Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `ನೇಕಾರರಿಗೆ ಗುಡ್ ನ್ಯೂಸ್’ : ಈ ಯೋಜನೆಯಡಿ ವಾರ್ಷಿಕವಾಗಿ ಸಿಗಲಿದೆ 5000 ರೂ.!

15/09/2025 8:45 AM

ಐಟಿಆರ್ ಗಡುವು ವಿಸ್ತರಣೆ ? ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ | ITR deadline extension

15/09/2025 8:44 AM

ನೇಪಾಳದಲ್ಲಿ ಇಂದು ಮೂವರು ಹೊಸ ಸಚಿವರೊಂದಿಗೆ ಸಚಿವ ಸಂಪುಟ ವಿಸ್ತರಣೆ

15/09/2025 8:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ’ ಮೇ 05 ರಿಂದ ಗಣತಿ ಆರಂಭ.!
KARNATAKA

BIG NEWS : ರಾಜ್ಯದಲ್ಲಿ `ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ’ ಮೇ 05 ರಿಂದ ಗಣತಿ ಆರಂಭ.!

By kannadanewsnow5729/04/2025 5:21 PM
vidhana soudha
vidhana soudha

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಸಂಬಂಧ ಮೇ 05 ರಿಂದ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕೈಗೊಳ್ಳಲಿದ್ದು, ಈ ಸಮೀಕ್ಷೆಯು ಮೂರು ಹಂತಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಮೊದಲ ಹಂತದ ಸಮೀಕ್ಷೆಯನ್ನು ಮೇ 05 ರಿಂದ 17 ರವರೆಗೆ ಮನೆ-ಮನೆ ಭೇಟಿ ನೀಡಿ ಸಮೀಕ್ಷಾ ಕಾರ್ಯ ಕೈಗೊಳ್ಳುವುದು. ಎರಡನೇ ಹಂತವು ಮೇ 19 ರಿಂದ 21 ರವರೆಗೆ ಸಮೀಕ್ಷೆ ಬ್ಲಾಕ್‍ಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು, ಮನೆ ಭೇಟಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸುವುದು. ಮೂರನೇ ಹಂತ ಮೇ 19 ರಿಂದ 21 ರವರೆಗೆ ಸ್ವಯಂ ಘೋಷಣೆ (ಆನ್‍ಲೈನ್ ಮೂಲಕ) ಸಮೀಕ್ಷೆಗೆ ಮಾಹಿತಿ ಒದಗಿಸಬಹುದಾಗಿದೆ.

ಸಮೀಕ್ಷಾ ಕಾರ್ಯದ ಪೂರ್ವಭಾವಿಯಾಗಿ ರಾಜ್ಯ ಮಟ್ಟದಲ್ಲಿ ನಡೆದ ತರಬೇತಿಗೆ ಚಿತ್ರದುರ್ಗ ಜಿಲ್ಲಾ ಹಂತದಿಂದ 03 ಮಾಸ್ಟರ್ ಟ್ರೈನರ್‍ಗಳನ್ನು ನಿಯೋಜಿಸಲಾಗಿದ್ದು, ಈ ಟ್ರೈನರ್‍ಗಳು 2025ರ ಏಪ್ರಿಲ್ 25ರಂದು ಬೆಂಗಳೂರಿನಲ್ಲಿ ನಡೆದ ತರಬೇತಿಯಲ್ಲಿ ಭಾಗವಹಿಸಿ, ಸಮೀಕ್ಷಾ ಕಾರ್ಯಗಳ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು 2025ರ ಏಪ್ರಿಲ್ 28ರಂದು ನಡೆದ ಜಿಲ್ಲಾ ಮಟ್ಟದ ತರಬೇತಿ ಕಾರ್ಯದಲ್ಲಿ 06 ತಾಲ್ಲೂಕುಗಳಿಂದ ನಿಯೋಜಿಸಿರುವ ತಾಲ್ಲೂಕು ಮಟ್ಟದ 30 ಮಾಸ್ಟರ್ ಟ್ರೈನರ್‍ಗಳಿಗೆ ತರಬೇತಿಯನ್ನು ನೀಡಲಾಗಿರುತ್ತದೆ.

