Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ

17/06/2025 7:45 PM

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

17/06/2025 7:35 PM

ನಿಮ್ಮ ತಲೆಯ ಮೇಲೆ ಎರಡು ‘ಸುಳಿ’ಗಳಿದ್ರೆ ಏನಾಗುತ್ತೆ ಗೊತ್ತಾ.?

17/06/2025 7:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಕಳಪೆ ಮೂಲಸೌಕರ್ಯ ಹೊಂದಿರುವ ‘ಪ್ಯಾರಾ ಮೆಡಿಕಲ್ ಸಂಸ್ಥೆ’ ಮುಚ್ಚಲು ಆದೇಶ
KARNATAKA

ರಾಜ್ಯ ಸರ್ಕಾರದಿಂದ ಕಳಪೆ ಮೂಲಸೌಕರ್ಯ ಹೊಂದಿರುವ ‘ಪ್ಯಾರಾ ಮೆಡಿಕಲ್ ಸಂಸ್ಥೆ’ ಮುಚ್ಚಲು ಆದೇಶ

By kannadanewsnow0927/03/2025 8:10 PM

ಬೆಂಗಳೂರು : ಕಳಪೆ ಗುಣಮಟ್ಟದ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳಪೆ ಮೂಲ ಸೌಕರ್ಯ ಹೊಂದಿರುವ ಸಂಸ್ಥೆಗಳು ಹಾಗೂ ಅಂಗಸಂಸ್ಥೆಗಳನ್ನು ಮುಚ್ಚಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ನಿರ್ದೇಶನ ನೀಡಿದ್ದಾರೆ.

ಮೂಲಸೌಕರ್ಯ ಮತ್ತು ಬೋಧನಾ ಮಾನದಂಡಗಳನ್ನು ಪೂರೈಸಲು ವಿಫಲವಾದ ಸಂಸ್ಥೆಗಳನ್ನು ಕೂಡಲೇ ಮುಚ್ಚುವಂತೆ ಸೂಚನೆ ನೀಡಲಾಗಿದೆ.

ಗುರುವಾರ ವಿಕಾಸಸೌಧದಲ್ಲಿ ನಡೆದ ರಾಜ್ಯ ಪ್ಯಾರಾ-ಮೆಡಿಕಲ್ ಮಂಡಳಿಯ ಪರಿಶೀಲನಾ ಸಭೆಯಲ್ಲಿ ಸಚಿವರು, ಹಲವಾರು ಖಾಸಗಿ ಕಾಲೇಜುಗಳಲ್ಲಿನ ನ್ಯೂನತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಅಸಮರ್ಪಕ ಸೌಲಭ್ಯಗಳೊಂದಿಗೆ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜುಗಳಿವೆ. ಒಂದು ಸಂಸ್ಥೆಯು ನೂರಾರು ವಿದ್ಯಾರ್ಥಿಗಳಿಗೆ ಒಂದೇ ಸೂಕ್ಷ್ಮದರ್ಶಕವನ್ನು ನೀಡುತ್ತಿದೆ ಹಾಗೂ ಇನ್ನೊಂದು ಸರಿಯಾದ ಬೆಳಕಿಲ್ಲದೆ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ಸಚಿವರಿಗೆ ವರದಿ ನೀಡಿದ್ದಾರೆ.

ಭಾರಿ ಶುಲ್ಕ ಪಡೆದರೂ ಕಳಪೆ ಬೋಧನೆ

ಖಾಸಗಿ ಸಂಸ್ಥೆಗಳು ಅನುಮೋದನೆ ಪಡೆಯುವಾಗ ದಾರಿತಪ್ಪಿಸುವ ಮಾಹಿತಿ ನೀಡುತ್ತಿವೆ. ಭಾರಿ ಶುಲ್ಕವನ್ನು ವಿಧಿಸುತ್ತಿದ್ದರೂ ಅನುಮತಿಸಿದ ಗುಣಮಟ್ಟದ ಶಿಕ್ಷಣವನ್ನು ನೀಡಲು ವಿಫಲವಾಗಿವೆ ಎಂದು ಡಾ. ಪಾಟೀಲ್ ತಿಳಿಸಿದ್ದಾರೆ.

