ಬೆಂಗಳೂರು: ಮುಖ್ಯಮಂತ್ರಿ ಸಚಿವವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತ ಸಿಬ್ಬಂದಿಗಳ ವಿರುದ್ಧ ದೂರುಗಳು ಕೇಳಿ ಬಂದಿದ್ದವು. ಈ ಹಿನ್ನಲೆಯಲ್ಲಿ ಮೇಜರ್ ಸರ್ಜರಿ ಎನ್ನುವಂತೆ 16 ಸಿಬ್ಬಂದಿಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಸಿಎಂ ಉಪ ಕಾರ್ಯದರ್ಶಿ ವರ್ಗಾವಣೆ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ 9 ಸಿಬ್ಬಂದಿಗಳನ್ನು ಮೂಲ ಇಲಾಖೆಗೆ ತೆರಳುವಂತೆ ಸೂಚಿಸಿದ್ದಾರೆ.
ಇನ್ನೂ ಸಿಎಂ ಪರಿಹಾರ ನಿಧಿ ವಿಭಾಗದ 7 ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಮಾತೃ ಇಲಾಖೆಗೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಈ ಮೂಲಕ ಸಿಎಂ ಪರಿಹಾರ ನಿಧಿ ವಿಭಾಗದಿಂದ ಅತಿ ಹೆಚ್ಚು ನೌಕರರನ್ನು ಎತ್ತಂಗಡಿ ಮಾಡಲಾಗಿದೆ.
ಈ ಹಿಂದೆಯೂ 33 ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿತ್ತು. ಇಂದು 16 ಸಿಬ್ಬಂದಿಯನ್ನು ಮುಖ್ಯಮಂತ್ರಿ ಸಚಿವಾಲಯದ ಕಾರ್ಯದಿಂದ ಬಿಡುಗಡೆ ಮಾಡಿ ವರ್ಗಾವಣೆ ಮಾಡಲಾಗಿದೆ.
‘ಮಿಷನ್ 2035’ ಮೂಲಕ ‘ಥಲಸ್ಸೇಮಿಯಾ’ ಮುಕ್ತ ರಾಷ್ಟ್ರಗೊಳಿಸುವ ಗುರಿ: ನಟ ಜಾಕಿ ಶ್ರಾಫ್ ಥಲಸ್ಸೆಮಿಯಾ
BREAKING: ಭಾರತ-ಪಾಕ್ ಉದ್ವಿಗ್ನತೆಯ ನಡುವೆ 2ನೇ ಬಾರಿಗೆ ಫತಾಹ್ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ!