Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಮಹಿಳಾ ನೌಕರರಿಗೆ ಮಾಸಿಕ 1 ದಿನ ವೇತನ ಸಹಿತ ‘ಋತುಚಕ್ರ ರಜೆ’: ರಾಜ್ಯ ಸರ್ಕಾರ ಅಧಿಕೃತ ಆದೇಶ

13/11/2025 6:05 AM

ರಾಜ್ಯದ ಜನತೆಗೆ ಗುಡ್ ನ್ಯೂಸ್: 6,000 KPS ಶಾಲೆ ತೆರೆಯಲು ಚಿಂತನೆ- ಸಚಿವ ಮಧು ಬಂಗಾರಪ್ಪ

13/11/2025 5:50 AM

ನ.30ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆನ್ ಲೈನ್ ಮೂಲಕ ಪಾಲ್ಗೊಳ್ಳಲು ಅವಧಿ ವಿಸ್ತರಣೆ

13/11/2025 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿ-ಬೆಂಗಳೂರು ಮತ್ತು ಬೆಂಗಳೂರು-ಎರ್ನಾಕುಲಂ ನಡುವೆ ಬೇಸಿಗೆ ವಿಶೇಷ ರೈಲುಗಳ ಸಂಚಾರ
KARNATAKA

ಬೆಳಗಾವಿ-ಬೆಂಗಳೂರು ಮತ್ತು ಬೆಂಗಳೂರು-ಎರ್ನಾಕುಲಂ ನಡುವೆ ಬೇಸಿಗೆ ವಿಶೇಷ ರೈಲುಗಳ ಸಂಚಾರ

By kannadanewsnow0511/04/2025 3:27 PM
ಬೆಂಗಳೂರು  : ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆಯು ಬೆಳಗಾವಿ-ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು ಮತ್ತು ಎಸ್ಎಂವಿಟಿ ಬೆಂಗಳೂರು-ಎರ್ನಾಕುಲಂ ನಿಲ್ದಾಣಗಳ ನಡುವೆ ಒಂದು ಟ್ರಿಪ್ ಬೇಸಿಗೆ ವಿಶೇಷ ರೈಲುಗಳ ಸಂಚಾರವನ್ನು ಏರ್ಪಡಿಸಿದೆ. ರೈಲು ಸೇವೆಗಳ ವಿವರಗಳು ಈ ಕೆಳಗಿನಂತಿವೆ.
1. ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ನಡುವೆ ಒಂದು ಟ್ರಿಪ್ ವಿಶೇಷ ರೈಲು (07373/07374) ಸಂಚಾರ:
ರೈಲು ಸಂಖ್ಯೆ 07373 ಏಪ್ರಿಲ್ 12, 2025 ರಂದು ಬೆಳಗಾವಿಯಿಂದ ಬೆಳಿಗ್ಗೆ 4:00 ಗಂಟೆಗೆ ಹೊರಟು ಮಧ್ಯಾಹ್ನ 3:30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 07374 ಏಪ್ರಿಲ್ 15, 2025 ರಂದು ಎಸ್ಎಂವಿಟಿ ಬೆಂಗಳೂರಿನಿಂದ ಮಧ್ಯಾಹ್ನ 12:00 ಗಂಟೆಗೆ ಹೊರಟು ರಾತ್ರಿ 11:30ಕ್ಕೆ ಬೆಳಗಾವಿಯನ್ನು ತಲುಪಲಿದೆ.
ಈ ರೈಲು ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.
2 ಎಸ್ಎಂವಿಟಿ ಬೆಂಗಳೂರು-ಎರ್ನಾಕುಲಂ ನಿಲ್ದಾಣಗಳ ನಡುವೆ ಒಂದು  ಟ್ರಿಪ್ ವಿಶೇಷ ರೈಲು (06575/06576) ಸಂಚಾರ:
ರೈಲು ಸಂಖ್ಯೆ 06575 ಏಪ್ರಿಲ್ 12, 2025 ರಂದು ಎಸ್ಎಂವಿಟಿ ಬೆಂಗಳೂರಿನಿಂದ ಸಂಜೆ 4:35ಕ್ಕೆ ಹೊರಟು ಮರುದಿನ ಬೆಳಗಿನ ಜಾವ 3:00 ಗಂಟೆಗೆ ಎರ್ನಾಕುಲಂ ತಲುಪಲಿದೆ. ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 06576 ಏಪ್ರಿಲ್ 14, 2025 ರಂದು ಎರ್ನಾಕುಲಂನಿಂದ ರಾತ್ರಿ 10:00 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 10:55ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್ ಮತ್ತು ಅಲುವಾ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.
ಎರಡೂ ವಿಶೇಷ ರೈಲುಗಳು ತಲಾ 16 ಬೋಗಿಗಳನ್ನು ಒಳಗೊಂಡಿರುತ್ತವೆ. ಅವುಗಳಲ್ಲಿ 04 ಸಾಮಾನ್ಯ ಸೆಕೆಂಡ್ ಕ್ಲಾಸ್, 08 ಸ್ಲೀಪರ್ ಕ್ಲಾಸ್, 01 ಎಸಿ-2 ಟೈರ್, 01 ಎಸಿ-3 ಟೈರ್ ಮತ್ತು 02 ಎಸ್ಎಲ್ಆರ್ ಡಿ ಬೋಗಿಗಳು ಇರಲಿವೆ.
ಪ್ರಯಾಣಿಕರು ಈ ವಿಶೇಷ ರೈಲುಗಳ ಮುಂಗಡ ಬುಕ್ಕಿಂಗ್ ಮತ್ತು ನಿಲ್ದಾಣಗಳ ಆಗಮನ/ನಿರ್ಗಮನದ ನಿಖರ ಸಮಯದ ಮಾಹಿತಿಗಾಗಿ ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಹತ್ತಿರದ ರೈಲ್ವೆ ಬುಕ್ಕಿಂಗ್ ಕೌಂಟರಗಳನ್ನು ಸಂಪರ್ಕಿಸಬಹುದು.
Share. Facebook Twitter LinkedIn WhatsApp Email

