Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಬಗ್ಗೆ ಸ್ಪೋಟಕ ರಹಸ್ಯ ಬಹಿರಂಗ : ನಿಧಿ 300 ವರ್ಷಗಳಿಗಿಂತ ಹಳೆಯದು.!

14/01/2026 8:22 AM

Heart Attack: ಶೇ. 99ರಷ್ಟು ಹೃದಯಾಘಾತಕ್ಕೆ ಈ 4 ಅಂಶಗಳೇ ಕಾರಣ: ಹೊಸ ಸಂಶೋಧನೆಯಿಂದ ಬಯಲಾದ ಶಾಕಿಂಗ್ ಮಾಹಿತಿ!

14/01/2026 8:16 AM

ಇನ್ಮುಂದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಕೇವಲ ದಂಡವಲ್ಲ, ವಿಮೆ ಕೂಡ ದುಬಾರಿ!

14/01/2026 8:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ಸಿದ್ದರಾಮಯ್ಯನ ಗ್ಯಾರಂಟಿ ಅಲ್ಲ, ಕನ್ನಡಿಗರ ಗ್ಯಾರಂಟಿ: ಸಿಎಂ ಸಿದ್ಧರಾಮಯ್ಯ
KARNATAKA

ಇದು ಸಿದ್ದರಾಮಯ್ಯನ ಗ್ಯಾರಂಟಿ ಅಲ್ಲ, ಕನ್ನಡಿಗರ ಗ್ಯಾರಂಟಿ: ಸಿಎಂ ಸಿದ್ಧರಾಮಯ್ಯ

By kannadanewsnow0918/03/2025 8:47 PM

ಬೆಂಗಳೂರು: ಬಿಜೆಪಿಯವರು ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲ. ಆದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ, ಕನ್ನಡಿಗರ ಗ್ಯಾರಂಟಿ ಎಂದು ಘೋಷಿಸಿದ್ದೇವೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ‌ ಚರ್ಚೆಗೆ ಉತ್ತರಿಸಿದಂತ ಅವರು, ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಭರವಸೆ ನೀಡಿದರು.ಆದರೆ ಅವರಿಂದ ಯೋಜನೆ ಅನುಷ್ಠಾನಗೊಳಿಸಲಿಲ್ಲ ಎಂದರು.

ಮನಮೋಹನ್ ಸಿಂಗ್ ಅವಧಿಯಲ್ಲಿ ಕಚ್ಛಾತೈಲದ ಬೆಲೆ ಹೆಚ್ಚಿದ್ದರೂ ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಇತ್ತು: ಈಗ ಕಚ್ಛಾ ತೈಲ ಬೆಲೆ ಕಡಿಮೆ ಇದ್ದರೂ ಮೋದಿ ಡೀಸೆಲ್-ಪೆಟ್ರೋಲ್ ಬೆಲೆ ವಿಪರೀತ ಹೆಚ್ಚಿಸಿದ್ದಾರೆ ಎಂಬುದಾಗಿ ಸಿಎಂ ವ್ಯಂಗ್ಯ ಮಾಡಿದರು.

ಗೃಹಲಕ್ಷ್ಮಿ ಹಣ ಆರು ತಿಂಗಳಿಂದ ಬಾಕಿ ಇದೆ ಎಂದು ವಿರೋಧಪಕ್ಷದ ನಾಯಕರು ತಿಳಿಸಿದ್ದಾರೆ. ಇದು ಅಪ್ಪಟ ಸುಳ್ಳು. ಆದರೆ ಗೃಹಲಕ್ಷ್ಮಿ ಯೋಜನೆಯ ಕೇವಲ ಜನವರಿಯಿಂದ ಉಳಿದಿದ್ದು, ಅದನ್ನೂ ಪಾವತಿಸಲಾಗುವುದು. ಶಿಕ್ಷಣ ಇಲಾಖೆಯಡಿ 11400 ಶಿಕ್ಷಕರ ಕೊರತೆ ಇದೆ. 6400 ಶಾಲೆಗಳಲ್ಲಿ ಏಕ ಶಿಕ್ಷಕರು ಇದ್ದಾರೆ. ಬಿಜೆಪಿಯು 4 ವರ್ಷದಲ್ಲಿ ಎಷ್ಟು ಜನ ಶಿಕ್ಷಕರ ನೇಮಕಾತಿ ಮಾಡಿದ್ದಾರೆಂದು ತಿಳಿಸಲಿ ಎಂದು ಸವಾಲು ಹಾಕಿದರು.

