Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕನ್ನಡಕಕ್ಕೆ ಗುಡ್ ಬೈ ಹೇಳಿ ; ದೃಷ್ಟಿ ಮರಳಿಸುವ ‘ಐ ಡ್ರಾಪ್ಸ್’ ಅಭಿವೃದ್ಧಿ ಪಡಿಸಿದ ವಿಜ್ಞಾನಿಗಳು

15/09/2025 4:01 PM

ಜಾತಿ ಜನಗಣತಿ ಕಾಲಂನಲ್ಲಿ ತಾವಾಗಿಯೇ ಮತಾಂತರ ಆಗುವವರಿಗೆ ಅವಕಾಶ ಇದೆ : ಸಚಿವ ಎನ್.ಎಸ್ ಬೋಸರಾಜು

15/09/2025 3:45 PM

BREAKING : ಹ್ಯಾಂಡ್ ಶೇಕ್ ವಿವಾದ : ‘ಮ್ಯಾಚ್ ರೆಫರಿ’ಯನ್ನ ‘ತಕ್ಷಣದಿಂದ ತೆಗೆದು ಹಾಕುವಂತೆ’ ಪಾಕಿಸ್ತಾನ ಒತ್ತಾಯ

15/09/2025 3:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯ, KHB ಬಡಾವಣೆಗೆ ಹೊಸದಾಗಿ ನಳ ಸಂಪರ್ಕದ ಮೂಲಕ ನೀರು ಸರಬರಾಜು: ಸಚಿವ ಬಿ.ಎಸ್.ಸುರೇಶ್
KARNATAKA

ಮಂಡ್ಯ, KHB ಬಡಾವಣೆಗೆ ಹೊಸದಾಗಿ ನಳ ಸಂಪರ್ಕದ ಮೂಲಕ ನೀರು ಸರಬರಾಜು: ಸಚಿವ ಬಿ.ಎಸ್.ಸುರೇಶ್

By kannadanewsnow0918/03/2025 7:21 PM

ಬೆಂಗಳೂರು : ಮಂಡ್ಯ – ಕೆ.ಹೆಚ್.ಬಿ ಬಡಾವಣೆಯಲ್ಲಿ ಹೊಸದಾಗಿ ಕೊಳವೆ ವಿತರಣಾ ಮಾರ್ಗಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಹಾಲಿ ಇರುವ ಓ.ಹೆಚ್.ಟಿ ಯನ್ನು ಪುನರುಜ್ಜೀವನಗೊಳಿಸಿ ಕಾವೇರಿ ನೀರನ್ನು ಪೂರೈಸಲು ಅಗತ್ಯ ಇರುವ ಕಾಮಗಾರಿಗಳನ್ನು ಕೈಗೊಳ್ಳಲು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಿಂದ ರೂ. 350. 00 ಕೋಟಿ ಅಂದಾಜು ಪಟ್ಟಿಯನ್ನು ತಯಾರಿಸಿ ಮಂಡ್ಯ ನಗರ ಸಭೆಯ ಪೌರಾಯುಕ್ತರಿಗೆ ಕಳಿಹಿಸಿಕೊಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ್ ತಿಳಿಸಿದರು.

ಇಂದು ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಲವು ವರ್ಷಗಳಿಂದ ನೀರು ಸರಬರಾಜು ವಿತರಣಾ ಕೊಳವೆ ಮಾರ್ಗಗಳನ್ನು ಬಳಸದೇ ಇದ್ದ ಕಾರಣ ಕೊಳವೆಗಳು ಹಾಳಾಗಿರುವ ಮಾಹಿತಿಯನ್ನು ಗೃಹ ಮಂಡಳಿ ಹಾಗೂ ಮಂಡ್ಯ ನಗರ ಸಭೆ ಅವರಿಗೆ ತಿಳಿಸಿ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2021-22 ರ ದರಪಟ್ಟಿಯಂತೆ ರೂ 64.50 ಲಕ್ಷ ಗಳಿಗೆ ಅಂದಾಜುಪಟ್ಟಿಯನ್ನು ತಯಾರಿಸಿ 2022ನೇ ಆಗಸ್ಟ್ 12 ರಲ್ಲಿ ಮಂಡ್ಯ ನಗರ ಸಭೆಯ ಪೌರಾಯುಕ್ತರಿಗೆ ಸಲ್ಲಿಸಲಾಗಿರುತ್ತದೆ. ನಗರ ಸಭೆಯ ವತಿಯಿಂದ ಸದರಿ ಅಂದಾಜು ಮೊತ್ತವನ್ನು ಮಂಡಳಿಗೆ ಭರಿಸದಿರುವುದರಿಂದ ಯಾವುದೇ ಕಾಮಗಾರಿಯನ್ನು ಕೈಗೊಂಡಿರುವುದಿಲ್ಲ ಎಂದು ತಿಳಿಸಿದರು.

