Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

15/03/2026 7:47 PM

2026ರ ವಿಧಾನಸಭಾ ಚುನಾವಣೆ: ಮಾದರಿ ಚುನಾವಣಾ ನೀತಿ ಸಂಹಿತೆ ಅಂದ್ರೆ ಏನು? ಇಲ್ಲಿದೆ ಮಾಹಿತಿ

15/03/2026 7:30 PM

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

15/03/2026 7:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾಜರಾತಿ ಕೊರತೆಯಿಂದ ‘ದ್ವಿತೀಯ ಪಿಯುಸಿ ಪರೀಕ್ಷೆ-1’ಕ್ಕೆ ಹಾಜರಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.!
KARNATAKA

ಹಾಜರಾತಿ ಕೊರತೆಯಿಂದ ‘ದ್ವಿತೀಯ ಪಿಯುಸಿ ಪರೀಕ್ಷೆ-1’ಕ್ಕೆ ಹಾಜರಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.!

By kannadanewsnow5710/04/2025 6:57 AM

ಬೆಂಗಳೂರು: 2025ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ಅರ್ಹ ವಿದ್ಯಾರ್ಥಿಗಳಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಈ ಸಂಬಂಧ ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ದಿನಾಂಕ: 31-03-2025 ಕ್ಕೆ 17 ವರ್ಷ ತುಂಬಿದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಸ್ತುತ ಪಿಯು ಪರೀಕ್ಷೆ – 2 ಕ್ಕೆ ಕಲಾ ಮತ್ತು ವಾಣಿಜ್ಯ ವಿಭಾಗಕ್ಕೆ ಆಯ್ತ ಸಂಯೋಜನೆಗಳೊಂದಿಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಲು ಅರ್ಹರಿದ್ದು, ಅವರುಗಳು ಮಂಡಲಿಯ ನಿಯಮಾನುಸಾರ ತಾವು ಅಭ್ಯಸಿಸಿದ ಕಾಲೇಜಿನಲ್ಲಿಯೇ ನೋಂದಾಯಿಸಿಕೊಳ್ಳಲು ಉಲ್ಲೇಖಿತ ಇ-ಕಛೇರಿ ಕಡತದಲ್ಲಿ ಸರ್ಕಾರವು ಅನುಮತಿ ನೀಡಿರುತ್ತದೆ ಎಂದಿದೆ.

ಈ ಹಿನ್ನೆಲೆಯಲ್ಲಿ ಏಪ್ರಿಲ್ ಹಾಗೂ ಮೇ ಮಾಹೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವತಿಯಿಂದ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-2 ಕ್ಕೆ ನೋಂದಾಯಿಸಿಕೊಳ್ಳಲು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರುಗಳು ಈ ಕೆಳಗೆ ನಮೂದಿಸಿರುವಂತೆ ಅಗತ್ಯ ಕ್ರಮ ವಹಿಸುವುದು. ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿಕೊಳ್ಳುವ ಸಮಯದಲ್ಲಿ ಪ್ರತಿ ಅಭ್ಯರ್ಥಿಯು ಕಾಲೇಜಿನಲ್ಲಿ ಪಾವತಿಸಬೇಕಾದ ಶುಲ್ಕದ ವಿವರ ಈ ಕೆಳಗಿನಂತಿದೆ.

  • ನೋಂದಣಿ ಶುಲ್ಕ ( ನೋಂದಣಿ ಶುಲ್ಕವನ್ನು ಕಾಲೇಜಿನಲ್ಲಿಯೇ ಉಳಿಸಿಕೊಂಡು ಅಂಚೆ ವೆಚ್ಚ ಹಾಗೂ ಪರಿಶೀಲನಾ ಶುಲ್ಕವಾಗಿ ಪ್ರಾಂಶುಪಾಲರು ಮತ್ತು ಸಿಬ್ಬಂದಿ ಉಪಯೋಗಿಸಬಹುದು)- ಇತರರು ರೂ.60, ಎಸ್ಸಿ, ಎಸ್ಟಿ, ಪ್ರವರ್ಗ-1ರ ಅಭ್ಯರ್ಥಿಗಳಇಗೆ ರೂ.60
  • ದಾಖಲಾತಿ ಶುಲ್ಕ ಇತರರು ರೂ.400, ಎಸ್ಸಿ, ಎಸ್ಟಿ, ಪ್ರವರ್ಗ-1 ರೂ.400
  • ಕಾಲೇಜು ಅಭಿವೃದ್ಧಿ ಶುಲ್ಕ (ವಸೂಲಾದ ಈ ಶುಲ್ಕವನ್ನು ಕಾಲೇಜು ಸಂಚಿತ ನಿಧಿಗೆ ಜಮೆ ಮಾಡಿ ಮೂಲಭೂತ ಸೌಕರ್ಯಗಳಿಗಾಗಿ ಉಪಯೋಗಿಸಲು ಪ್ರಸ್ತಾವನೆ ಕಳುಹಿಸಿ ನಿರ್ದೇಶಕರ ಅನುಮತಿ ಪಡೆಯಬೇಕು)- ಇತರರಿಗೆ ರೂ.1020, ಎಸ್ಸಿ, ಎಸ್ಟಿ, ಪ್ರವರ್ಗ-1ಕ್ಕೆ ರೂ.1020.
  • ಪರಿಶಿಷ್ಟ ಜಾತಿ ಮತ್ತು ಪಂಗಡ, ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಶುಲ್ಕ- ಇತರರಿಗೆ ರೂ.80, ಎಸ್ಸಿ, ಎಸ್ಟಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.80
  • ಪರೀಕ್ಷಾ ಶುಲ್ಕ- ಇತರ ಅಭ್ಯರ್ಥಿಗಳಿಗೆ ರೂ.400.
  • ಒಟ್ಟು ಮೊತ್ತ ಇತರರು ರೂ.1960 ಆಗಿದ್ದರೇ, ಎಸ್ಸಿ, ಎಸ್ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.1560

ಯಾವುದೇ ಕಾರಣಕ್ಕೂ ಮೇಲೆ ನಮೂದಿಸಿರುವ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ವಸೂಲು ಮಾಡಬಾರದು. ಮೇಲಿನ ಶುಲ್ಕವನ್ನು ಪಾವತಿಸುವ ಸಂಬಂಧ ಪ್ರಾಂಶುಪಾಲರ PU EXAM-2 ಲಾಗಿನ್‌ನಲ್ಲಿ ಚಲನ್ ಸೃಜಿಸಲು ಅವಕಾಶ ಕಲ್ಪಿಸಿದ್ದು, ಶುಲ್ಕ ಪಾವತಿಯ ಮಾಹಿತಿಯನ್ನು ಚಲನ್ ನಲ್ಲಿ ಅಪ್ಲೋಡ್ ಮಾಡಿ ಸದರಿ ಚಲನ್ ಅನ್ನು ಮುದ್ರಿಸಿಕೊಂಡು ನಿಗದಿತ ಶುಲ್ಕವನ್ನು ಬೆಂಗಳೂರು-ಒನ್, ಕರ್ನಾಟಕ ಒನ್, ಗ್ರಾಮ-ಒನ್ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳ ಮೂಲಕ ಪಾವತಿಸುವುದು. ಶುಲ್ಕವನ್ನು ಪಾವತಿಸಲು ಕಡೆಯ ದಿನಾಂಕ: 17-04-2025 ಆಗಿರುತ್ತದೆ ಎಂದು ತಿಳಿಸಿದೆ.

Good news for students who did not appear for the 'Second PUC Exam-1' due to lack of attendance!
Share. Facebook Twitter LinkedIn WhatsApp Email

Related Posts

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

15/03/2026 7:47 PM3 Mins Read

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

15/03/2026 7:01 PM1 Min Read

ಕೋಲಾರದ ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ದಾಳಿ: ಅಕ್ರಮವಾಗಿ ಬಳಸುತ್ತಿದ್ದ 21 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ!

15/03/2026 6:20 PM1 Min Read
Recent News

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

15/03/2026 7:47 PM

2026ರ ವಿಧಾನಸಭಾ ಚುನಾವಣೆ: ಮಾದರಿ ಚುನಾವಣಾ ನೀತಿ ಸಂಹಿತೆ ಅಂದ್ರೆ ಏನು? ಇಲ್ಲಿದೆ ಮಾಹಿತಿ

15/03/2026 7:30 PM

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

15/03/2026 7:01 PM

ಕೋಲಾರದ ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ದಾಳಿ: ಅಕ್ರಮವಾಗಿ ಬಳಸುತ್ತಿದ್ದ 21 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ!

15/03/2026 6:20 PM
State News
KARNATAKA

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

By kannadanewsnow0915/03/2026 7:47 PM KARNATAKA 3 Mins Read

ಹಾವೇರಿ:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದಲ್ಲಿ ಮೂರು ಪಟ್ಟು ಸಾಲ ಮಾಡಿದ್ದಾರೆ. ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ…

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

15/03/2026 7:01 PM

ಕೋಲಾರದ ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ದಾಳಿ: ಅಕ್ರಮವಾಗಿ ಬಳಸುತ್ತಿದ್ದ 21 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ!

15/03/2026 6:20 PM

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂಪಾಯಿ ನಷ್ಟದ ಭೀತಿ!

15/03/2026 6:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.