Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ವರ್ಷಕ್ಕೊಮ್ಮೆ ತಪ್ಪದೇ ಈ 10 `ರಕ್ತ ಪರೀಕ್ಷೆ’ ಮಾಡಿಸಿಕೊಳ್ಳಲೇಬೇಕು.!

14/01/2026 1:39 PM

BIG NEWS : ದೇಶದ ಬಡ ಮಕ್ಕಳಿಗೆ ದುಬಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ :`RTE’ ಕಾಯ್ದೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

14/01/2026 1:37 PM

SHOCKING : ತೆಲಂಗಾಣದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ವಿಷ ಹಾಕಿ 600 ನಾಯಿಗಳ ಹತ್ಯೆ.!

14/01/2026 1:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೋನಾರ್ಕ್ ಉತ್ಸವದ ಮಾದರಿಯಲ್ಲಿ ‘ಚಾಲುಕ್ಯ ಉತ್ಸವ’ ಆಚರಣೆ: ಸಚಿವ ಶಿವರಾಜ್ ತಂಗಡಗಿ
KARNATAKA

ಕೋನಾರ್ಕ್ ಉತ್ಸವದ ಮಾದರಿಯಲ್ಲಿ ‘ಚಾಲುಕ್ಯ ಉತ್ಸವ’ ಆಚರಣೆ: ಸಚಿವ ಶಿವರಾಜ್ ತಂಗಡಗಿ

By kannadanewsnow0918/03/2025 5:47 PM

ಬೆಂಗಳೂರು: ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ‌ ಕೈಗೊಳ್ಳಲಾಗಿದೆ.

ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರ ನೇತೃತ್ವದಲ್ಲಿ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಮಂಗಳವಾರ ವಿಕಾಸಸೌಧದಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಚಿವರು, 2015ರ ನಂತರ ಚಾಲುಕ್ಯ ಉತ್ಸವ ಆಚರಣೆ ನಡೆದಿಲ್ಲ. ಇತರ ಉತ್ಸವಗಳಂತೆ ಚಾಲುಕ್ಯ ಉತ್ಸವವೂ ಆಚರಣೆ ಆಗುವ ಬದಲಿಗೆ ಇದನ್ನೊಂದು ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಉತ್ಸವವನ್ನಾಗಿ ರೂಪಿಸಬೇಕು. ಇಡೀ ರಾಷ್ಟ್ರದ ಗಮನ ಸೆಳೆಯುವಂತೆ ಉತ್ಸವ ಆಚರಣೆಯಾಗಬೇಕು ಎಂದು ಹೇಳಿದರು.

ಉತ್ಸವದಲ್ಲಿ ಸಂಗೀತ, ನೃತ್ಯ ಹಾಗೂ ಜಾನಪದ ಕಲಾ ವೈಭವಗಳನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ಆಯೋಜನೆಯಾಗಲಿದೆ ಎಂದು ತಿಳಿಸಿದರು.

ಮೂರು ದಿನಗಳ ಕಾಲ ನಡೆಯಲಿರುವ ಉತ್ಸವಕ್ಕೆ ಬಾದಾಮಿಯಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಎರಡನೇ ದಿನ ಪಟ್ಟದಕಲ್ಲು ಹಾಗೂ ಸಮಾರೋಪ ಸಮಾರಂಭ ಐಹೊಳೆಯಲ್ಲಿ ನಡೆಯಲಿದೆ.‌ ವರ್ಷಾಂತ್ಯಕ್ಕೆ‌ ಉತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ಮುಂದಿನ‌ ಸಭೆಯಲ್ಲಿ ದಿನಾಂಕವನ್ನು ನಿಗದಿಪಡಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಶಾಸಕ‌ ವಿಜಯಾನಂದ ಕಾಶಪ್ಪನವರ್ ಮಾತನಾಡಿ, ಇಮ್ಮಡಿ ಪುಲಿಕೇಶಿ ಕರ್ನಾಟಕದ ಚರಿತ್ರೆಯಲ್ಲಿ ತನ್ನ ಶೌರ್ಯ, ಸಾಹಸ ಹಾಗೂ ಕಲಾವಂತಿಕೆ ಮುಂತಾದ ಸಂಗತಿಗಳಿಂದಾಗಿ ಅಜರಾಮರನಾಗಿದ್ದನು. ಇಮ್ಮಡಿ ಪುಲಿಕೇಶಿಯ ಚರಿತ್ರೆಯನ್ನು ಉತ್ಸವದಲ್ಲಿ ಸಾರುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಅಬಕಾರಿ ಸಚಿವರೂ ಆದ ಬಾಗಲಕೋಟೆ ಜಿಲ್ಲಾ‌ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಮಾಜಿ ಸಚಿವ‌ ಎಚ್.ವೈ.ಮೇಟಿ, ವಿಧಾನ ಪರಿಷತ್ ಸದಸ್ಯರಾದ ಹನುಮಂತ ನಿರಾಣಿ, ಪಿ.ಎಚ್.ಪೂಜಾರ್,‌ ಉಮಾಶ್ರೀ‌, ಇಲಾಖೆ ನಿರ್ದೇಶಕಿ ಗಾಯಿತ್ರಿ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ಕಳೆದ ಹತ್ತು ವರ್ಷಗಳಿಂದ ಚಾಲುಕ್ಯ ಉತ್ಸವವನ್ನು ಆಚರಣೆ ಮಾಡಿಲ್ಲ. ಬಾಗಲಕೋಟೆ ಜಿಲ್ಲೆ ರಾಜ್ಯದ ಐತಿಹಾಸಿಕ ಪ್ರವಾಸೋದ್ಯಮ ಹಿನ್ನೆಲೆಯುಳ್ಳ ಜಿಲ್ಲೆಯಾಗಿದ್ದು, ಈ ಬಾರಿ ಉತ್ಸವವನ್ನು ರಾಷ್ಟ್ರದ ಗಮನ ಸೆಳೆಯುವಂತೆ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದರ ಜೊತೆಗೆ ಬಸವಣ್ಣನವರ ತತ್ವಗಳನ್ನ ಪಸರಿಸುವ ಕೆಲಸಗಳು ನಡೆಯಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಮ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಎಚ್ಚರ.! ಇನ್ಮುಂದೆ ಪೋಷಕರನ್ನು ಆರೈಕೆ ಮಾಡದ ಮಕ್ಕಳಿಗೆ ಆಸ್ತಿ ದಕ್ಕದು