ಎಲ್ಲಾ ದುರ್ಬಲವರ್ಗದವರನ್ನೂ ನಾನು ಪ್ರೀತಿಸುತ್ತೇನೆ. ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಆದರೆ ವಿವಿ.ಗಳನ್ನು ಮುಚ್ಚುವುದಿಲ್ಲ. ಆದರೆ ಸಚಿವಸಂಪುಟ ಉಪಸಮಿತಿಯ ವರದಿ ಬಂದ ನಂತರ ವಿವಿಗಳನ್ನು ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ರೈತರ ಆತ್ಮಹತ್ಯೆಗಳು ಹೆಚ್ಚಿರುವ ಬಗ್ಗೆ ಕೇಳಲಾಗಿದೆ. ಆದರೆ ವಾಸ್ತವಿಕವಾಗಿ 40% ವರೆಗೆ ಆತ್ಮಹತ್ಯೆಗಳು ಕಡಿಮೆಯಾಗಿದೆ. ಫೆಬ್ರವರಿ ಅಂತ್ಯದವರಗೆ 644 ಆಗಿವೆ. ಆತ್ಮಹತ್ಯೆಗಳು ಇಳಿಮುಖವಾಗಿದೆ ಎಂದರು.

ಬೆಲೆ ಏರಿಕೆಯನ್ನು ಪ್ರಶ್ನಿಸಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 108-125 ಡಾಲರ್ ಇತ್ತು,, ಆಗ ಡೀಸೆಲ್ ಬೆಲೆ 46.59 ಇತ್ತು, ಮೋದಿಯವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 73-76 ಡಾಲರ್ ಇದೆ, ಆದರೆ ಡೀಸೆಲ್ ಬೆಲೆ 90 ರೂ. ಆಗಿದೆ. ಅರ್ದದಷ್ಟು ಬೆಲೆ ಹೆಚ್ಚಾಗಿದೆ. ನಾವು ಎಲ್ಲಾ ಬಾಬ್ತುಗಳಿಂದ 7 ರಿಂದ 8 ಸಾವಿರ ರೂ. ಹೆಚ್ಚಿಸಿದ್ದೇವೆ ಎಂದರು.

ಆದರೆ ಗ್ಯಾರಂಟಿಗಳಿಗೆ 51 ಸಾವಿರ ಕೋಟಿ ರೂ. ನೀಡಿದ್ದೇವೆ , ನೀರಾವರಿಗೆ ಈ ಬಾರಿ ಸಣ್ಣ ನೀರಾವರಿಗೆ 1000 ಕೋಟಿ ರೂ. ಹೆಚ್ಚಿಸಲಾಗಿದೆ ಎಂದರು.
ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದಿದ್ದರು. ಆದರೆ ಅವರಿಂದ ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಲಿಲ್ಲ ಎಂದರು.

ಹಿಂದೆ 2013ರಲ್ಲಿ ಕೂಡಲಸಂಗಮದಲ್ಲಿ ಪ್ರತಿ ವರ್ಷ 10 ಸಾವಿರ ಕೋಟಿಗಳನ್ನು ನೀರಾವರಿಗೆ ಇಡುತ್ತೇವೆ , 56000 ಕೋಟಿ ರೂ.ಗಳನ್ನು ನೀರಾವರಿಗೆ ಖರ್ಚು ಮಾಡಿದ್ದೇವೆ. ಪ್ರತಿ ವರ್ಷ 1.50 ಲಕ್ಷ ಕೋಟಿ ಖರ್ಚು ಮಾಡುತ್ತೇವೆ. ಎಂದಿದ್ದ ಬಿಜೆಪಿಯವರು ನಾಲ್ಕು ವರ್ಷ ಪ್ರತಿ ವರ್ಷ ಕೇವಲ ಸರಾಸರಿ 16 ಸಾವಿರ ಕೋಟಿ ಖರ್ಚು ಮಾಡಿದ್ದೀರಿ ಎಂಬುದಾಗಿ ಗುಡುಗಿದರು.

