Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ಗುರು ಪೂರ್ಣಿಮೆ: ಈ ಒಂದು ಕೆಲಸ ಮಾಡಿದ್ರೇ, ಜೀವನದ ಪ್ರಗತಿಗೆ ಎಂದಿಗೂ ಅಡ್ಡಿಯಾಗುವುದಿಲ್ಲ

10/07/2025 5:23 AM

ಇಂಜಿನಿಯರಿಂಗ್ ಸೇರಿ ವಿವಿಧ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟಿಸಿದ ಕೆಇಎ

10/07/2025 2:45 AM

‘UPI, ಚಿರತೆಗಳು, $800 ಮಿಲಿಯನ್ ವ್ಯಾಪಾರ, ಕ್ಯಾನ್ಸರ್ ತಂತ್ರಜ್ಞಾನ’ : ಭಾರತ-ನಮೀಬಿಯಾ ಬಾಂಧವ್ಯ ಶ್ಲಾಘಿಸಿದ ‘ಪ್ರಧಾನಿ ಮೋದಿ’

09/07/2025 10:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS: ರಾಜ್ಯದಲ್ಲಿ ‘ನಂದಿನಿ ಮೊಸರಿನ ದರ’ ಪ್ರತಿ ಲೀಟರ್ ಗೆ 4 ರೂ ಹೆಚ್ಚಳ | Nandini Curd Price Hike
KARNATAKA

BREAKING NEWS: ರಾಜ್ಯದಲ್ಲಿ ‘ನಂದಿನಿ ಮೊಸರಿನ ದರ’ ಪ್ರತಿ ಲೀಟರ್ ಗೆ 4 ರೂ ಹೆಚ್ಚಳ | Nandini Curd Price Hike

By kannadanewsnow0927/03/2025 5:22 PM

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡಿರುವುದು ಅಧಿಕೃತಗೊಂಡಿತ್ತು. ಆ ಬೆನ್ನಲ್ಲೇ ನಂದಿನಿ ಮೊಸರಿನ ದರವನ್ನು ಪರಿಷ್ಕರಿಸಲಾಗಿದೆ. ಪ್ರತಿ ಲೀಟರ್ ಮೊಸರಿನ ದರವನ್ನು 4 ರೂ ಹೆಚ್ಚಳ ಮಾಡಲಾಗಿದೆ.

ಈ ಬಗ್ಗೆ ಕರ್ನಾಟಕ ಹಾಲು ಮಹಾಮಂಡಲ(KMF) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಹಾಲು ಮಹಾಮಂಡಳ (ಕೆ.ಎಂ.ಎಫ್) ಕಳೆದ ಐದು ದಶಕಗಳಿಂದ ರಾಜ್ಯದ ಹಾಲು ಉತ್ಪಾದಕರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ರೈತರ ಆರ್ಥಿಕ ಸದೃಡತೆಗಾಗಿ ಕೆಲಸ ಮಾಡುತ್ತಿದೆ. ಕೆ.ಎಂ.ಎಫ್‌ನ ಸದಸ್ಯ ಒಕ್ಕೂಟಗಳು ಹಾಲು ಉತ್ಪಾದಕರಿಂದ ಹಾಲು ಖರೀದಿಸಿ, ಸಂಸ್ಕರಿಸಿ, ನಂದಿನಿ ಬ್ರಾಂಡ್ ಅಡಿಯಲ್ಲಿ ವಿವಿಧ ಬಗೆಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಒದಗಿಸುತ್ತಿದೆ ಎಂದಿದೆ.