ಮೇ 02ರಂದು ತಾಲ್ಲೂಕು ಹಂತದಲ್ಲಿ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೈನರ್‍ಗಳಿಂದ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳುವ ಗಣತೀದಾರರಿಗೆ ಮತ್ತು ಮೇಲ್ವಿಚಾರಕರುಗಳಿಗೆ ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳನ್ನೊಳಗೊಂಡ ತಾಲ್ಲೂಕು ಸಮನ್ವಯ ಸಮಿತಿಯ ನೇತೃತ್ವದಲ್ಲಿ ತರಬೇತಿಯನ್ನು ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಸಂಬಂಧ ಕರ್ನಾಟಕ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್.ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಏಕ ಸದಸ್ಯ ಆಯೋಗವು 2025ರ ಮಾರ್ಚ್ 27ರಂದು ಮುಖ್ಯಮಂತ್ರಿಗಳಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದು. ಈ ವರದಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸುವ ಸಲುವಾಗಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆ ಅವರು ರಾಜ್ಯ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಿ ಆದೇಶಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ವೇಳಾಪಟ್ಟಿಯನ್ವಯ ಸಮೀಕ್ಷಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ಎಲ್ಲಾ ಪರಿಶಿಷ್ಟ ಜಾತಿ ಜನಾಂಗದವರು ಗಣತೀದಾರರಿಗೆ ಅಗತ್ಯ ಮಾಹಿತಿಯನ್ನು ನೀಡಿ ಸಮೀಕ್ಷಾ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷ ಟಿ.ವೆಂಕಟೇಶ್ ತಿಳಿಸಿದ್ದಾರೆ.

BIG NEWS: Census begins from May 5 for 'Scheduled Caste internal reservation' in the state!
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ನೇಕಾರರಿಗೆ ಗುಡ್ ನ್ಯೂಸ್’ : ಈ ಯೋಜನೆಯಡಿ ವಾರ್ಷಿಕವಾಗಿ ಸಿಗಲಿದೆ 5000 ರೂ.!

15/09/2025 8:45 AM1 Min Read

`OPS’ ಜಾರಿ ನಿರೀಕ್ಷೆಯಲ್ಲಿರುವ `ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್

15/09/2025 8:35 AM1 Min Read

ಸಾರ್ವಜನಿಕರೇ ಗಮನಿಸಿ : 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಇದ್ರೆ ತಪ್ಪದೇ ಈ ಕೆಲಸ ಮಾಡಿ.!

15/09/2025 8:28 AM2 Mins Read
Recent News

ರಾಜ್ಯ ಸರ್ಕಾರದಿಂದ `ನೇಕಾರರಿಗೆ ಗುಡ್ ನ್ಯೂಸ್’ : ಈ ಯೋಜನೆಯಡಿ ವಾರ್ಷಿಕವಾಗಿ ಸಿಗಲಿದೆ 5000 ರೂ.!

15/09/2025 8:45 AM

ಐಟಿಆರ್ ಗಡುವು ವಿಸ್ತರಣೆ ? ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ | ITR deadline extension

15/09/2025 8:44 AM

ನೇಪಾಳದಲ್ಲಿ ಇಂದು ಮೂವರು ಹೊಸ ಸಚಿವರೊಂದಿಗೆ ಸಚಿವ ಸಂಪುಟ ವಿಸ್ತರಣೆ

15/09/2025 8:39 AM

`OPS’ ಜಾರಿ ನಿರೀಕ್ಷೆಯಲ್ಲಿರುವ `ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್

15/09/2025 8:35 AM
State News
KARNATAKA

ರಾಜ್ಯ ಸರ್ಕಾರದಿಂದ `ನೇಕಾರರಿಗೆ ಗುಡ್ ನ್ಯೂಸ್’ : ಈ ಯೋಜನೆಯಡಿ ವಾರ್ಷಿಕವಾಗಿ ಸಿಗಲಿದೆ 5000 ರೂ.!

By kannadanewsnow5715/09/2025 8:45 AM KARNATAKA 1 Min Read

ಕೈಮಗ್ಗ ಮತ್ತು ಜವಳಿ ಇಲಾಖೆಯು ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ನೇಕಾರಿಕೆ ವೃತ್ತಿಯಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕವಾಗಿ ರೂ.5,000…

`OPS’ ಜಾರಿ ನಿರೀಕ್ಷೆಯಲ್ಲಿರುವ `ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್

15/09/2025 8:35 AM

ಸಾರ್ವಜನಿಕರೇ ಗಮನಿಸಿ : 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಇದ್ರೆ ತಪ್ಪದೇ ಈ ಕೆಲಸ ಮಾಡಿ.!

15/09/2025 8:28 AM

ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 7.76 ಲಕ್ಷ `BPL ರೇಷನ್ ಕಾರ್ಡ್’ ರದ್ದು.!

15/09/2025 8:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.