Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೋವಿಡ್ ಲಸಿಕೆಗಳ ಕುರಿತ ಸಿಎಂ ಸಿದ್ದರಾಮಯ್ಯ ಹೇಳಿಕೆಗಳು ಪೂರ್ತಿ ‘ತಪ್ಪು’ ; ‘ಬಯೋಕಾನ್’ ಮುಖ್ಯಸ್ಥೆ

03/07/2025 3:09 PM

‘ನಮ್ಮ ಲಸಿಕೆ ಸುರಕ್ಷಿತ, ಹಠಾತ್ ಸಾವುಗಳಿಗೆ ಕಾರಣವಲ್ಲ’ : ಹೃದಯಾಘಾತಕ್ಕೆ ‘ಲಸಿಕೆ’ ಕಾರಣ ಎಂದ ಸಿಎಂ ‘ಸಿದ್ದು’ಗೆ ‘ಕೋವಿಶೀಲ್ಡ್’ ಸ್ಪಷ್ಟನೆ

03/07/2025 2:55 PM

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಅರೆಕಾಲಿಕ ವರದಿಗಾರ, ಸಂಪಾಕರಿಗೂ ಸಿಗುತ್ತೆ ಉಚಿತ ಬಸ್ ಪಾಸ್

03/07/2025 2:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ₹900 ಕೋಟಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರದ ಸಮ್ಮತಿ
KARNATAKA

₹900 ಕೋಟಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರದ ಸಮ್ಮತಿ

By kannadanewsnow0920/03/2025 4:36 PM

ನವದೆಹಲಿ: ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಸಂಸತ್ ಭವನದಲ್ಲಿರುವ ಗಡ್ಕರಿ ಅವರ ನಿವಾಸಕ್ಕೆ ತೆರಳಿ ಭೇಟಿಯಾದ ಕುಮಾರಸ್ವಾಮಿ ಅವರು; ಈಗಾಗಲೇ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರವು ಯೋಜನೆಗೆ ಡಿಪಿಆರ್ ಮಾಡಿದೆ. ಆದರೆ ಪ್ರಾಧಿಕಾರದ ಅಂದಾಜು ವೆಚ್ಚ ಯೋಜನೆಗೆ ಸಾಕಾಗುವುದಿಲ್ಲ. ₹900 ಕೋಟಿ ವೆಚ್ಚದ ಪರಿಷ್ಕೃತ ಯೋಜನೆಗೆ ಒಪ್ಪಿಗೆ ಕೊಟ್ಟು ಅನುಷ್ಠಾನಗೊಳಿಸಬೇಕು ಎಂದು ಸಚಿವರು ಮಾಡಿದ ಮನವಿಗೆ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಈ ಬಗ್ಗೆ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಕುಮಾರಸ್ವಾಮಿ ಅವರು, ಭೂಸ್ವಾಧೀನಕ್ಕೆ ₹550 ಕೋಟಿ ಹಾಗೂ ನಿರ್ಮಾಣ ಕಾರ್ಯಕ್ಕೆ ₹350 ಕೋಟಿ ಬೇಕಾಗುತ್ತದೆ. ಹೀಗಾಗಿ ಯೋಜನೆಗೆ ₹900 ಕೋಟಿ ಅಗತ್ಯವಿದೆ ಎಂಬುದನ್ನು ಗಡ್ಕರಿ ಅವರಿಗೆ ಮನವರಿಕೆ ಮಾಡಿಕೊಟ್ಟರು.

ವರ್ತುಲ ರಸ್ತೆ ಯೋಜನೆ ಅನುಷ್ಠಾನಗೊಂಡರೆ ಮಂಡ್ಯ ನಗರದ ಬೆಳವಣಿಗೆ, ಅಭಿವೃದ್ಧಿಗೆ ಬಹಳ ಅನುಕೂಲ ಆಗುತ್ತದೆ ಎಂಬುದನ್ನು ಸಚಿವರಿಗೆ ಕುಮಾರಸ್ವಾಮಿ ಅವರು ವಿವರವಾಗಿ ತಿಳಿಸಿದರು.

