Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕುಸಿದುಬಿದ್ದು ಮಹಿಳೆ ಸಾವು, 35ಕ್ಕೇರಿದ ಸಾವಿನ ಸಂಖ್ಯೆ!

04/07/2025 12:31 PM

SHOCKING : ಪ್ರತಿಭಟನೆಯಲ್ಲಿ ಪಾಲ್ಕೊಳ್ಳಲು ಬೆಂಗಳೂರಿಗೆ ಬಂದ ರೈತ ‘ಹೃದಯಾಘಾತಕ್ಕೆ’ ಬಲಿ!

04/07/2025 12:13 PM

BREAKING : ವಿಜಯನಗರದಲ್ಲಿ ಕಾರು-ಲಾರಿಯ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ದಂಪತಿ ಸಾವು, ಮೂವರು ಮಕ್ಕಳಿಗೆ ಗಾಯ!

04/07/2025 11:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ `ಯಶಸ್ವಿನಿ ಯೋಜನೆ’ ಚಿಕಿತ್ಸೆ ದರ ಪರಿಷ್ಕರಣೆ : ಕ್ಯಾನ್ಸರ್ ಸೇರಿ ಒಟ್ಟು 2,191 ಕಾಯಿಲೆಗೆ ಚಿಕಿತ್ಸೆ.!
KARNATAKA

BIG NEWS : ರಾಜ್ಯ ಸರ್ಕಾರದಿಂದ `ಯಶಸ್ವಿನಿ ಯೋಜನೆ’ ಚಿಕಿತ್ಸೆ ದರ ಪರಿಷ್ಕರಣೆ : ಕ್ಯಾನ್ಸರ್ ಸೇರಿ ಒಟ್ಟು 2,191 ಕಾಯಿಲೆಗೆ ಚಿಕಿತ್ಸೆ.!

By kannadanewsnow5723/04/2025 6:17 AM

ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ|| ಶ್ರೀನಿವಾಸ ಎನ್.ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿಯವರು ತಮ್ಮ ಶಿಫಾರಸ್ಸುಗಳನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ್ದು, ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ.

ಪ್ರಸ್ತುತ ಯಶಸ್ವಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿರಲಿಲ್ಲ. ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ|| ಶ್ರೀನಿವಾಸ್ ಎನ್.ಟಿ ಇವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿತ್ತು. ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿಗತಿಗಳಿಗೆ ಅನುಗುಣವಾಗಿ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿರುತ್ತದೆ.

ಸಮಿತಿಯಲ್ಲಿ ಹೆಸರಾಂತ ಪ್ರತಿಷ್ಠಿತ ಆಸ್ಪತ್ರೆಗಳ 8 ತಜ್ಞ ವೈದ್ಯರಲ್ಲದೇ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಿ ಅವರುಗಳ ಸಲಹೆ ಸೂಚನೆಗಳನ್ನು ಪಡೆದು ದರ ಪರಿಷ್ಕರಣೆ ಮಾಡಲಾಗಿದೆ. ಈಗಿನ ಯಶಸ್ವಿನಿ ಯೋಜನೆಯಲ್ಲಿ 2,128 ಚಿಕಿತ್ಸೆಗಳನ್ನು ಅಳವಡಿಸಿಕೊಂಡಿದ್ದು ಪ್ರಸ್ತುತ ಇರುವ ಚಿಕಿತ್ಸೆಗಳ ಪೈಕಿ 6 ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಕೈಬಿಡಲಾಗಿದೆ.

ಅದೇ ರೀತಿ ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸದಾಗಿ ಪ್ರವರ್ಧಮಾನಕ್ಕೆ ಬಂದಿರುವ ಚಿಕಿತ್ಸೆಗಳ ಪೈಕಿ ಸಹಕಾರಿಗಳಿಗೆ / ರೈತಾಪಿ ವರ್ಗಕ್ಕೆ Interventional Radiology, CTVS, ಕ್ಯಾನ್ಸರ್ ಕಾಯಿಲೆಗಳು ಮುಂತಾದ ವಿಭಾಗಗಳ ಒಟ್ಟು 69 ಹೊಸ ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಸೇರಿಸಲಾಗಿದೆ. ಇದರಿಂದಾಗಿ ಒಟ್ಟು 2,191 ಚಿಕಿತ್ಸೆಗಳನ್ನು ಅಂತಿಮಗೊಳಿಸಿದಂತಾಗಿದೆ.

