Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಭಾರತದಲ್ಲಿ ಸರ್ಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗಳ ವೆಚ್ಚ 8 ಪಟ್ಟು ಹೆಚ್ಚು : ಸಮೀಕ್ಷೆ

28/08/2025 4:12 PM

‘ಸವಾಲುಗಳು, ಸ್ನೇಹಿತರು ಮತ್ತು ಶತ್ರುಗಳು ಎಲ್ಲರೂ ಒಂದೇ’ : ಪ್ರಧಾನಿ ಮೋದಿ ‘ಜಪಾನ್’ ಭೇಟಿ ಏಕೆ ಮುಖ್ಯ ಗೊತ್ತಾ.?

28/08/2025 3:53 PM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 706 ಅಂಕ ಕುಸಿತ : 24,600 ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

28/08/2025 3:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ‌ 3,514 ಕಂದಾಯ ಗ್ರಾಮಗಳಿಗೂ ಡಿಸೆಂಬರ್‌ ನೊಳಗೆ ಹಕ್ಕುಪತ್ರ ವಿತರಣೆ : ಸಚಿವ ಕೃಷ್ಣಬೈರೇಗೌಡ
KARNATAKA

BIG NEWS : ರಾಜ್ಯದ‌ 3,514 ಕಂದಾಯ ಗ್ರಾಮಗಳಿಗೂ ಡಿಸೆಂಬರ್‌ ನೊಳಗೆ ಹಕ್ಕುಪತ್ರ ವಿತರಣೆ : ಸಚಿವ ಕೃಷ್ಣಬೈರೇಗೌಡ

By kannadanewsnow5704/05/2025 6:15 AM

ಬೆಂಗಳೂರು : ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ 3514 ಕಂದಾಯ ಗ್ರಾಮಗಳಿಗೂ ಅಂತಿಮ ಅಧಿಸೂಚನೆ ಹೊರಡಿಸಬೇಕು. ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಹಕ್ಕುಪತ್ರ ನೀಡುವ ಮೂಲಕ ಬಡವರ ಕೆಲಸವನ್ನು ಈ ವರ್ಷದೊಳಗೆ ಮುಗಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಇಂದು ಗಡುವು ನಿಗದಿಗೊಳಿಸಿದ್ದಾರೆ.

ಶನಿವಾರ ವಿಕಾಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ ಅವರು, “ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಕಡು ಬಡವರಿಗೆ ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ 2017 ರಲ್ಲಿ ಕಾನೂನಿಗೆ ತಿದ್ದುಪಡಿ ತರಲಾಗಿತ್ತು. ಆದರೆ ಅನುಷ್ಠಾನ ಈವರೆಗೆ ಪೂರ್ಣಗೊಳ್ಳದಿರುವುದು ದುರಾದೃಷ್ಟ. ಈ ಹಿಂದೆ ಹಲವರಿಗೆ ಹಕ್ಕುಪತ್ರ ನೀಡಿದ್ದರೂ, ಇನ್ನೂ ಆಗಬೇಕಾದ ಕೆಲಸ ಸಾಕಷ್ಟು ಬಾಕಿ ಇದೆ” ಎಂದು ವಿಷಾದಿಸಿದರು.

“ಪ್ರಸ್ತುತ ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 3,514 ಕಂದಾಯ ಗ್ರಾಮಗಳಿದ್ದು, ಈವರೆಗೆ 2600 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕಳೆದ ಸರ್ಕಾರದ ಅವಧಿಯಲ್ಲಿ 1400 ಗ್ರಾಮಗಳ ರಚನೆ ಆಗಿದ್ದರೆ, ಕಳೆದ ಎರಡು ವರ್ಷದ ಅವಧಿಯಲ್ಲಿ 1,200 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ವಾಸ್ತವದಲ್ಲಿ ಇನ್ನೂ 1014 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಬಾಕಿ ಇದೆ” ಎಂದರು.

ಮುಂದುವರೆದು ”ಕೇಂದ್ರ ಸರ್ಕಾರ ದೇಶದಾದ್ಯಂತ ಜನಗಣತಿ ಆರಂಭಿಸುವುದಾಗಿ ಘೋಷಿಸಿದೆ. ಜನಗಣತಿ ಆರಂಭವಾದರೆ ಜುಲೈ ತಿಂಗಳಿನಿಂದ ಕೇಂದ್ರ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಲು ಅವಕಾಶ ನೀಡುವುದಿಲ್ಲ. ಪರಿಣಾಮ ಬಡವರ ಅತಿಮುಖ್ಯ ಕೆಲಸಕ್ಕೆ ತೊಡಕುಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಾಕಿ ಇರುವ 1014 ಗ್ರಾಮಗಳಿಗೂ ಇದೇ ವರ್ಷದ ಜೂನ್ ಅಂತ್ಯದೊಳಗೆ ಅಂತಿಮ ಅಧಿಸೂಚನೆ ಹೊರಡಿಸಿ ಜುಲೈ ನಂತರ ಹಕ್ಕುಪತ್ರ ವಿತರಿಸಿ. ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ಮಾತಿನಂತೆ ಈ ಕೆಲಸವನ್ನು ಈ ವರ್ಷಾಂತ್ಯದೊಳಗೆ ಮುಗಿಸಿ” ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಮಯದ ಗಡುವು ನಿಗದಿಪಡಿಸಿದರು.