ರಾಜ್ಯದ 566 ಪ್ಯಾರಾ-ಮೆಡಿಕಲ್ ಕಾಲೇಜುಗಳಲ್ಲಿ 529 ಖಾಸಗಿಯಾಗಿ ನಡೆಸಲ್ಪಡುತ್ತಿದ್ದು, 2024-25 ಶೈಕ್ಷಣಿಕ ವರ್ಷದಲ್ಲಿ 22,256 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದೆ. ಖಾಸಗಿ ಕಾಲೇಜುಗಳು ಮೂರು ವರ್ಷಗಳ ಕೋರ್ಸ್‌ಗೆ ವಾರ್ಷಿಕವಾಗಿ 20,000 ರೂ. ಶುಲ್ಕ ವಿಧಿಸುತ್ತವೆ, ಸರ್ಕಾರಿ ಸಂಸ್ಥೆಗಳು 8,500 ರೂ. ಶುಲ್ಕ ಪಡೆಯುತ್ತಿವೆ.

ಹತ್ತಕ್ಕೂ ಹೆಚ್ಚು ಕಾಲೇಜುಗಳು ಪ್ಯಾರಾ-ಮೆಡಿಕಲ್ ಮಂಡಳಿಯ ಅನುಮೋದನೆಯಿಲ್ಲದೆ ವಿದ್ಯಾರ್ಥಿಗಳನ್ನು ಇತರ ಸಂಸ್ಥೆಗಳಿಗೆ ಅಕ್ರಮವಾಗಿ ವರ್ಗಾಯಿಸಿರುವುದು ಬಹಿರಂಗವಾಗಿದೆ. ಹಲವಾರು ಸಂಸ್ಥೆಗಳು ದಾಖಲಾದ ಕೋರ್ಸ್‌ಗಳಿಗೆ ಅಗತ್ಯವಾದ ಬೋಧನೆ, ತರಬೇತಿಯನ್ನು ನೀಡುವಲ್ಲಿ ವಿಫಲವಾಗಿರುವುದು ಕಂಡುಬಂದಿದೆ.

“ಯಾವುದೇ ಪರಿಗಣನೆಯಿಲ್ಲದೆ ಅಂತಹ ಕಾಲೇಜುಗಳನ್ನು ಮುಚ್ಚಿ. ನಾವು ಈ ಸಂಸ್ಥೆಗಳಿಗೆ ಕಠಿಣ ಸಂದೇಶವನ್ನು ಕಳುಹಿಸಬೇಕು”. ವಿದ್ಯಾರ್ಥಿಗಳನ್ನು ಉತ್ತಮ ಸಂಸ್ಥೆಗಳಿಗೆ ಸ್ಥಳಾಂತರಿಸಬೇಕು ಎಂದು ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ಯಾರಾ ಮೆಡಿಕಲ್‌ ಕ್ಷೇತ್ರದಲ್ಲಿ ವಿವಿಧ ತರಬೇತಿ

ಕರ್ನಾಟಕದಲ್ಲಿ ಪ್ಯಾರಾ-ಮೆಡಿಕಲ್ ಸ್ಟ್ರೀಮ್ ಅಡಿ ವಿವಿಧ ಡಿಪ್ಲೊಮಾ ಕೋರ್ಸ್‌ಗಳು, ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನ (DMLT), ಡಿಪ್ಲೊಮಾ ಇನ್ ಮೆಡಿಕಲ್ ಇಮೇಜಿಂಗ್ ತಂತ್ರಜ್ಞಾನ (DMIT), ಡಿಪ್ಲೊಮಾ ಇನ್ ಹೆಲ್ತ್ ಇನ್ಸ್ಪೆಕ್ಟರ್ (DHI), ಡಿಪ್ಲೊಮಾ ಇನ್ ಮೆಡಿಕಲ್ ರೆಕಾರ್ಡ್ಸ್ ತಂತ್ರಜ್ಞಾನ (DMRT), ಡಿಪ್ಲೊಮಾ ಇನ್ ಆಪರೇಷನ್ ಥಿಯೇಟರ್ ಮತ್ತು ಅರಿವಳಿಕೆ ತಂತ್ರಜ್ಞಾನ (DOT & AT), ಡಿಪ್ಲೊಮಾ ಇನ್ ಡಯಾಲಿಸಿಸ್ ತಂತ್ರಜ್ಞಾನ (DDT), ಡಿಪ್ಲೊಮಾ ಇನ್ ಆಪ್ತಾಲ್ಮಿಕ್ ತಂತ್ರಜ್ಞಾನ (DOT), ಡಿಪ್ಲೊಮಾ ಇನ್ ಡೆಂಟಲ್ ಮೆಕ್ಯಾನಿಕ್ಸ್ (DDM) ಮತ್ತು ಡಿಪ್ಲೊಮಾ ಇನ್ ಡೆಂಟಲ್ ಹೈಜೀನ್ (DDH) ತರಬೇತಿ ನೀಡಲಾಗುತ್ತಿದೆ. ಇದರಲ್ಲಿ ಯಶಸ್ವಿಯಾದವರು ಆಸ್ಪತ್ರೆಗಳು, ವೈದ್ಯಕೀಯ ಮತ್ತು ದಂತ ಕಾಲೇಜುಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕ್ಲಿನಿಕಲ್ ಪ್ರಯೋಗಾಲಯಗಳಲ್ಲಿ ಹುದ್ದೆಗಳಿಗೆ ಅರ್ಹರಾಗುತ್ತಾರೆ.