ಯಶಸ್ವಿನಿ ಯೋಜನೆಯಡಿ 2024-25ರಲ್ಲಿ 68,159 ಫಲಾನುಭವಿಗಳು ರೂ.117.79 ಕೋಟಿ ಮೊತ್ತದ ಚಿಕಿತ್ಸೆಯನ್ನು ಪಡೆದಿದ್ದು ಸರಾಸರಿ ಒಂದು ಚಿಕಿತ್ಸಾ ವೆಚ್ಚ ರೂ.17,000 ಆಗಿದೆ. ಮುಂದಿನ ಸಾಲಿನಲ್ಲಿ ಸುಮಾರು 75,000 ಫಲಾನುಭವಿಗಳು ಚಿಕಿತ್ಸೆ ಪಡೆಯುವ ಅಂದಾಜಿದ್ದು ಅದರಂತೆ ಸುಮಾರು ರೂ.127.50 ಕೋಟಿ ವೆಚ್ಚ ಆಗಲಿದೆ. ಆರೋಗ್ಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉನ್ನತ ಮಟ್ಟದ ಚಿಕಿತ್ಸೆಗಳನ್ನು ಹೊಸದಾಗಿ ಸೇರಿಸುವುದರಿಂದ ಸರಾಸರಿ ಚಿಕಿತ್ಸಾ ದರದಲ್ಲಿ 50% ರಿಂದ 55% ವರೆಗೆ ದರ ಹೆಚ್ಚಳವಾಗುವ ಅಂದಾಜಿದ್ದು, ಅದರಂತೆ ಸುಮಾರು ರೂ.70.00 ಕೋಟಿವರೆಗೆ ದರ ಹೆಚ್ಚಳವಾಗುವ ಅಂದಾಜು ಇದ್ದು ಇದರಿಂದ ರೂ.62.50 ಕೋಟಿ ಯಿಂದ 68.75 ಕೋಟಿ ಹೆಚ್ಚಿನ ಹೊರೆ ಬೀಳುವ ಸಂಭವವಿರುತ್ತದೆ.

ಈ ಹೆಚ್ಚಳವಾಗುವ ಸುಮಾರು ರೂ.70.00 ಕೋಟಿ ಅಧಿಕ ಆರ್ಥಿಕ ಹೊರೆಯನ್ನು ಸರ್ಕಾರದಿಂದ ರೂ.40.00 ಕೋಟಿ ಹೆಚ್ಚುವರಿ ಅನುದಾನವನ್ನು ಒದಗಿಸುವ ಮೂಲಕ ಮತ್ತು ಸದಸ್ಯರು ಪಾವತಿಸುವ ವಂತಿಗೆ ಮೊತ್ತದಿಂದ ರೂ.30.00 ಕೋಟಿಯನ್ನು ಭರಿಸುವ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಬಹುದೆಂದು ವರದಿ ತಿಳಿಸಿದೆ.

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ದರ ಪರಿಷ್ಕರಣೆ ಕುರಿತು ಸಂಕ್ಷಿಪ್ತ ವಿವರ

1. ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರು ಜಾರಿಗೊಳಿಸಿದೆ.

2. ಪ್ರಸ್ತುತ ಯಶಸ್ವಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿಲ್ಲ.

3. ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ದಿನಾಂಕ:26-08-2024 ರಲ್ಲಿ ಕೂಡ್ಲಿಗಿ ಕ್ಷೇತ್ರದ ಮಾನ್ಯ ಶಾಸಕರಾದ ಡಾ|| ಶ್ರೀನಿವಾಸ್ ಎನ್. ಟಿ ಇವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿದೆ.

4. ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿ-ಗತಿಗಳಿಗೆ ಅನುಗುಣವಾಗಿ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿರುತ್ತದೆ.

5. ಸಮಿತಿಯಲ್ಲಿ ಹೆಸರಾಂತ ಪ್ರತಿಷ್ಟಿತ ಆಸ್ಪತ್ರೆಗಳ 8 ತಜ್ಞ ವೈದ್ಯರಲ್ಲದೇ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಿ ಅವರುಗಳ ಸಲಹೆ ಸೂಚನೆಗಳನ್ನು ಪಡೆದು ದರ ಪರಿಷ್ಕರಣೆ ಮಾಡಲಾಗಿದೆ.