ಬಡವರ ಕೆಲಸವೇ ಸರ್ಕಾರದ ಧ್ಯೇಯ!

ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದೆ. ಎಲ್ಲಾ ಕಾಲದಲ್ಲೂ ಸಮಾಜದ ಅತ್ಯಂತ ಹಿಂದುಳಿದವರು ಹಾಗೂ ಕಡು ಬಡವರ ಪರ ಕೆಲಸ ಮಾಡುವುದೇ ಸರ್ಕಾರದ ಧ್ಯೇಯ. ಆ ನಿಟ್ಟಿನಲ್ಲಿ ಆಡಳಿತ ವರ್ಗವೂ ಸಹಕರಿಸಬೇಕು ಎಂದು ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಕಿವಿಮಾತು ಹೇಳಿದರು.

ಈ ತಿಂಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸುತ್ತಿದೆ. ನಾಗರೀಕ ಸಮಾಜದಲ್ಲಿ ಮೂಲಭೂತ ಸೌಲಭ್ಯಗಳಿಂದ ವಂಚಿತರಾದ ಹಾಗೂ ಹಿಂದುಳಿದ ಜನ ಸಮೂಹಕ್ಕೆ ಸಹಾಯವಾಗುವ ಕೆಲಸ ಮಾಡಿ ಆ ಮೂಲಕ ಎರಡು ವರ್ಷ ಪೂರೈಸಿದ ಹರ್ಷಾಚರಣೆ ನಡೆಸಿದರೆ ಮಾತ್ರ ಆ ಕಾರ್ಯಕ್ರಮ ಅರ್ಥಪೂರ್ಣ. ಆ ನಿಟ್ಟಿನಲ್ಲಿ ಮೇ. 20ಕ್ಕೆ ಹೊಸಪೇಟೆಯಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮೂಲಕ ದಶಕಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ” ಎಂದು ತಿಳಿಸಿದರು.

“ಕಾರ್ಯಕ್ರಮದ ಭಾಗವಾಗಿ ಈಗಾಗಲೇ ಅಂತಿಮ ಅಧಿಸೂಚನೆ ಆಗಿರುವ 2600 ಕಂದಾಯ ಗ್ರಾಮಗಳ 1.41 ಲಕ್ಷ ಫಲಾನುಭವಿಗಳ ಪೈಕಿ 92,719 ಜನ ಹಕ್ಕುಪತ್ರ ಸಿದ್ದವಾಗಿದೆ. ಇನ್ನೂ 50 ಸಾವಿರ ಹಕ್ಕುಪತ್ರಗಳು ಬಾಕಿ ಇದ್ದು, ಬಾಕಿ ಹಕ್ಕುಪತ್ರಗಳನ್ನೂ ಶೀಘ್ರ ಸಿದ್ದಪಡಿಸಿ. ತುಮಕೂರು, ಚಿತ್ರದುರ್ಗ, ಬೆಳಗಾವಿ, ಹಾವೇರಿ, ರಾಯಚೂರು, ಬಾಗಲಕೋಟೆ, ವಿಜಯನಗರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಬಾಕಿ ಇರುವ ಅಥವಾ ಬಿಟ್ಟುಹೋಗಿರುವ ಗ್ರಾಮಗಳನ್ನು ಗುರುತಿಸಿದರೆ ಇನ್ನೂ 30 ರಿಂದ 35 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ಸಿದ್ದಪಡಿಸಬೇಕಾಗಬಹುದು. ಆ ಕೆಲಸವನ್ನೂ ಸಹ ಶೀಘ್ರ ಪೂರ್ಣಗೊಳಿಸಿ” ಎಂದರು.