ಪ್ರಸ್ತುತ, ರಾಜ್ಯದ 26.84 ಲಕ್ಷ ಹೈನುಗಾರ ರೈತರ ಪೈಕಿ ಸರಾಸರಿ 8.90 ಲಕ್ಷ ರೈತರು – ಪ್ರತಿ ದಿನ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಪೂರೈಸುತ್ತಿದ್ದಾರೆ. ದೇಶದ ಎರಡನೇ ಅತಿದೊಡ್ಡ ಸಹಕಾರ ಹೈನೋದ್ಯಮವಾಗಿರುವ ಕೆ.ಎಂ.ಎಫ್, ಗ್ರಾಹಕರಿಂದ ಬರುವ ಪ್ರತಿಯೊಂದು ರೂಪಾಯಿಯಲ್ಲಿ 80 ಪೈಸೆಗಿಂತ ಹೆಚ್ಚು ಹಣ ರೈತರಿಗೆ ನೇರವಾಗಿ ನೀಡುತ್ತಿದೆ. ಪ್ರತಿದಿನ, ರಾಜ್ಯದ ಹಾಲು ರೂ.28.60 ಕೋಟಿ ಹಣ ನೇರವಾಗಿ ಪಾವತಿ ಉತ್ಪಾದಕರಿಗೆ ಸರಾಸರಿ ಮಾಡಲಾಗುತ್ತಿದೆ ಎಂಬುದಾಗಿ ತಿಳಿಸಿದೆ.

ಕೆ.ಎಂ.ಎಫ್ ಹೈನುಗಾರಿಕೆಗೆ ಪೂರಕವಾಗಿ ಪಶುವೈದ್ಯಕೀಯ ಸೇವೆ, ಕೃತಕ ಗರ್ಭಧಾರಣೆ, ಪಶು ಆಹಾರ ಪೂರೈಕೆ, ಮೇವು ಅಭಿವೃದ್ಧಿ ತರಬೇತಿ ಮುಂತಾದ ಸೌಲಭ್ಯಗಳನ್ನು ನಿರಂತರವಾಗಿ ಒದಗಿಸುತ್ತಿದೆ. ರೈತರ ಸುಧಾರಿತ ಅನುಕೂಲಕ್ಕಾಗಿ ಮೇವು ಕತ್ತರಿಸುವ ಯಂತ್ರ, ಹಾಲು ಕರೆಯುವ ಯಂತ್ರ, ರಬ್ಬರ್ ಮ್ಯಾಟ್ ಮುಂತಾದ ಉಪಕರಣಗಳನ್ನೂ ವಿತರಿಸುತ್ತಿದೆ. ವರ್ಷದ ಎಲ್ಲಾ ಸಮಯದಲ್ಲೂ ರೈತರಿಂದ ನಿರಂತರವಾಗಿ ಹಾಲು ಖರೀದಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಪಶು ಆಹಾರ ಉತ್ಪಾದನೆಗೆ ಬಳಸುವ ಮೆಕ್ಕೆಜೋಳ, ಅಕ್ಕಿತೌಡು, ಹತ್ತಿಕಾಳು ಹಿಂಡಿ, ಖನಿಜ ಪದಾರ್ಥಗಳ ಬೆಲೆ ಶೇ.35-40ರಷ್ಟು ಹೆಚ್ಚಳವಾಗಿದೆ ಹಾಗೂ ಹೈನುರಾಸುಗಳ ನಿರ್ವಹಣಾ ವೆಚ್ಚವೂ ಸಹ ಗಣನೀಯವಾಗಿ ಅಧಿಕವಾಗಿದೆ ಎಂದಿದೆ.

