ರಾಮನಗರ: ಜಿಲ್ಲೆಯ ಅಂಗನವಾಡಿ ಕೇಂದ್ರವೊಂದಕ್ಕೆ ತೆರಳುತ್ತಿದ್ದಂತ ಮಗುವೊಂದು ಹಠ ಮಾಡುತ್ತದೆ ಎನ್ನುವ ಕಾರಣಕ್ಕೆ, ಅಲ್ಲಿನ ಸಹಾಯಕಿಯೊಬ್ಬರು ಕೈಗೆ ಬರೆ, ಡೈಪರ್ ಗೆ ಖಾರದಪುಡಿ ಹಾಕಿ ವಿಕೃತಿ ಮೆರೆದಿದ್ದರು. ಈ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆ, ಅಂಗನವಾಡಿ ಸಹಾಯಕಿಯನ್ನು ಅಮಾನತುಗೊಳಿಸಿ ಇಲಾಖೆ ಆದೇಶಿಸಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಹಾರಾಜಕಟ್ಟೆಯಲ್ಲಿನ ಅಂಗನವಾಡಿ ಕೇಂದ್ರದ ಸಹಾಯಕಿ ಚಂದ್ರಮ್ಮ ಎಂಬುವರು ರಮೇಶ್ ನಾಯಕ್ ಹಾಗೂ ಚೈತ್ರಾ ಬಾಯಿ ದಂಪತಿಯ ಪುತ್ರ ದೀಕ್ಷಿತ್ ಹಠ ಮಾಡುತ್ತಾನೆ ಅಂತ ಕೈಗೆ ಬರೆ, ಡೈಪರ್ ನಲ್ಲಿ ಖಾರದಪುಡಿ ಹಾಕಿ ವಿಕೃತಿ ಮೆರೆದಿದ್ದರು. ಇದನ್ನು ಗಮನಿಸಿದ್ದಂತ ಪೋಷಕರು, ಅಂಗನವಾಡಿ ಸಹಾಯಕಿಯ ವಿಕೃತಿ ವಿರುದ್ಧ ಪೊಲೀಸರಿಗೆ, ಇಲಾಖೆಗೆ ದೂರು ನೀಡಿದ್ದರು.
ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಹಾರಾಜಕಟ್ಟೆ ಗ್ರಾಮ ಅಂಗನವಾಡಿ ಕೇಂದ್ರದ ಸಹಾಯಕಿ ಚಂದ್ರಮ್ಮ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಅಂದಹಾಗೇ, ಪುಟ್ಟ ಮಗು ದೀಕ್ಷಿತ್ ಹಠ ಮಾಡುತ್ತಿದ್ದ ಕಾರಣ ಸಹಾಯಕಿ ಚಂದ್ರಮ್ಮ ಮಗುವಿನ ಎಡಗೈ ಮೇಲೆ ಬರೆ ಹಾಕಿ ಡೈಪರ್ ಒಳಗೆ ಕಾರದ ಪುಡಿ ಹಾಕಿರುವ ಘಟನೆ ಬೆಳಕಿಗೆ ಬಂದಿತ್ತು.
ಶಿವಮೊಗ್ಗ: ಮಾ.23ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut