ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಮುಗ್ಧ ಜೀವಗಳ ಸಾವಿಗೆ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಮುಖೇಶ್ ಅಂಬಾನಿ ಸಂತಾಪ ಸೂಚಿಸಿದ್ದಾರೆ.
2025 ರ ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಅನಾಗರಿಕ ಭಯೋತ್ಪಾದಕ ದಾಳಿಯಲ್ಲಿ ಮುಗ್ಧ ಭಾರತೀಯರ ಸಾವಿಗೆ ಶೋಕಿಸುವಲ್ಲಿ ರಿಲಯನ್ಸ್ ಕುಟುಂಬದ ಪ್ರತಿಯೊಬ್ಬರೊಂದಿಗೆ ನಾನು ಸೇರಿಕೊಂಡಿದ್ದೇನೆ ಎಂದು ಮುಖೇಶ್ ಅಂಬಾನಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ ಅಂಬಾನಿ ಸಂತಾಪ ಸೂಚಿಸಿದ್ದಾರೆ.
ಗಾಯಾಳುಗಳಿಗೆ ಉಚಿತ ಚಿಕಿತ್ಸೆ
ದಾಳಿಯಲ್ಲಿ ಗಾಯಗೊಂಡ ಎಲ್ಲರೂ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ. ಮುಂಬೈನ ನಮ್ಮ ರಿಲಾನ್ಸ್ ಫೌಂಡೇಶನ್ ಸರ್ ಎಚ್ಎನ್ ಆಸ್ಪತ್ರೆ ಗಾಯಗೊಂಡ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲಿದೆ ಎಂದು ಅವರು ಹೇಳಿದರು.
ಭಯೋತ್ಪಾದನೆ ಮಾನವೀಯತೆಯ ಶತ್ರು. ಇದನ್ನು ಯಾರೂ ಯಾವುದೇ ರೀತಿಯಲ್ಲಿ ಬೆಂಬಲಿಸಬಾರದು ಎಂದು ಅವರು ಹೇಳಿದರು.
Shri. Mukesh D Ambani, Chairman and Managing Director, Reliance Industries Limited
“I am joined by everyone in the Reliance family in mourning the deaths of innocent Indians in the barbaric terrorist attack in Pahalgam on 22nd April 2025. We offer our heartfelt condolences to… pic.twitter.com/6hR0hsCii4
— Reliance Industries Limited (@RIL_Updates) April 24, 2025
ಭಯೋತ್ಪಾದನೆಯ ಪಿಡುಗಿನ ವಿರುದ್ಧದ ನಿರ್ಣಾಯಕ ಯುದ್ಧದಲ್ಲಿ ರಿಲಯನ್ಸ್ ಕುಟುಂಬವು ಪ್ರಧಾನಿ ನರೇಂದ್ರ ಮೋದಿ, ಭಾರತ ಸರ್ಕಾರ ಮತ್ತು ಇಡೀ ದೇಶದೊಂದಿಗೆ ಸಂಪೂರ್ಣವಾಗಿ ನಿಲ್ಲುತ್ತದೆ ಎಂದು ಮುಖೇಶ್ ಅಂಬಾನಿ ತಿಳಿಸಿದ್ದಾರೆ.
GOOD NEWS: ಪ್ರವಾಸಿಗರಿಗೆ ಗುಡ್ ನ್ಯೂಸ್: ಮೇ.1ರಿಂದ ‘ಜೋಗ ಜಲಪಾತ’ ಸಾರ್ವಜನಿಕರ ವೀಕ್ಷಣೆಗೆ ಅವಕಾಶ | Jog Falls
BREAKING : ‘ಭೂಮಿಯ ತುದಿಯವರೆಗೂ ಬೆನ್ನಟ್ಟಿ ಹುಡುಕಿ ಉಗ್ರರನ್ನು ಹೊಡೆಯುತ್ತೇವೆ’ : ಪ್ರಧಾನಿ ಮೋದಿ ಗುಡುಗು!