ಪ್ಯಾರಾ-ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಕಾಪಾಡುವುದು ಮತ್ತು ವಿದ್ಯಾರ್ಥಿಗಳು ಆರೋಗ್ಯ ಕ್ಷೇತ್ರದಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಹಾಗೂ ಸೂಕ್ತ ವೃತ್ತಿಜೀವನಕ್ಕೆ ಸರಿಯಾದ ತರಬೇತಿಯನ್ನು ಪಡೆಯುವುದು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ಪ್ಯಾರಾ-ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಕಾಪಾಡುವುದು ಮತ್ತು ವಿದ್ಯಾರ್ಥಿಗಳು ಆರೋಗ್ಯ ಕ್ಷೇತ್ರದಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಹಾಗೂ ಸೂಕ್ತ ವೃತ್ತಿಜೀವನಕ್ಕೆ ಸರಿಯಾದ ತರಬೇತಿಯನ್ನು ಪಡೆಯುವುದು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಅದರಂತೆ ಮೂಲಸೌಕರ್ಯ ಮತ್ತು ಬೋಧನಾ… pic.twitter.com/3jngR7tHda

— DIPR Karnataka (@KarnatakaVarthe) March 27, 2025

ರಾಜ್ಯದ ಜನತೆ ಗಮನಕ್ಕೆ: ಮಾ.31 ‘ಯಶಸ್ವಿನಿ ಯೋಜನೆ’ಯಡಿ ನೋಂದಣಿಗೆ ಕೊನೆ ದಿನ

ಕರ್ನಾಟಕದಲ್ಲಿ ‘393 ಹುಲಿ’ಗಳಿವೆ: ಸಮೀಕ್ಷೆ ವರದಿ | Tiger In Karnataka

Share. Facebook Twitter LinkedIn WhatsApp Email

Related Posts

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ

17/06/2025 7:45 PM1 Min Read

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

17/06/2025 7:35 PM1 Min Read

BREAKING : ಕಲ್ಬುರ್ಗಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಓರ್ವ ಬಾಲಕ ಸಾವು, ಮಹಿಳೆಗೆ ಗಾಯ

17/06/2025 7:11 PM1 Min Read
Recent News

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ

17/06/2025 7:45 PM

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

17/06/2025 7:35 PM

ನಿಮ್ಮ ತಲೆಯ ಮೇಲೆ ಎರಡು ‘ಸುಳಿ’ಗಳಿದ್ರೆ ಏನಾಗುತ್ತೆ ಗೊತ್ತಾ.?

17/06/2025 7:15 PM

BREAKING : ಕಲ್ಬುರ್ಗಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಓರ್ವ ಬಾಲಕ ಸಾವು, ಮಹಿಳೆಗೆ ಗಾಯ

17/06/2025 7:11 PM
State News
KARNATAKA

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ

By kannadanewsnow0917/06/2025 7:45 PM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರವು ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಜೂನ್.30ರವರೆಗೆ ವರ್ಗಾವಣೆ…

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

17/06/2025 7:35 PM

BREAKING : ಕಲ್ಬುರ್ಗಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಓರ್ವ ಬಾಲಕ ಸಾವು, ಮಹಿಳೆಗೆ ಗಾಯ

17/06/2025 7:11 PM

SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು

17/06/2025 7:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.