ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನ್ನುವಂತೆ ಸರ್ಕಾರವು ನೌಕರರಿಗೆ ( Karnataka Government Employees ) ತುಟ್ಟಿಭತ್ಯೆಯನ್ನು ( Dearness Allowance-DA) ಶೇ.1.50ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ದಿನಾಂಕ 01-01-2025ರಿಂದ ಅನ್ವಯವಾಗುವಂತೆ ಶೇ.1.50 ತುಟ್ಟಿಭತ್ಯೆಯನ್ನು ಹೆಚ್ಚಿಸಿ ( DA Hike ) ಅನುಮೋದನೆ ನೀಡಿದೆ ಎಂಬುದಾಗಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.10.75ರಿಂದ 12.25ರಷ್ಟು ಅಂದರೇ 1.50ರಷ್ಟು ಹೆಚ್ಚಿಸಿದೆ. ಇಂತಹ ಸಿಎಂ ಸಿದ್ಧರಾಮಯ್ಯಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ನೌಕರರ ಪರವಾಗಿ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಧನ್ಯವಾದಗಳನ್ನು ತಿಳಿಸಿದ್ದಾರೆ.
BREAKING: ಭಾರತದ ಮೇಲೆ ‘ಅಣ್ವಸ್ತ್ರ ದಾಳಿ’ ನಡೆಸುವುದಾಗಿ ಪಾಕಿಸ್ತಾನ ಬೆದರಿಕೆ
BREAKING: ಪಾಕಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪ | Earthquake In Pakistan