Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಕ್ಕಿಂ ಸೇನಾ ಶಿಬಿರದಲ್ಲಿ ಭೂಕುಸಿತ: ಮೂವರು ಸಾವು, 6 ಭದ್ರತಾ ಸಿಬ್ಬಂದಿ ನಾಪತ್ತೆ | landslide

02/06/2025 1:30 PM

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಆಟವಾಡುತ್ತಾ ನೀರಿನ ಹೊಂಡಕ್ಕೆ ಬಿದ್ದ 4 ವರ್ಷದ ಮಗು ಸಾವು.!

02/06/2025 1:28 PM

ALERT : ಸಾರ್ವಜನಿಕರೇ ಈ ತಪ್ಪು ಮಾಡಿದ್ರೆ ವಂಚಕರು ನಿಮ್ಮ ಹೆಸರಿನಲ್ಲಿ `ಸಿಮ್ ಕಾರ್ಡ್’ ಬಳಸುತ್ತಾರೆ ಎಚ್ಚರ.!

02/06/2025 1:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : 2015ರ ಹಿಂದೆ `ಸರ್ಕಾರಿ ಭೂಮಿಯಲ್ಲಿ ಸಾಗುವಳಿ’ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್.!
KARNATAKA

GOOD NEWS : 2015ರ ಹಿಂದೆ `ಸರ್ಕಾರಿ ಭೂಮಿಯಲ್ಲಿ ಸಾಗುವಳಿ’ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್.!

By kannadanewsnow5724/04/2025 6:00 AM

ಶಿವಮೊಗ್ಗ : 2015ರ ಹಿಂದೆ ಅರಣ್ಯ ಅಥವಾ ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಹಾಗೂ ಸಾಗುವಳಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಶೀಘ್ರದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಿದೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಅವರು ಇಂದು ಸೊರಬದ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 2015ರ ಹಿಂದೆ ಅರಣ್ಯ ಅಥವಾ ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಹಾಗೂ ಸಾಗುವಳಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಶೀಘ್ರದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಿದೆ. ಈ ನಿರ್ಧಾರ ಬರುವವರೆಗೆ ಅಧಿಕಾರಿಗಳು ಒಕ್ಕಲೆಬ್ಬಿಸದಂತೆ ಸೂಚಿಸಿದ ಅವರು, 2015ರಿಂದೀಚೆಗೆ ಸಾಗುವಳಿ ಮಾಡುತ್ತಿರುವವರ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಅವರು, ಬೆಳೆದ ಪೈರು ಅಥವಾ ಬೆಳೆಯನ್ನು ನಾಶಪಡಿಸದಂತೆಯೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದ ಅವರು ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ವ್ಯವಹರಿಸುವಂತೆ ಸೂಚಿಸಿದರು.

ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅನುಕೂಲವಾಗುವಂತೆ ಶಿಕ್ಷಣ ಇಲಾಖೆ ಶೀಘ್ರದಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಮುಂದಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ. ಈ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಉಚಿತವಾಗಿ ನಡೆಸಲಾಗುವುದು. ವಿಶೇಷವಾಗಿ ಮೂಲಭೂತ ಸೌಕರ್ಯ ಹೊಂದಿರುವ ಶಾಲೆಗಳಲ್ಲಿ ತರಗತಿಗಳ ಆರಂಭಕ್ಕೆ ಆದ್ಯತೆ ನೀಡಲಾಗುವುದು ಎಂದರು.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಶಾಲಾ ಫಲಿತಾಂಶ ಸುಧಾರಣಗೆ ವಿಶೇಷ ಕಾಳಜಿ ವಹಿಸಬೇಕು. ಯಾವುದೇ ಮಗು ಶಾಲಾ ದಾಖಲಾತಿಯಿಂದ ಹೊರಗುಳಿಯದಂತೆ ಗಮನಿಸಬೇಕು ಅಲ್ಲದೆ ದಾಖಲಾತಿಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡುಬರಬೇಕು ಎಂದವರು ಸೂಚಿಸಿದರು.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರಿದ್ದು, ಮಕ್ಕಳು ಅವರಿಂದ ಬೋಧನೆಯ ಲಾಭ ಪಡೆದು, ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಶಾಲಾರಂಭದ ಮೊದಲ ದಿನ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಕ್ಕಳನ್ನು ಸ್ವಾಗತಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಸಮೀಪದ ಶಾಲೆಯಲ್ಲಿ ಹಾಜರಿರುವಂತೆ ಸೂಚಿಸಿದ ಅವರು, ಶಿಕ್ಷಕರು ಗುಣಮಟ್ಟದ ಬೋಧನೆಗೆ ಗಮನಹರಿಸುವಂತೆ ಸೂಚಿಸಿದರು.