ಮುಂದುವರೆದು, “ಹಾಡಿ, ಹಟ್ಟಿ, ತಾಂಡಾಗಳಲ್ಲಿ ವಾಸಿಸುತ್ತಿರುವವರು ಸಾಮಾಜಿಕವಾಗಿ ಹಾಗೂ ಆರ್ಥಿವಾಗಿ ಸಾಕಷ್ಟು ಹಿಂದುಳಿದವರು. ಆದರೆ, ಈ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸದ ಕಾರಣ ದಶಕಗಳಿಂದಲೂ ಇವರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇತ್ತೀಚೆಗೆ ಕಳೆದೊಂದು ದಶಕಗಳಿಂದ ರಾಜ್ಯ ಸರ್ಕಾರ ಗ್ರಾಮಠಾಣಾ ಗಡಿಗಳನ್ನೂ ಮೀರಿ “ಹಾಡಿ, ಹಟ್ಟಿ, ತಾಂಡಾಗಳಿಗೆ ರಸ್ತೆ ಹಾಗೂ ನೀರಿನ ಸೌಲಭ್ಯ ನೀಡಿದ್ದೇವೆ. ಈ ಹಿಂದೆ ಶಾಲೆ, ನೀರು ಸರಬರಾಜು ಸಹ ನೀಡುತ್ತಿರಲಿಲ್ಲ ಎಂಬುದೇ ಕಟು ವಾಸ್ತವ. ಇಂತಹ ಜನರಿಗೆ ಶಾಶ್ವತ ಪರಿಹಾರ ನೀಡಿದರೆ ಮಾತ್ರ ಸರ್ಕಾರ ಎರಡು ವರ್ಷ ಪೂರೈಸಿದ್ದೂ ಅರ್ಥಪೂರ್ಣವಾಗುತ್ತದೆ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳೂ ಬಡವರ ಕೆಲಸಗಳನ್ನು ಆದ್ಯತೆ ಮೇಲೆ ಮಾಡಬೇಕು” ಎಂದು ಸೂಚಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಹಾಗೂ ಭೂ ಮಾಪನಾ ಇಲಾಖೆ ಆಯುಕ್ತರಾದ ಮಂಜುನಾಥ್ ಉಪಸ್ಥಿತರಿದ್ದರು.

BIG NEWS: Title deeds to be distributed to all 3514 revenue villages in the state by December: Minister Krishna Byre Gowda
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲೊಂದು `ಪೈಶಾಚಿಕ ಕೃತ್ಯ’ : ಅಪ್ರಾಪ್ತ ಬಾಲಕನ ಮೇಲೆ ಹುಡುಗನಿಂದಲೇ ಲೈಂಗಿಕ ದೌರ್ಜನ್ಯ.!

28/08/2025 3:31 PM1 Min Read

ಚಾಮುಂಡಿ ಬೆಟ್ಟದ ಬಗ್ಗೆ ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ತಕ್ಷಣ ಹಿಂಪಡೆಯಬೇಕು: ಬಿವೈ ವಿಜಯೇಂದ್ರ ಆಗ್ರಹ

28/08/2025 3:30 PM3 Mins Read

BIG NEWS: ಅನನ್ಯಾ ಭಟ್ ಕೇಸಲ್ಲಿ ಸುಳ್ಳು ದೂರು ಆರೋಪ: ಸುಜಾತ ಭಟ್ ಯಾವುದೇ ಕ್ಷಣದಲ್ಲೂ SIT ಅರೆಸ್ಟ್

28/08/2025 3:26 PM1 Min Read
Recent News

BIG NEWS : ಭಾರತದಲ್ಲಿ ಸರ್ಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗಳ ವೆಚ್ಚ 8 ಪಟ್ಟು ಹೆಚ್ಚು : ಸಮೀಕ್ಷೆ

28/08/2025 4:12 PM

‘ಸವಾಲುಗಳು, ಸ್ನೇಹಿತರು ಮತ್ತು ಶತ್ರುಗಳು ಎಲ್ಲರೂ ಒಂದೇ’ : ಪ್ರಧಾನಿ ಮೋದಿ ‘ಜಪಾನ್’ ಭೇಟಿ ಏಕೆ ಮುಖ್ಯ ಗೊತ್ತಾ.?

28/08/2025 3:53 PM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 706 ಅಂಕ ಕುಸಿತ : 24,600 ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

28/08/2025 3:43 PM

8th Pay Commission : ಸರ್ಕಾರಿ ನೌಕರರ ‘CGHS’ ರದ್ದು ; ಹೊಸ ವಿಮಾ ಯೋಜನೆ ಜಾರಿ!

28/08/2025 3:32 PM
State News
KARNATAKA

SHOCKING : ರಾಜ್ಯದಲ್ಲೊಂದು `ಪೈಶಾಚಿಕ ಕೃತ್ಯ’ : ಅಪ್ರಾಪ್ತ ಬಾಲಕನ ಮೇಲೆ ಹುಡುಗನಿಂದಲೇ ಲೈಂಗಿಕ ದೌರ್ಜನ್ಯ.!

By kannadanewsnow5728/08/2025 3:31 PM KARNATAKA 1 Min Read

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, 16 ವರ್ಷದ ಹುಡುಗನೊಬ್ಬ 14 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ…

ಚಾಮುಂಡಿ ಬೆಟ್ಟದ ಬಗ್ಗೆ ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ತಕ್ಷಣ ಹಿಂಪಡೆಯಬೇಕು: ಬಿವೈ ವಿಜಯೇಂದ್ರ ಆಗ್ರಹ

28/08/2025 3:30 PM

BIG NEWS: ಅನನ್ಯಾ ಭಟ್ ಕೇಸಲ್ಲಿ ಸುಳ್ಳು ದೂರು ಆರೋಪ: ಸುಜಾತ ಭಟ್ ಯಾವುದೇ ಕ್ಷಣದಲ್ಲೂ SIT ಅರೆಸ್ಟ್

28/08/2025 3:26 PM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಬಸ್-ಆಟೋ ರಿಕ್ಷಾ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು.!

28/08/2025 3:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.