ಕರ್ನಾಟಕ ಗೃಹ ಮಂಡಳಿ ವತಿಯಿಂದ ಚಿಕ್ಕ ಮಂಡ್ಯ ಸಮೀಪದ ಕೆ.ಹೆಚ್.ಬಿ. ಬಡಾವಣೆಯಲ್ಲಿ ಕೊಳವೆ ಬಾವಿಯಿಂದ ನೀರು ಸರಬರಾಜು ವ್ಯವಸ್ಥೆಯನ್ನು 2002-03 ರಲ್ಲಿ ಕಲ್ಪಿಸಿದ್ದು ಗೃಹ ಮಂಡಳಿಯಿಂದ 2019 ರಲ್ಲಿ ಬಡಾವಣೆಯನ್ನು ನಗರಸಭೆಗೆ ಹಸ್ತಾಂತರಿಸಲಾಗಿದೆ. ಗೃಹ ಮಂಡಳಿಯ ಅಸಮರ್ಪಕ ನಿರ್ವಹಣೆಯಿಂದಾಗಿ ಸದರಿ ಬಡಾವಣೆಗೆ ಕಾವೇರಿ ನೀರು ಪೂರೈಸಿರುವುದಿಲ್ಲ.

ಬಡಾವಣೆಗೆ ಗೃಹ ಮಂಡಳಿ ವತಿಯಿಂದ ನಗರಸಭೆಗೆ ರೂ. 550.00 ಲಕ್ಷಗಳನ್ನು ಪಾವತಿ ಮಾಡಲಾಗಿದೆ. ಈ ಅನುದಾನದಲ್ಲಿ ಬಡಾವಣೆಗೆ ಸಂಪರ್ಕ ಕಲ್ಪಿಸಲು ಮುಖ್ಯ ರಸ್ತೆಗಳನ್ನು ಅಭಿವೃದ್ದಿಪಡಿಸಲು ರೂ. 446.39 ಲಕ್ಷಗಳನ್ನು ವೆಚ್ಚ ಮಾಡಲಾಗಿದೆ ಎಂದರು.

ಬಡಾವಣೆಯ ನಿರ್ಮಾಣ ವೇಳೆಯಲ್ಲಿ ಗೃಹ ಮಂಡಳಿಯು ಅಳವಡಿಸಿರುವ ನೀರು ಸರಬರಾಜು ಮಾರ್ಗಗಳು ಹಲವು ವರ್ಷ ಬಡಾವಣೆಯಲ್ಲಿ ಯಾವುದೇ ಮನೆ ನಿರ್ಮಾಣ ಆಗದ ಕಾರಣ ಬಳಕೆಯಾಗದೇ ಕೆಲವೆಡೆ ದುರಸ್ತಿಯಲ್ಲಿರುವುದರಿಂದ ಉಳಿಕೆಯಾದ ರೂ. 103.65 ಲಕ್ಷಗಳನ್ನು ಬಡಾವಣೆಯಲ್ಲಿನ ನೀರು ಸರಬರಾಜು ವ್ಯವಸ್ಥೆ ಮತ್ತು ಬೀದಿ ದೀಪಗಳನ್ನು ಅಳವಡಿಸುವ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ರೂಪಿಸಿ ಅದ್ಯತೆಗನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸದರಿ ಬಡಾವಣೆಗೆ ಕಾವೇರಿ ಸಗಟು ನೀರು ಸರಬರಾಜು ಮಾಡಲು 2012ನೇ ಸಾಲಿನಲ್ಲಿ ವಂತಿಕೆ ಮೊತ್ತ ರೂ. 93.59 ಲಕ್ಷಗಳನ್ನು ಗೃಹ ಮಂಡಳಿ ವತಿಯಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಗೆ ಭರಿಸಲಾಗಿರುತ್ತದೆ. ಹಾಲಿ ಇರುವ ಮೇಲ್ಮಟ್ಟ ಜಲ ಸಂಗ್ರಹಗಾರವನ್ನು ಹೊಳಲು ಸರ್ಕಲ್ ನಿಂದ ಕೆ.ಹೆಚ್.ಬಿ ಬಡಾವಣೆವರೆಗೂ ಅಳವಡಿಸಲಾಗಿದ್ದು, 200 ಮಿ.ಮೀ. ವ್ಯಾಸದ ಫೀಡರ್ ಕೊಳವೆ ಮಾರ್ಗವನ್ನು ಹಾಗೂ ಪಂಪುರೇಚಕಗಳನ್ನು ದುರಸ್ತಿಪಡಿಸಲು 16.35 ಲಕ್ಷಗಳನ್ನು ಗೃಹ ಮಂಡಳಿ ವತಿಯಿಂದ ದುರಸ್ತಿ ಕಾಮಗಾರಿಯನ್ನು ಕೈಗೊಂಡು ಕಾವೇರಿ ಕುಡಿಯುವ ನೀರನ್ನು ಮೇಲ್ಮಟ್ಟ ಜಲಸಂಗ್ರಹಗಾರಕ್ಕೆ ತುಂಬಿಸಿ ಚಾಲನೆಗೊಳಿಸಿ ಗೃಹ ಮಂಡಳಿಗೆ ಹಸ್ತಾಂತರಿಸಲಾಗಿರುತ್ತದೆ ಎಂದು ತಿಳಿಸಿದರು.

