ಬೆಂಗಳೂರು: ಮುಂಗಾರು ಮಳೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರ ಸುರಕ್ಷತೆ ಮತ್ತು ರೈಲುಗಳ ಸುಗಮ ಸಂಚಾರಕ್ಕಾಗಿ ನೈರುತ್ಯ ರೈಲ್ವೆಯ ವ್ಯಾಪ್ತಿಯಲ್ಲಿ ಸಂಚರಿಸುವ ಕೆಲವು ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ ಎಂದು ಕೊಂಕಣ ರೈಲ್ವೆ ನಿಗಮ ನಿಯಮಿತ ತಿಳಿಸಿದೆ. ಈ ಪರಿಷ್ಕೃತ ವೇಳಾಪಟ್ಟಿ 2025ರ ಜೂನ್ ಹದಿನೈದರಿಂದ ಅಕ್ಟೋಬರ್ ಇಪ್ಪತ್ತರವರೆಗೆ ಜಾರಿಯಲ್ಲಿರುತ್ತದೆ.
ಪರಿಷ್ಕೃತ ಸಮಯವು 2025ರ ಜೂನ್ ಹದಿನೈದರಂದು ಅಥವಾ ನಂತರ ತಮ್ಮ ಮೂಲ ನಿಲ್ದಾಣಗಳಿಂದ ಹೊರಡುವ ರೈಲುಗಳಿಗೆ ಅನ್ವಯಿಸುತ್ತದೆ.
ಮುಂಗಾರು ವೇಳಾಪಟ್ಟಿ ಅನ್ವಯವಾಗುವ ರೈಲುಗಳ ವಿವರ:
1. ರೈಲು ಸಂಖ್ಯೆ 16595/16596 ಕೆಎಸ್ಆರ್ ಬೆಂಗಳೂರು–ಕಾರವಾರ–ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್.
2. ರೈಲು ಸಂಖ್ಯೆ 16585/16586 ಎಸ್ಎಮ್ವಿಟಿ ಬೆಂಗಳೂರು–ಮುರ್ಡೇಶ್ವರ–ಎಸ್ಎಮ್ವಿಟಿ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್.
3. ರೈಲು ಸಂಖ್ಯೆ 16515/16516 ಯಶವಂತಪುರ–ಕಾರವಾರ–ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್.
4. ರೈಲು ಸಂಖ್ಯೆ 12741/12742 ವಾಸ್ಕೋ-ಡ-ಗಾಮಾ – ಪಾಟ್ನಾ – ವಾಸ್ಕೋ-ಡ-ಗಾಮಾ ಸಾಪ್ತಾಹಿಕ ಸೂಪರ್ಫಾಸ್ಟ್ಎಕ್ಸ್ ಪ್ರೆಸ್.
5. ರೈಲು ಸಂಖ್ಯೆ 11097/11098 ಪುಣೆ–ಎರ್ನಾಕುಲಂ–ಪುಣೆ ಸಾಪ್ತಾಹಿಕ ಎಕ್ಸ್ ಪ್ರೆಸ್.
ಈ ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಮ್ಮ ಪ್ರಯಾಣದ ದಿನಾಂಕದ ಮುಂಚಿತವಾಗಿ ಪರಿಷ್ಕೃತ ವೇಳಾಪಟ್ಟಿಯನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ. ನವೀಕರಿಸಲಾದ ವೇಳಾಪಟ್ಟಿಯ ಕುರಿತಾದ ಮಾಹಿತಿಯು ಭಾರತೀಯ ರೈಲ್ವೆಯ ಅಧಿಕೃತ ಜಾಲತಾಣಗಳಲ್ಲಿ ಹಾಗೂ ರೈಲು ನಿಲ್ದಾಣಗಳಲ್ಲಿ ಲಭ್ಯವಿರುತ್ತದೆ.
BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಪಾನ ಮುಕ್ತ: ಸಿಎಂ ಸಿದ್ಧರಾಮಯ್ಯ ಘೋಷಣೆ