Related Posts

BIG NEWS: ಮಹಿಳಾ ನೌಕರರಿಗೆ ಮಾಸಿಕ 1 ದಿನ ವೇತನ ಸಹಿತ ‘ಋತುಚಕ್ರ ರಜೆ’: ರಾಜ್ಯ ಸರ್ಕಾರ ಅಧಿಕೃತ ಆದೇಶ

13/11/2025 6:05 AM3 Mins Read

ರಾಜ್ಯದ ಜನತೆಗೆ ಗುಡ್ ನ್ಯೂಸ್: 6,000 KPS ಶಾಲೆ ತೆರೆಯಲು ಚಿಂತನೆ- ಸಚಿವ ಮಧು ಬಂಗಾರಪ್ಪ

13/11/2025 5:50 AM1 Min Read

ನ.30ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆನ್ ಲೈನ್ ಮೂಲಕ ಪಾಲ್ಗೊಳ್ಳಲು ಅವಧಿ ವಿಸ್ತರಣೆ

13/11/2025 5:45 AM1 Min Read
Recent News

BIG NEWS: ಮಹಿಳಾ ನೌಕರರಿಗೆ ಮಾಸಿಕ 1 ದಿನ ವೇತನ ಸಹಿತ ‘ಋತುಚಕ್ರ ರಜೆ’: ರಾಜ್ಯ ಸರ್ಕಾರ ಅಧಿಕೃತ ಆದೇಶ

13/11/2025 6:05 AM

ರಾಜ್ಯದ ಜನತೆಗೆ ಗುಡ್ ನ್ಯೂಸ್: 6,000 KPS ಶಾಲೆ ತೆರೆಯಲು ಚಿಂತನೆ- ಸಚಿವ ಮಧು ಬಂಗಾರಪ್ಪ

13/11/2025 5:50 AM

ನ.30ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆನ್ ಲೈನ್ ಮೂಲಕ ಪಾಲ್ಗೊಳ್ಳಲು ಅವಧಿ ವಿಸ್ತರಣೆ

13/11/2025 5:45 AM

GOOD NEWS: ರಾಜ್ಯದ ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ

13/11/2025 5:30 AM
State News
KARNATAKA

BIG NEWS: ಮಹಿಳಾ ನೌಕರರಿಗೆ ಮಾಸಿಕ 1 ದಿನ ವೇತನ ಸಹಿತ ‘ಋತುಚಕ್ರ ರಜೆ’: ರಾಜ್ಯ ಸರ್ಕಾರ ಅಧಿಕೃತ ಆದೇಶ

By kannadanewsnow0913/11/2025 6:05 AM KARNATAKA 3 Mins Read

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಎಲ್ಲಾ ಮಹಿಳಾ ನೌಕರರಿಗೂ ಅನ್ವಯ ಆಗುವಂತೆ ತಿಂಗಳಲ್ಲಿ ಒಂದು…

ರಾಜ್ಯದ ಜನತೆಗೆ ಗುಡ್ ನ್ಯೂಸ್: 6,000 KPS ಶಾಲೆ ತೆರೆಯಲು ಚಿಂತನೆ- ಸಚಿವ ಮಧು ಬಂಗಾರಪ್ಪ

13/11/2025 5:50 AM

ನ.30ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆನ್ ಲೈನ್ ಮೂಲಕ ಪಾಲ್ಗೊಳ್ಳಲು ಅವಧಿ ವಿಸ್ತರಣೆ

13/11/2025 5:45 AM

GOOD NEWS: ರಾಜ್ಯದ ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ

13/11/2025 5:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.