ಬಿಜೆಪಿಯವರು ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲ. ಆದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ ಎಂದು ಘೋಷಿಸಿದ್ದೇವೆ.

– ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ‌ ಚರ್ಚೆಗೆ ನನ್ನ ಉತ್ತರ#AssemblySession #Karnataka pic.twitter.com/VseS3bZNaW

— Siddaramaiah (@siddaramaiah) March 18, 2025

BREAKING NEWS: ‘ನಟಿ ರನ್ಯಾ ರಾವ್’ ವಿರುದ್ಧ ಅವಹೇಳನಕಾರಿ ಪದ ಬಳಕೆ: ‘ಬಿಜೆಪಿ ಶಾಸಕ ಯತ್ನಾಳ್’ ವಿರುದ್ಧ ‘FIR’ ದಾಖಲು

BREAKING : ಮಾ.22 ರಂದು ‘ಅಖಂಡ ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ

Share. Facebook Twitter LinkedIn WhatsApp Email

Related Posts

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಬಗ್ಗೆ ಸ್ಪೋಟಕ ರಹಸ್ಯ ಬಹಿರಂಗ : ನಿಧಿ 300 ವರ್ಷಗಳಿಗಿಂತ ಹಳೆಯದು.!

14/01/2026 8:22 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು.!

14/01/2026 7:59 AM1 Min Read

ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಭರ್ಜರಿ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

14/01/2026 7:48 AM2 Mins Read
Recent News

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಬಗ್ಗೆ ಸ್ಪೋಟಕ ರಹಸ್ಯ ಬಹಿರಂಗ : ನಿಧಿ 300 ವರ್ಷಗಳಿಗಿಂತ ಹಳೆಯದು.!

14/01/2026 8:22 AM

Heart Attack: ಶೇ. 99ರಷ್ಟು ಹೃದಯಾಘಾತಕ್ಕೆ ಈ 4 ಅಂಶಗಳೇ ಕಾರಣ: ಹೊಸ ಸಂಶೋಧನೆಯಿಂದ ಬಯಲಾದ ಶಾಕಿಂಗ್ ಮಾಹಿತಿ!

14/01/2026 8:16 AM

ಇನ್ಮುಂದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಕೇವಲ ದಂಡವಲ್ಲ, ವಿಮೆ ಕೂಡ ದುಬಾರಿ!

14/01/2026 8:00 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು.!

14/01/2026 7:59 AM
State News
KARNATAKA

BREAKING : ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಬಗ್ಗೆ ಸ್ಪೋಟಕ ರಹಸ್ಯ ಬಹಿರಂಗ : ನಿಧಿ 300 ವರ್ಷಗಳಿಗಿಂತ ಹಳೆಯದು.!

By kannadanewsnow5714/01/2026 8:22 AM KARNATAKA 1 Min Read

ಗದಗ : ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಬಗ್ಗೆ ಸ್ಪೋಟಕ ರಹಸ್ಯ ಬಯಲಾಗಿದ್ದು, ಈ ನಿಧಿಯು 300 ವರ್ಷಗಳಿಗಿಂತ ಹಳೆಯದು, ವಿಜಯನಗರ…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು.!

14/01/2026 7:59 AM

ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಭರ್ಜರಿ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

14/01/2026 7:48 AM

BIG NEWS : ಖಜಾನೆಗಳಲ್ಲಿ ವರ್ಷಾಂತ್ಯದ ಬಿಲ್ಲುಗಳನ್ನು ಮಾ.31 ರೊಳಗೆ ಸಲ್ಲಿಕೆ : ರಾಜ್ಯ ಸರ್ಕಾರ ಮಹತ್ವದ ಆದೇಶ

14/01/2026 7:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.