಿ ಬರುವ ಮೊದಲೇ ವಿವಿಗಳನ್ನು ಸರ್ಕಾರ ಮುಚ್ಚಲು ಹೊರಟಿದೆ ಎನ್ನುವುದು ಸರಿಯಲ್ಲ. ಇಂಥಾ ಯಾವುದೇ ತೀರ್ಮಾನ ನಾವು ಈ ವರೆಗೆ ಕೈಗೊಂಡಿಲ್ಲ ಎಂಬುದಾಗಿ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.
‘ಜೋಗದ ಜಲಪಾತ’ ವೀಕ್ಷಣೆಗೆ ಹೊರಟ ಪ್ರವಾಸಿಗರ ಗಮನಕ್ಕೆ: ಏ.30ರವರೆಗೆ ‘ಪ್ರವೇಶ ನಿಷೇಧ’ | Jog falls
ಬೆಂಗಳೂರಲ್ಲಿ ರಸ್ತೆ, ರಾಜಕಾಲುವೆ ತಡೆಗೋಡೆ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿ.ಕೆ ಶಿವಕುಮಾರ್