ಪ್ರಸ್ತುತ ಪ್ರಕಟಿಸಲಾಗಿರುವ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಶೇ.94ರಷ್ಟು ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಉತ್ತೀರ್ಣರಾದ ಸುಮಾರು 70,000ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳಿಕೆಯ ಕಾರಣದಿಂದ ಪರೀಕ್ಷೆ ಬರೆಯುತ್ತಿರುವುದು ವಿಶೇಷವಾಗಿದೆ. ವಿದ್ಯಾರ್ಥಿಗಳು ಬರೆಯುವ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆದಿರುವುದನ್ನು ನಮೂದಿಸಿ, ಪ್ರಮಾಣಪತ್ರ ವಿತರಿಸಲು ಕ್ರಮವಹಿಸಲಾಗುವುದು ಎಂದರು.

ಬಿಸಿಯೂಟ ತಯಾರಿಕೆಯಲ್ಲಿ ಅಲ್ಯುಮಿನಿಯಮ್ಪಾತ್ರೆಗಳ ಬಳಕೆ ಮಾಡುತ್ತಿರುವುದನ್ನು ಗಮನಿಸಲಾಗಿದೆ. ಅಲ್ಯುಮಿನಿಯಂ ಪಾತ್ರೆಗಳ ಬಳಕೆ ಆರೋಗ್ಯದ ದೃಷ್ಟಿಯಿಂದ ಉತ್ತಮವಲ್ಲ ಎಂಬ ಕಾರಣಕ್ಕೆ ಅಲ್ಯುಮಿನಿಯಮ್ಗೆ ಪರ್ಯಾಯವಾಗಿ ರಾಜ್ಯದ ಸುಮಾರು 65000ಸರ್ಕಾರಿ ಶಾಲೆಗಳಿಗೆ ಗುಣಮಟ್ಟದ ಪಾತ್ರೆಗಳನ್ನು ಒದಗಿಸಲು ಉದ್ದೇಶಿಸಲಾಗಿದೆ. ನೆಲದ ಮೇಲೆ ಕುಳಿತುಕೊಳ್ಳುವ ಶಾಲೆಗಳಿಗೆ ಬೆಂಚ್ಗಳನ್ನು ಪೂರೈಸಲು ಉದ್ದೇಶಿಸಲಾಗಿದ್ದು, ಅಂತಹ ಶಾಲೆಗಳ ಯಾದಿಯನ್ನು ಸಲ್ಲಿಸುವಂತೆ ಸೂಚಿಸಿದ ಅವರು, ಶಿಥಿಲಗೊಂಡಿರುವ ಅಡುಗೆ ಕೋಣೆಗಳ ದುರಸ್ತಿ ಹಾಗೂ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಅಗತ್ಯ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳಲು ಸೂಚಿಸಲಾಗಿದೆ. ದಿನೇದಿನೇ ವಿದ್ಯುತ್ಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೋಲಾರ್ವಿದ್ಯುತ್ಉತ್ಪಾದಿಸಿ ಬಳಸಲು ಪ್ರೇರೇಪಿಸಲಾಗುತ್ತಿದೆ. ಒಂದು ಬಾರಿಯ ಹೂಡಿಕೆಯಿಂದ ವಿದ್ಯುತ್ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದರು.

ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ರೈತರ ಅಗತ್ಯಗಳಿಗಾಗಿ ರಸಗೊಬ್ಬರ, ಬಿತ್ತನೆಬೀಜ ಹಾಗೂ ರಸಾಯನಿಕಗಳನ್ನು ದಾಸ್ತಾನು ಮಾಡಿಟ್ಟುಕೊಂಡು ಅಗತ್ಯಕ್ಕೆ ತಕ್ಕಂತೆ ರೈತರಿಗೆ ಒದಗಿಸಲು ಕೃಷಿ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ. ಜಲಜೀವನ ಮಿಷನ್ಯೋಜನೆಯಡಿ ಹೆಚ್ಚುವರಿ ಕಾಮಗಾರಿಗಾಗಿ ಅಗತ್ಯವಿರುವ 2.00ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದಲ್ಲಿ ಜನಪ್ರಿಯವಾಗಿರುವ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನದ ಕುರಿತು ಕಾಲಕಾಲಕ್ಕೆ ಸಭೆಗಳನ್ನು ನಡೆಸಿ, ಮಾಧ್ಯಮಗಳಿಗೆ ವಿವರಿಸುವಂತೆ ತಹಶೀಲ್ದಾರರಿಗೆ ಸೂಚಿಸಿದ ಸಚಿವರು, ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ವಾಸ್ತವ ಸಂಗತಿಗಳ ಕುರಿತು ಮನವರಿಕೆ ಮಾಡಿಕೊಡಬೇಕು. ಅಲ್ಲದೇ ತಮ್ಮ ತೆರಿಗೆ ಹಣ ಸದ್ಭಳಕೆಯಾಗುತ್ತಿರುವ ಬಗ್ಗೆ ಜನರಿಗೆ ತಿಳಿಸಬೇಕು ಎಂದವರು ನುಡಿದರು.

ತಾಲೂಕಿನ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವ ಬಗ್ಗೆ ವಿದ್ಯಾರ್ಥಿಗಳಿಂದ ಆಗಾಗ್ಗೆ ದೂರುಗಳು ಬರುತ್ತಿವೆ. ಸಂಬಂಧಿಸಿದ ಇಲಾಖಾ ಅಧಿಕಾರಿಗಳು ವಸತಿ ನಿಲಯಗಳಿಗೆ ಅಗತ್ಯ ಸೌಕರ್ಯ ಕಲ್ಪಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ನಿರ್ಮಿಸುವ ಅಗತ್ಯವಿದೆ ಎಂದರು.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಗುತ್ತಿಗೆದಾರರು ಸಕಾಲದಲ್ಲಿ ವೇತನ ಪಾವತಿಸಬೇಕು. ತಪ್ಪಿದಲ್ಲಿ ಅಂತಹ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರ್ಪಡೆಗೊಳಿಸಬೇಕು. ನೇಮಕಾತಿಯಲ್ಲಿಯೂ ಸ್ಥಳೀಯರಿಗೆ ಪ್ರಾಧಾನ್ಯತೆ ನೀಡುವಂತೆ ಅವರು ಸೂಚಿಸಿದರು.

ನರೇಗಾ ಯೋಜನೆಯಡಿ ಮಾನವದಿನಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಕಾಂಪೌಂಡ್ಕಾಮಗಾರಿಗಳನ್ನು ಕೈಗೆತ್ತಿಕೊಳ್ಳು ಪ್ರಸ್ತಾವನೆ ಸಿದ್ದಪಡಿಸಿ, ಅನುಮೋದನೆ ಪಡೆದು ಕಾಮಗಾರಿಗಳನ್ನು ನಡೆಸಬೇಕು. ಇದರಿಂದಾಗಿ ಹೆಚ್ಚಿನ ಜನರಿಗೆ ಕೂಲಿ ಕೆಲಸ ದೊರೆಯಲಿದೆ. ಅಂಬೇಡ್ಕರ್ಅಭಿವೃದ್ಧಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಕೊಳವೆಬಾವಿ ಕೊರೆಸಿಕೊಡುವ ಕಾರ್ಯ ಪೂರ್ಣಗೊಂಡಿಲ್ಲ. ಈ ಬಗ್ಗೆ ಸಂಬಂಧಿಸಿದ ನಿಗಮದ ಆಯುಕ್ತರೊಂದಿಗೆ ಚರ್ಚಿಸಲಾಗುವುದು ಎಂದರು.