6. ಈಗಿನ ಯಶಸ್ವಿನಿ ಯೋಜನೆಯಲ್ಲಿ 2128 ಚಿಕಿತ್ಸೆಗಳನ್ನು ಅಳವಡಿಸಿಕೊಂಡಿದ್ದು ಪ್ರಸ್ತುತ ಇರುವ ಚಿಕಿತ್ಸೆಗಳ ಪೈಕಿ 6 outdated ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಕೈಬಿಡಲಾಗಿದೆ. ಅದೇ ರೀತಿ ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸದಾಗಿ ಪ್ರವರ್ಧಮಾನಕ್ಕೆ ಬಂದಿರುವ ಚಿಕಿತ್ಸೆಗಳ ಪೈಕಿ ಸಹಕಾರಿಗಳಿಗೆ / ರೈತಾಪಿ ವರ್ಗಕ್ಕೆ ಅಗತ್ಯವಾದ Interventional Radiology, CTVS, ಮಾನಸಿಕ ಕಾಯಿಲೆಗಳು ಮತ್ತು ಕ್ಯಾನ್ಸ‌ರ್ ಕಾಯಿಲೆಗಳು ಮುಂತಾದ ವಿಭಾಗಗಳ ಒಟ್ಟು 69 ಹೊಸ ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಸೇರಿಸಲಾಗಿದೆ. ಇದರಿಂದಾಗಿ ಒಟ್ಟು 2191 ಚಿಕಿತ್ಸೆಗಳನ್ನು ಅಂತಿಮಗೊಳಿಸಿದಂತಾಗಿದೆ.
7. ថ ಪರಿಷ್ಕರಣೆಯಾದರೆ ಪ್ರಮುಖ ಆಸ್ಪತ್ರೆಗಳು ಯೋಜನೆಯಲ್ಲಿ ಸೇರಿಕೊಳ್ಳುವುದರಿಂದ ಹೆಚ್ಚು ಹೆಚ್ಚು ಸದಸ್ಯರು ನೋಂದಣಿ ಮಾಡಿಕೊಳ್ಳಲು ಮುಂದೆ ಬರಲಿದ್ದು ಇದರಿಂದ ಹೆಚ್ಚು ವಂತಿಗೆ ಸಂಗ್ರಹವಾಗುವ ಅವಕಾಶವಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ಮೇಲೆ ಅವಲಂಬನೆ ಕಡಿಮೆ ಆಗುವ ಸಾಧ್ಯತೆ ಇದೆ.

8. ಯಶಸ್ವಿನಿ ಯೋಜನೆಯಡಿ 2024-25ರಲ್ಲಿ 68,159 ಫಲಾನುಭವಿಗಳು ರೂ.117.79 ಕೋಟಿ ಮೊತ್ತದ ಚಿಕಿತ್ಸೆಯನ್ನು ಪಡೆದಿದ್ದು ಸರಾಸರಿ ಒಂದು ಚಿಕಿತ್ಸಾ ವೆಚ್ಚ ರೂ.17,000 ಆಗಿದೆ. ಮುಂದಿನ ಸಾಲಿನಲ್ಲಿ ಸುಮಾರು 75,000 ಫಲಾನುಭವಿಗಳು ಚಿಕಿತ್ಸೆ ಪಡೆಯುವ ಅಂದಾಜಿದ್ದು ಅದರಂತೆ ಸುಮಾರು ರೂ.127.50 ಕೋಟಿ ವೆಚ್ಚ ಆಗಲಿದೆ.

9. ಆರೋಗ್ಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉನ್ನತ ಮಟ್ಟದ ಚಿಕಿತ್ಸೆಗಳನ್ನು ಹೊಸದಾಗಿ ಸೇರಿಸುವುದರಿಂದ ಸರಾಸರಿ ಚಿಕಿತ್ಸಾ ದರದಲ್ಲಿ 50% ರಿಂದ 55% ರ ವರವಿಗೆ ದರ ಹೆಚ್ಚಳವಾಗುವ ಅಂದಾಜಿದ್ದು ಅದರಂತೆ ಸುಮಾರು ರೂ.70.00 ಕೋಟಿ ರವರೆಗೆ ದರ ಹೆಚ್ಚಳವಾಗುವ ಅಂದಾಜು ಇದ್ದು. ಇದರಿಂದ ರೂ.62.50 ಕೋಟಿ ಯಿಂದ 68.75 ಕೋಟಿ ಹೆಚ್ಚಿನ ಹೊರೆ ಬೀಳುವ ಸಂಭವವಿರುತ್ತದೆ.