Good News: ರಾಜ್ಯ ಸರ್ಕಾರದಿಂದ ‘KIDB ಪ್ರದೇಶ’ಕ್ಕೆ ಜಮೀನು ನೀಡಿದ ಭೂ ಮಾಲೀಕರಿಗೆ ಸಿಹಿಸುದ್ದಿ: ಸರ್ಕಾರಿ ಉದ್ಯೋಗ

ಬಾಹ್ಯಾಕಾಶದಲ್ಲಿ ಸಿಲುಕಿದ್ದ ‘ಸುನೀತಾ ವಿಲಿಯಮ್ಸ್’ಗೆ ನಾಸಾ ಎಷ್ಟು ಪಾವತಿ ಗೊತ್ತಾ? | Sunita Williams

Share. Facebook Twitter LinkedIn WhatsApp Email

Related Posts

ಜಾತಿ ಜನಗಣತಿ ಕಾಲಂನಲ್ಲಿ ತಾವಾಗಿಯೇ ಮತಾಂತರ ಆಗುವವರಿಗೆ ಅವಕಾಶ ಇದೆ : ಸಚಿವ ಎನ್.ಎಸ್ ಬೋಸರಾಜು

15/09/2025 3:45 PM1 Min Read

ಹಾಸನದಲ್ಲಿ ಕ್ಯಾಂಟರ್ ಹರಿದು 10 ಜನರ ಸಾವಿಗೆ, ಪೊಲೀಸ್ ಇಲಾಖೆಯ ವೈಫಲ್ಯವೆ ಕಾರಣ : HD ರೇವಣ್ಣ ಆರೋಪ

15/09/2025 3:39 PM1 Min Read

ಸೆ.22ರಂದು ಸಾಹಿತಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ: ಸಚಿವ ಸತೀಶ್ ಜಾರಕಿಹೊಳಿ

15/09/2025 3:29 PM1 Min Read
Recent News

ಕನ್ನಡಕಕ್ಕೆ ಗುಡ್ ಬೈ ಹೇಳಿ ; ದೃಷ್ಟಿ ಮರಳಿಸುವ ‘ಐ ಡ್ರಾಪ್ಸ್’ ಅಭಿವೃದ್ಧಿ ಪಡಿಸಿದ ವಿಜ್ಞಾನಿಗಳು

15/09/2025 4:01 PM

ಜಾತಿ ಜನಗಣತಿ ಕಾಲಂನಲ್ಲಿ ತಾವಾಗಿಯೇ ಮತಾಂತರ ಆಗುವವರಿಗೆ ಅವಕಾಶ ಇದೆ : ಸಚಿವ ಎನ್.ಎಸ್ ಬೋಸರಾಜು

15/09/2025 3:45 PM

BREAKING : ಹ್ಯಾಂಡ್ ಶೇಕ್ ವಿವಾದ : ‘ಮ್ಯಾಚ್ ರೆಫರಿ’ಯನ್ನ ‘ತಕ್ಷಣದಿಂದ ತೆಗೆದು ಹಾಕುವಂತೆ’ ಪಾಕಿಸ್ತಾನ ಒತ್ತಾಯ

15/09/2025 3:39 PM

ಹಾಸನದಲ್ಲಿ ಕ್ಯಾಂಟರ್ ಹರಿದು 10 ಜನರ ಸಾವಿಗೆ, ಪೊಲೀಸ್ ಇಲಾಖೆಯ ವೈಫಲ್ಯವೆ ಕಾರಣ : HD ರೇವಣ್ಣ ಆರೋಪ

15/09/2025 3:39 PM
State News
KARNATAKA

ಜಾತಿ ಜನಗಣತಿ ಕಾಲಂನಲ್ಲಿ ತಾವಾಗಿಯೇ ಮತಾಂತರ ಆಗುವವರಿಗೆ ಅವಕಾಶ ಇದೆ : ಸಚಿವ ಎನ್.ಎಸ್ ಬೋಸರಾಜು

By kannadanewsnow0515/09/2025 3:45 PM KARNATAKA 1 Min Read

ಕೊಡಗು : ರಾಜ್ಯದಲ್ಲಿ ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸಲು ನಾಳೆ ಕುರುಬ ಸಮಾಜದ ಮುಖಂಡರ ಜೊತೆಗೆ ಸಿಎಂ ಸಿದ್ದರಾಮಯ್ಯ ಮಹತ್ವದ…

ಹಾಸನದಲ್ಲಿ ಕ್ಯಾಂಟರ್ ಹರಿದು 10 ಜನರ ಸಾವಿಗೆ, ಪೊಲೀಸ್ ಇಲಾಖೆಯ ವೈಫಲ್ಯವೆ ಕಾರಣ : HD ರೇವಣ್ಣ ಆರೋಪ

15/09/2025 3:39 PM

ಸೆ.22ರಂದು ಸಾಹಿತಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ: ಸಚಿವ ಸತೀಶ್ ಜಾರಕಿಹೊಳಿ

15/09/2025 3:29 PM

ಮಂಡ್ಯದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಎಡವಟ್ಟಿಗೆ ವ್ಯಕ್ತಿ ಬಲಿ

15/09/2025 3:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.