ದಿನಾಂಕ: 27.03.2025ರಂದು ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ರಾಜ್ಯದಲ್ಲಿ ಹೈನೋದ್ಯಮಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರವನ್ನು ಪ್ರತಿ ಲೀಟರ್/ಕೆಜಿಗೆ ರೂ.4/- ರಂತೆ ಹೆಚ್ಚಿಸಲು ಸಮ್ಮತಿಸಲಾಯಿತು. ದರ ಪರಿಷ್ಕರಣೆಯ ಮೊತ್ತವು ರಾಜ್ಯದ ಹಾಲು ಉತ್ಪಾದಕರಿಗೆ ನೇರವಾಗಿ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಈ ಹಿಂದೆ ದಿನಾಂಕ 26.06.2024 ರಿಂದ ಪ್ರತಿ 1 ಲೀಟ‌ರ್ ನಂದಿನಿ ಹಾಲಿಗೆ 50 ಮಿಲಿ ಹೆಚ್ಚುವರಿ ನೀಡಿ ಸದರಿ ಪ್ರಮಾಣಕ್ಕೆ ರೂ.2/- ರಂತೆ ಹೆಚ್ಚಿಸಲಾಗಿದ್ದ ದರವನ್ನು ಹಿಂಪಡೆದು ಮೊದಲಿನಂತೆ ಯಥಾಸ್ಥಿತಿ 500 ಮಿಲಿ ಮತ್ತು 1 ಲೀಟರ್ ಮೊಟ್ಟಣದಲ್ಲಿ ಪ್ರಸ್ತುತ ರೂ.4/- ದರ ಪರಿಷ್ಕರಣೆಯನ್ನು ಅಳವಡಿಸಿಕೊಂಡು ಮಾರಾಟಕ್ಕೆ ಕ್ರಮವಿಡಲು ತಿಳಿಸಲಾಗಿದೆ ಎಂದು ಹೇಳಿದೆ.

ಅದರಂತೆ ಪ್ರಮುಖ ಹಾಲಿನ ಮಾದರಿಗಳ ಮತ್ತು ಮೊಸರಿನ ಪರಿಷ್ಕರಿಸಿದ ಮಾರಾಟ ದರಗಳ ವಿವರಗಳು ಈ ಕೆಳಗಿನಂತಿರುತ್ತದೆ.

  • ಟೋನ್ಡ್ ಹಾಲು – ನೀಲಿ ಪೊಟ್ಟಣ : 42 ರಿಂದ 46 ರೂಗೆ ಎರಿಕೆ
  • ಹೋಮೋಜೀನೈಡ್ ಟೋನ್ಡ್ ಹಾಲು : 43 ರಿಂದ ರೂ.47ಕ್ಕೆ ಏರಿಕೆ.
  • ಹಸುವಿನ ಹಾಲು (ಹಸಿರು ಪೊಟ್ಟಣ) : 46 ರಿಂದ 50 ರೂಗೆ ಏರಿಕೆ
  • ಶುಭಂ (ಕೇಸರಿ ಪೊಟ್ಟಣ), ಸ್ಪೆಷಲ್ ಹಾಲು : 48 ರಿಂದ 52 ರೂಪಾಯಿಗೆ ಏರಿಕೆ
  • ಮೊಸರು, ಪ್ರತಿ ಕೆಜಿಗೆ: 50ರಿಂದ 54 ರೂಪಾಯಿಗೆ ಏರಿಕೆ

ವರದಿ: ವಸಂತ ಬಿ ಈಶ್ವರಗೆರೆ

BIG BREAKING: ಹಾಲಿನ ದರ ಏರಿಕೆ ಬೆನ್ನಲ್ಲೇ ‘ವಿದ್ಯುತ್ ದರ’ ಏರಿಕೆ ಶಾಕ್: ಪ್ರತಿ ಯೂನಿಟ್ ಗೆ ’36 ಪೈಸೆ’ ಹೆಚ್ಚಳ

BREAKING : ಕೇರಳದ ಸೀತಾದೇವಿ ಲವ್ ಕುಶ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದೆ ಪ್ರಿಯಾಂಕಾ ಗಾಂಧಿ | WATCH VIDEO

GOOD NEWS : ಶೀಘ್ರದಲ್ಲಿ ರೈತರ ಹಾಲಿನ ಬಾಕಿ ಪ್ರೋತ್ಸಾಹ ಧನ ಬಿಡುಗಡೆ : ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

Share. Facebook Twitter LinkedIn WhatsApp Email

Related Posts

ಇಂದು ಗುರು ಪೂರ್ಣಿಮೆ: ಈ ಒಂದು ಕೆಲಸ ಮಾಡಿದ್ರೇ, ಜೀವನದ ಪ್ರಗತಿಗೆ ಎಂದಿಗೂ ಅಡ್ಡಿಯಾಗುವುದಿಲ್ಲ

10/07/2025 5:23 AM3 Mins Read

ಇಂಜಿನಿಯರಿಂಗ್ ಸೇರಿ ವಿವಿಧ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟಿಸಿದ ಕೆಇಎ