ಪಾಂಡವಪುರ: ನಾಲ್ಕು ಪಥ ಹೆದ್ದಾರಿ ಅಭಿವೃದ್ಧಿ:

ಜೇವರ್ಗಿ- ಚಾಮರಾಜನಗರ ನಡುವೆ ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥದಿಂದ ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿ ಮಾಡುವ ಬಗ್ಗೆಯು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು.

ಜೇವರ್ಗಿ- ಚಾಮರಾಜನಗರ ನಡುವೆ ಪಾಂಡವಪುರದ ಹಾಡುವ ಹೆದ್ದಾರಿ 150ಎ ದ್ವಿಪಥ ಹೆದ್ದಾರಿಯನ್ನು 597-560ರಿಂದ 606-670 ಕಿ.ಮೀ.ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿಪಡಿಸಲು ಒಪ್ಪಿಗೆ ಕೊಡಬೇಕು ಹಾಗೂ ಪಾಂಡವಪುರ ರೈಲು ನಿಲ್ದಾಣದ ಬಳಿ ಇರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಣೆ ಮಾಡುವ ರೈತರ ಅನುಕೂಲಕ್ಕಾಗಿ ಹೆದ್ದಾರಿ ಪಕ್ಷದಲ್ಲಿಯೇ ಟ್ರಕ್ ವೆ (Truck way) ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.

ಇತ್ತೀಚೆಗೆ ತಾವು ಯೋಜನೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದಾಗ ಸ್ಥಳೀಯ ಜನರು ಈ ಬಗ್ಗೆ ಮನವಿ ಮಾಡಿದ್ದರು. ಅಲ್ಲದೆ, ಖುದ್ದು ಸ್ಥಳದಲ್ಲಿ ಪರಿಶೀಲನೆಯನ್ನು ನಡೆಸಿದ್ದೇನೆ. ಹೀಗಾಗಿ ಟ್ರಕ್ ವೆ ನಿರ್ಮಾಣ ಅಗತ್ಯವಾಗಿ ಆಗಬೇಕಿದೆ ಎಂದು ಸಚಿವರು ಗಡ್ಕರಿ ಅವರಿಗೆ ಹೇಳಿದರು.

ಹೆದ್ದಾರಿಯನ್ನು ನಾಲ್ಕು ಪಥಕ್ಕೆ ಅಭಿವೃದ್ಧಿ ಮಾಡುವುದರಿಂದ ಈ ಭಾಗದ ಅಭಿವೃದ್ಧಿ, ಸರಕು ಸಾಗಣೆಗೆ ಅನುಕೂಲ ಆಗುತ್ತದೆ. ವ್ಯಾಪಾರ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ದೊರೆಯುತ್ತದೆ ಎಂದು ಕುಮಾರಸ್ವಾಮಿ ಅವರು ಗಡ್ಕರಿ ಅವರ ಗಮನ ಸೆಳೆದರು.

ಅಲ್ಲದೆ, ಕೋಲಾರ ಲೋಕಸಭೆ ಕ್ಷೇತ್ರವೂ ಸೇರಿ ಕರ್ನಾಟಕದ ಹಲವಾರು ಹೆದ್ದಾರಿ ಯೋಜನೆಗಳ ಮಂಜೂರಾತಿ ಹಾಗೂ ಚಾಲ್ತಿಯಲ್ಲಿರುವ ಯೋಜನೆಗಳನ್ನು ವೇಗಗತಿಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಗಡ್ಕರಿ ಅವರೊಂದಿಗೆ ಸಚಿವರು ಮಾತುಕತೆ ನಡೆಸಿದರು.

ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ಹಾಗೂ ಕೋಲಾರ ಸಂಸದ ಮಲ್ಲೇಶ್ ಬಾಬು ಅವರು ನನ್ನ ಜತೆಯಲ್ಲಿದ್ದರು.

