ತುಮಕೂರು : ರಮೇಶ್ ಜಾರಕಿಹೊಳಿ, ಪ್ರಜ್ಬಲ್ ಹೇಗೆ ಟಾರ್ಗೆಟ್ ಮಾಡಿದ್ದಾರೋ ಹಾಗೆ ನನ್ನನ್ನ ಟಾರ್ಗೆಟ್ ಮಾಡಿದ್ದಾರೆ. ಇದರ ಹಿಂದೆ ಯಾರಿದ್ದಾರೋ ಗೊತ್ತಿಲ್ಲ ಎಂದರಲ್ಲದೇ ನಾನು ಯಾರಿಗೂ ಕೆಟ್ಟದ್ದು ಬಯಸಿಲ್ಲ, ಹಾಗಾಗಿ ನನಗೆ ಕೆಟ್ಟದಾಗಲ್ಲ. ಹಾಗಂತ ಸಾರ್ವಜನಿಕ ಜೀವನದಲ್ಲಿ ತೇಜೋವಾಧೆ ಮಾಡೋದು ಸರಿಯಲ್ಲ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.
ಹನಿಟ್ರ್ಯಾಪ್ ವಿಚಾರವಾಗಿ ತುಮಕೂರಿನಲ್ಲಿ ಮಾತನಾಡಿದ ಅವರು, ಹನಿ ಟ್ರಾಪ್ ವಿಚಾರದಲ್ಲಿ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಇವತ್ತು ಸಿಎಂ ಭೇಟಿ ಮಾಡೋದಿಲ್ಲ. ನಾಲ್ಕೈದು ದಿನದ ನಂತರ ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳನ್ನ ಭೇಟಿ ಮಾಡುತ್ತೇನೆ. ಗೃಹ ಸಚಿವರಿಗೆ ದೂರು ಕೊಡುತ್ತೇನೆ. ದೇವರು ನಿನಗೆ ಹೇಗೆ ಬುದ್ದಿ ಕೊಡುತ್ತೆ ಹಾಗೋ ಮಾಡು ಎಂದು ಸಿಎಂ ಹೇಳಿದ್ದಾರೆ. ಹನಿ ಟ್ರಾಪ್ ಮಾಡಲು ಬಂದವರಿಗೆ ಕಪಾಳಕ್ಕೆ ಹೊಡೆದ್ದು ನಿಜ. ಯಾರು ಯಾಕೆ ನನ್ನ ಟಾರ್ಗೆಟ್ ಮಾಡಿದ್ರು ಅಂತಾ ಗೊತ್ತಿಲ್ಲ ಎಂದರು.
ಹನಿ ಟ್ರಾಪ್ ವಿಚಾರದಲ್ಲಿ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಹನಿ ಟ್ರ್ಯಾಪ್ ಮಾಡಲು ಬಂದವರಿಗೆ ಕಪಾಳಕ್ಕೆ ಹೊಡೆದ್ದು ನಿಜ.ಹನಿಟ್ರ್ಯಾಪ್ ಯತ್ನ ಒಂದೂವರೆ ತಿಂಗಳಿಂದ ನಡೆದಿದೆ. ವಿಷ ಕನ್ಯೆಯರ ರೀತಿ ಇಲ್ಲೂ ಇದ್ದಾರೆ. ಆದ್ದರಿಂದ ಈ ವಿಚಾರ ಹೈಕಮಾಂಡ್ ಗಮನಕ್ಕೆ ತರುವ ಬಗ್ಗೆ ಚಿಂತನೆ ಇದೆ. ಸಚಿವ ಸತೀಶ್ ಜಾರಕಿಹೊಳಿ ಇದನ್ನು ಗಂಭೀರವಾಗಿ ಪರಿಗಣಿಸೋಣ ಅಂದಿದ್ದಾರೆ. ಅವರು ಏನೋ ಹೇಳುತ್ತಾರೆ ನೋಡುನಾ ಎಂದು ಹೇಳಿದರು.