‘ಟೆಂಡರ್’ಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ವಿಧಾನಸಭೆಯಲ್ಲಿ ಮಸೂದೆ ಮಾಡಿಸಿದ ‘ರಾಜ್ಯ ಸರ್ಕಾರ’

Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ವರ್ಷಕ್ಕೊಮ್ಮೆ ತಪ್ಪದೇ ಈ 10 `ರಕ್ತ ಪರೀಕ್ಷೆ’ ಮಾಡಿಸಿಕೊಳ್ಳಲೇಬೇಕು.!

14/01/2026 1:39 PM3 Mins Read

BIG NEWS : ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಜೀವ ಬೆದರಿಕೆ ವಿಚಾರ : ಜಿಲ್ಲೆಯದ್ಯಂತ ಪ್ರತಿಭಟನೆ

14/01/2026 1:21 PM1 Min Read

ALERT : `ನಾಯಿ’ ಸಾಕುವವರೇ ಎಚ್ಚರ : ಉಗುರುಗಳಿಂದ ಪರಚಿದ್ರೂ `ರೇಬಿಸ್ ಸೋಂಕು’ ಬರಬಹುದು.!

14/01/2026 12:57 PM2 Mins Read
Recent News

ALERT : ಸಾರ್ವಜನಿಕರೇ ವರ್ಷಕ್ಕೊಮ್ಮೆ ತಪ್ಪದೇ ಈ 10 `ರಕ್ತ ಪರೀಕ್ಷೆ’ ಮಾಡಿಸಿಕೊಳ್ಳಲೇಬೇಕು.!

14/01/2026 1:39 PM

BIG NEWS : ದೇಶದ ಬಡ ಮಕ್ಕಳಿಗೆ ದುಬಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ :`RTE’ ಕಾಯ್ದೆ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

14/01/2026 1:37 PM

SHOCKING : ತೆಲಂಗಾಣದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ವಿಷ ಹಾಕಿ 600 ನಾಯಿಗಳ ಹತ್ಯೆ.!

14/01/2026 1:24 PM

BIG NEWS : ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಜೀವ ಬೆದರಿಕೆ ವಿಚಾರ : ಜಿಲ್ಲೆಯದ್ಯಂತ ಪ್ರತಿಭಟನೆ

14/01/2026 1:21 PM
State News
KARNATAKA

ALERT : ಸಾರ್ವಜನಿಕರೇ ವರ್ಷಕ್ಕೊಮ್ಮೆ ತಪ್ಪದೇ ಈ 10 `ರಕ್ತ ಪರೀಕ್ಷೆ’ ಮಾಡಿಸಿಕೊಳ್ಳಲೇಬೇಕು.!

By kannadanewsnow5714/01/2026 1:39 PM KARNATAKA 3 Mins Read

ನಮ್ಮ ದೇಹದಲ್ಲಿನ ರೋಗಗಳ ಬಗ್ಗೆ ರಕ್ತ ಪರೀಕ್ಷೆಗಳ ಮೂಲಕ ತಿಳಿದುಕೊಳ್ಳಬಹುದು. ದೀರ್ಘಾಯುಷ್ಯ ಸಾಧಿಸಲು, ನೀವು ಆರೋಗ್ಯಕರ ಜೀವನವನ್ನು ನಡೆಸಬೇಕು. ಕೆಲವು…

BIG NEWS : ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಜೀವ ಬೆದರಿಕೆ ವಿಚಾರ : ಜಿಲ್ಲೆಯದ್ಯಂತ ಪ್ರತಿಭಟನೆ

14/01/2026 1:21 PM

ALERT : `ನಾಯಿ’ ಸಾಕುವವರೇ ಎಚ್ಚರ : ಉಗುರುಗಳಿಂದ ಪರಚಿದ್ರೂ `ರೇಬಿಸ್ ಸೋಂಕು’ ಬರಬಹುದು.!

14/01/2026 12:57 PM

ಇನ್ ಸ್ಟಾ ಖಾತೆ ಡಿಲೀಟ್ ಮಾಡಿದ ‘ಟಾಕ್ಸಿಕ್’ ಟೀಸರ್ನಲ್ಲಿ ಯಶ್ ಜೊತೆಗೆ ಹಸಿ ಬಿಸಿ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ನಟಿ

14/01/2026 12:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.