ಅಲ್ಲದೇ ಇದೇ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಪರಿಸರ, ಕೃಷಿ ಸಂಬಂಧಿತ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಭೆಯಲ್ಲಿ ತಹಶೀಲ್ದಾರ್ಶ್ರೀಮತಿ ಮಂಜುಳಾ ಹೆಗಡಾಳ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಜಿ.ಶಶಿಧರ್, ಸೇರಿದಂತೆ ಕೆ.ಡಿ.ಪಿ.ಸಲಹಾ ಸಮಿತಿಯ ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

GOOD NEWS: Good news for farmers cultivating government land before 2015: An important decision will be made soon!
Share. Facebook Twitter LinkedIn WhatsApp Email

Related Posts

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಆಟವಾಡುತ್ತಾ ನೀರಿನ ಹೊಂಡಕ್ಕೆ ಬಿದ್ದ 4 ವರ್ಷದ ಮಗು ಸಾವು.!

02/06/2025 1:28 PM1 Min Read

ALERT : ಸಾರ್ವಜನಿಕರೇ ಈ ತಪ್ಪು ಮಾಡಿದ್ರೆ ವಂಚಕರು ನಿಮ್ಮ ಹೆಸರಿನಲ್ಲಿ `ಸಿಮ್ ಕಾರ್ಡ್’ ಬಳಸುತ್ತಾರೆ ಎಚ್ಚರ.!

02/06/2025 1:23 PM2 Mins Read

BREAKING : ರಾಜ್ಯದಲ್ಲಿ `ಥಗ್ಸ್ ಲೈಫ್’ ಸಿನಿಮಾ ರಿಲೀಸ್ ಆದ್ರೆ ಅಖಂಡ ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ ಎಚ್ಚರಿಕೆ

02/06/2025 1:06 PM1 Min Read
Recent News

BREAKING: ಸಿಕ್ಕಿಂ ಸೇನಾ ಶಿಬಿರದಲ್ಲಿ ಭೂಕುಸಿತ: ಮೂವರು ಸಾವು, 6 ಭದ್ರತಾ ಸಿಬ್ಬಂದಿ ನಾಪತ್ತೆ | landslide

02/06/2025 1:30 PM

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಆಟವಾಡುತ್ತಾ ನೀರಿನ ಹೊಂಡಕ್ಕೆ ಬಿದ್ದ 4 ವರ್ಷದ ಮಗು ಸಾವು.!

02/06/2025 1:28 PM

ALERT : ಸಾರ್ವಜನಿಕರೇ ಈ ತಪ್ಪು ಮಾಡಿದ್ರೆ ವಂಚಕರು ನಿಮ್ಮ ಹೆಸರಿನಲ್ಲಿ `ಸಿಮ್ ಕಾರ್ಡ್’ ಬಳಸುತ್ತಾರೆ ಎಚ್ಚರ.!

02/06/2025 1:23 PM

ಐಫೋನ್ ಗಳಲ್ಲಿ ಭದ್ರತಾ ದೋಷ: ಬಳಕೆದಾರರಿಗೆ ಆ್ಯಪಲ್ ಎಚ್ಚರಿಕೆ | Apple

02/06/2025 1:22 PM
State News
KARNATAKA

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ಆಟವಾಡುತ್ತಾ ನೀರಿನ ಹೊಂಡಕ್ಕೆ ಬಿದ್ದ 4 ವರ್ಷದ ಮಗು ಸಾವು.!

By kannadanewsnow5702/06/2025 1:28 PM KARNATAKA 1 Min Read

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಹೊಲದಲ್ಲಿ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ…

ALERT : ಸಾರ್ವಜನಿಕರೇ ಈ ತಪ್ಪು ಮಾಡಿದ್ರೆ ವಂಚಕರು ನಿಮ್ಮ ಹೆಸರಿನಲ್ಲಿ `ಸಿಮ್ ಕಾರ್ಡ್’ ಬಳಸುತ್ತಾರೆ ಎಚ್ಚರ.!

02/06/2025 1:23 PM

BREAKING : ರಾಜ್ಯದಲ್ಲಿ `ಥಗ್ಸ್ ಲೈಫ್’ ಸಿನಿಮಾ ರಿಲೀಸ್ ಆದ್ರೆ ಅಖಂಡ ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ ಎಚ್ಚರಿಕೆ

02/06/2025 1:06 PM

BIG NEWS : ನಿಮ್ಮ ಬಳಿ ಈ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

02/06/2025 12:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.