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಉತ್ತಮ ಆರಂಭ ಸಿಕ್ಕಿದೆ. ಈಗಾಗಲೇ ನಿತಿನ್ ಗಡ್ಕರಿ ಅವರ ಸಹಕಾರದಿಂದ ಜಿಲೆಯಲ್ಲಿ ಹಾದು ಹೋಗುವ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿ ಮಾಡುವ ಕೆಲಸಕ್ಕೆ ಚಾಲನೆ ಸಿಕ್ಕಿದೆ. ₹900 ಕೋಟಿ ವೆಚ್ಚದಲ್ಲಿ ಮಂಡ್ಯ ನಗರ ವರ್ತುಲ ಅಭಿವೃದ್ಧಿಗೆ ಚಾಲನೆ ಸಿಗುತ್ತಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಮಂಡ್ಯ ನಗರವು ಉತ್ತಮ ಸಾರಿಗೆ ವ್ಯವಸ್ಥೆಯಿಂದ ಮುಂಚೂಣಿ ನಗರವಾಗಿ ರೂಪುಗೊಳ್ಳಬೇಕು ಎಂಬುದು ನನ್ನ ಕನಸಾಗಿದೆ.

BIG BREAKING: ‘ಹನಿಟ್ರ್ಯಾಪ್’ ಆರೋಪ: ರಾಜ್ಯ ಸರ್ಕಾರದಿಂದ ‘ಉನ್ನತ ಮಟ್ಟದ ತನಿಖೆ’ಗೆ ಆದೇಶ

BREAKING ಛತ್ತೀಸ್ ಗಢದ ಬಿಜಾಪುರದಲ್ಲಿ ಭದ್ರತಾ ಪಡೆಗಳ ಎನ್ಕೌಂಟರ್ : 22 ಮಂದಿ ನಕ್ಸಲರ ಹತ್ಯೆ | Naxal Encounter

BREAKING NEWS: ವಿಧಾನ ಪರಿಷತ್ತಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025ಕ್ಕೆ ಅಂಗೀಕಾರ

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಅರೆಕಾಲಿಕ ವರದಿಗಾರ, ಸಂಪಾಕರಿಗೂ ಸಿಗುತ್ತೆ ಉಚಿತ ಬಸ್ ಪಾಸ್

03/07/2025 2:43 PM1 Min Read

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

03/07/2025 1:37 PM1 Min Read

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM2 Mins Read
Recent News

ಕೋವಿಡ್ ಲಸಿಕೆಗಳ ಕುರಿತ ಸಿಎಂ ಸಿದ್ದರಾಮಯ್ಯ ಹೇಳಿಕೆಗಳು ಪೂರ್ತಿ ‘ತಪ್ಪು’ ; ‘ಬಯೋಕಾನ್’ ಮುಖ್ಯಸ್ಥೆ

03/07/2025 3:09 PM

‘ನಮ್ಮ ಲಸಿಕೆ ಸುರಕ್ಷಿತ, ಹಠಾತ್ ಸಾವುಗಳಿಗೆ ಕಾರಣವಲ್ಲ’ : ಹೃದಯಾಘಾತಕ್ಕೆ ‘ಲಸಿಕೆ’ ಕಾರಣ ಎಂದ ಸಿಎಂ ‘ಸಿದ್ದು’ಗೆ ‘ಕೋವಿಶೀಲ್ಡ್’ ಸ್ಪಷ್ಟನೆ

03/07/2025 2:55 PM

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಅರೆಕಾಲಿಕ ವರದಿಗಾರ, ಸಂಪಾಕರಿಗೂ ಸಿಗುತ್ತೆ ಉಚಿತ ಬಸ್ ಪಾಸ್

03/07/2025 2:43 PM

BREAKING : ಖ್ಯಾತ ಲಿವರ್ಪೂಲ್ ತಾರೆ ‘ಡಯಾಗೊ’ ನಿಧನ, ಮದುವೆಯಾಗಿ 2 ವಾರ ಕಳೆದಿತ್ತಷ್ಟೇ.!

03/07/2025 2:39 PM
State News
KARNATAKA

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಅರೆಕಾಲಿಕ ವರದಿಗಾರ, ಸಂಪಾಕರಿಗೂ ಸಿಗುತ್ತೆ ಉಚಿತ ಬಸ್ ಪಾಸ್

By kannadanewsnow0903/07/2025 2:43 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಬಸ್ ಪಾಸ್…

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : BMTC ಬಸ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಗೆ ಗಂಭೀರ ಗಾಯ!

03/07/2025 1:37 PM

BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

03/07/2025 1:31 PM

BREAKING : ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : ಎನ್.ರವಿಕುಮಾರ್ ವಿರುದ್ಧ ಸಭಾಪತಿಗೆ ದೂರು ಸಲ್ಲಿಕೆ

03/07/2025 1:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.