10/07/2025 2:45 AM1 Min Read

ಧಾರವಾಡದಲ್ಲಿ ಕನ್ನಡ ಕಲಿಕಾ ಕೇಂದ್ರ ಆರಂಭಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಿದ್ಧವಿದೆ: ಪುರುಷೋತ್ತಮ ಬಿಳಿಮಲೆ

09/07/2025 9:33 PM3 Mins Read
Recent News

ಇಂದು ಗುರು ಪೂರ್ಣಿಮೆ: ಈ ಒಂದು ಕೆಲಸ ಮಾಡಿದ್ರೇ, ಜೀವನದ ಪ್ರಗತಿಗೆ ಎಂದಿಗೂ ಅಡ್ಡಿಯಾಗುವುದಿಲ್ಲ

10/07/2025 5:23 AM

ಇಂಜಿನಿಯರಿಂಗ್ ಸೇರಿ ವಿವಿಧ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟಿಸಿದ ಕೆಇಎ

10/07/2025 2:45 AM

‘UPI, ಚಿರತೆಗಳು, $800 ಮಿಲಿಯನ್ ವ್ಯಾಪಾರ, ಕ್ಯಾನ್ಸರ್ ತಂತ್ರಜ್ಞಾನ’ : ಭಾರತ-ನಮೀಬಿಯಾ ಬಾಂಧವ್ಯ ಶ್ಲಾಘಿಸಿದ ‘ಪ್ರಧಾನಿ ಮೋದಿ’

09/07/2025 10:07 PM

BREAKING: IPL 2025ರ ಟಿಕೆಟ್ ಹಗರಣ: ಹೈದರಾಬಾದ್ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷನ ಬಂಧನ

09/07/2025 9:39 PM
State News
KARNATAKA

ಇಂದು ಗುರು ಪೂರ್ಣಿಮೆ: ಈ ಒಂದು ಕೆಲಸ ಮಾಡಿದ್ರೇ, ಜೀವನದ ಪ್ರಗತಿಗೆ ಎಂದಿಗೂ ಅಡ್ಡಿಯಾಗುವುದಿಲ್ಲ

By kannadanewsnow0910/07/2025 5:23 AM KARNATAKA 3 Mins Read

ಗುರುವಿನ ಅನುಗ್ರಹವಿಲ್ಲದಿದ್ದರೆ ಭಗವಂತನ ಅನುಗ್ರಹವಿಲ್ಲ ಎಂದು ಹೇಳುತ್ತಾರೆ. ಗುರುಭಗವಾನ್ ಅವರ ಆಶೀರ್ವಾದವಿದ್ದರೆ ಮಾತ್ರ ಜೀವನದಲ್ಲಿ ಅತ್ಯಂತ ವೇಗವಾಗಿ ಪ್ರಗತಿಯಾಗುತ್ತದೆ. ಗುರುವಿನ…

ಇಂಜಿನಿಯರಿಂಗ್ ಸೇರಿ ವಿವಿಧ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟಿಸಿದ ಕೆಇಎ

10/07/2025 2:45 AM

ಧಾರವಾಡದಲ್ಲಿ ಕನ್ನಡ ಕಲಿಕಾ ಕೇಂದ್ರ ಆರಂಭಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಿದ್ಧವಿದೆ: ಪುರುಷೋತ್ತಮ ಬಿಳಿಮಲೆ

09/07/2025 9:33 PM

ಗ್ರಾಹಕನಿಗೆ ಮೋಸ ಮಾಡಿದ ಬೆಂಗಳೂರಿನ ‘ಲೈಫ್ ಸ್ಟೈಲ್ ಹಾಲಿಡೇಸ್’ಗೆ ಕೋರ್ಟ್ ದಂಡ, ಪರಿಹಾರ ನೀಡಲು ಆದೇಶ

09/07/2025 9:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.