10. ಈ ಹೆಚ್ಚಳವಾಗುವ ಸುಮಾರು ರೂ.70.00 ಕೋಟಿ ಅಧಿಕ ಆರ್ಥಿಕ ಹೊರೆಯನ್ನು ಸರ್ಕಾರದಿಂದ ರೂ.40.00 ಕೋಟಿ ಹೆಚ್ಚುವರಿ ಅನುದಾನವನ್ನು ಒದಗಿಸುವ ಮೂಲಕ ಮತ್ತು ಸದಸ್ಯರು ಪಾವತಿಸುವ ವಂತಿಗೆ ಮೊತ್ತದಿಂದ ರೂ.30.00 ಕೋಟಿಯನ್ನು ಭರಿಸುವ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಬಹುದಾಗಿದೆ.

191 diseases including cancer! BIG NEWS: State government revises `Yashaswini Yojana' treatment rates: Treatment for a total of 2
Share. Facebook Twitter LinkedIn WhatsApp Email

Related Posts

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕುಸಿದುಬಿದ್ದು ಮಹಿಳೆ ಸಾವು, 35ಕ್ಕೇರಿದ ಸಾವಿನ ಸಂಖ್ಯೆ!

04/07/2025 12:31 PM1 Min Read

SHOCKING : ಪ್ರತಿಭಟನೆಯಲ್ಲಿ ಪಾಲ್ಕೊಳ್ಳಲು ಬೆಂಗಳೂರಿಗೆ ಬಂದ ರೈತ ‘ಹೃದಯಾಘಾತಕ್ಕೆ’ ಬಲಿ!

04/07/2025 12:13 PM1 Min Read

BREAKING : ವಿಜಯನಗರದಲ್ಲಿ ಕಾರು-ಲಾರಿಯ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ದಂಪತಿ ಸಾವು, ಮೂವರು ಮಕ್ಕಳಿಗೆ ಗಾಯ!

04/07/2025 11:45 AM1 Min Read
Recent News

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕುಸಿದುಬಿದ್ದು ಮಹಿಳೆ ಸಾವು, 35ಕ್ಕೇರಿದ ಸಾವಿನ ಸಂಖ್ಯೆ!

04/07/2025 12:31 PM

SHOCKING : ಪ್ರತಿಭಟನೆಯಲ್ಲಿ ಪಾಲ್ಕೊಳ್ಳಲು ಬೆಂಗಳೂರಿಗೆ ಬಂದ ರೈತ ‘ಹೃದಯಾಘಾತಕ್ಕೆ’ ಬಲಿ!

04/07/2025 12:13 PM

BREAKING : ವಿಜಯನಗರದಲ್ಲಿ ಕಾರು-ಲಾರಿಯ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ದಂಪತಿ ಸಾವು, ಮೂವರು ಮಕ್ಕಳಿಗೆ ಗಾಯ!

04/07/2025 11:45 AM

BREAKING : ಮಂಗಳೂರಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಡ್ರಗ್ಸ್ ಪೂರೈಕೆ : ಐವರು ಅರೆಸ್ಟ್!

04/07/2025 11:33 AM
State News
KARNATAKA

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕುಸಿದುಬಿದ್ದು ಮಹಿಳೆ ಸಾವು, 35ಕ್ಕೇರಿದ ಸಾವಿನ ಸಂಖ್ಯೆ!

By kannadanewsnow0504/07/2025 12:31 PM KARNATAKA 1 Min Read

ಹಾಸನ : ಹಾಸನದಲ್ಲಿ ಹೃದಯಾಘಾತದಿಂದ ಸಾವನಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇಂದು ಬೆಳಿಗ್ಗೆ ತ್ತಾನೆ ಯುವಕನೊಬ್ಬ ಹೃದಯಾಘಾತಕ್ಕೆ ಬಲಿಯಾಗಿದ್ದ…

SHOCKING : ಪ್ರತಿಭಟನೆಯಲ್ಲಿ ಪಾಲ್ಕೊಳ್ಳಲು ಬೆಂಗಳೂರಿಗೆ ಬಂದ ರೈತ ‘ಹೃದಯಾಘಾತಕ್ಕೆ’ ಬಲಿ!

04/07/2025 12:13 PM

BREAKING : ವಿಜಯನಗರದಲ್ಲಿ ಕಾರು-ಲಾರಿಯ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ದಂಪತಿ ಸಾವು, ಮೂವರು ಮಕ್ಕಳಿಗೆ ಗಾಯ!

04/07/2025 11:45 AM

BREAKING : ಮಂಗಳೂರಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಡ್ರಗ್ಸ್ ಪೂರೈಕೆ : ಐವರು ಅರೆಸ್ಟ್!

04/07/2025 11:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.