ಯಾದಗಿರಿ : ಯಾದಗಿರಿಯಲ್ಲಿ ಗೌರವಾದ ದುರಂತ ಒಂದು ಸಂಭವಿಸಿದ್ದು ಸ್ನೇಹಿತರ ಜೊತೆಗೆ ಈಸಲು ತಳ್ಳಿದಾಗ ಕಾಲು ಜಾರಿ ಹೊಂಡದಲ್ಲಿ ಬಿದ್ದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ಎಂಬ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ವಡಗೇರಾ ತಾಲ್ಲೂಕಿನ ಕಾಡಂಗೇರಾ(ಬಿ) ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.ಪಟ್ಟಣದ ತಹಶೀಲ್ದಾರ್ ಕಚೇರಿಯಿಂದ ಸ್ವಲ್ಪ ದೂರದಲ್ಲಿರುವ ಹೊಂಡಕ್ಕೆ ಕಂಠಿತಾಂಡಾದ ನಾಲ್ಕು ಹುಡುಗರು ಟ್ಯೂಬ್ಗಳ ಸಹಾಯದಿಂದ ಈಜಾಡಲು ಹೋಗಿದ್ದಾರೆ.ಈ ವೇಳೆ ವಿನೋದ ಕಾಲು ಜಾರಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾನೆ.
ಮೃತ ಬಾಲಕ ವಡಗೇರಾ ತಾಲ್ಲೂಕಿನ ಕಾಡಂಗೇರಾ(ಬಿ) ಗ್ರಾಮದ ಮೋರಾರ್ಜಿ ವಸತಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸ್ಥಳಕ್ಕೆ ವಡಗೇರಾ ಪೊಲೀಸ್ ಠಾಣೆಯ ಪಿಎಸ್ಐ ಮಹೇಬೂಬಅಲಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.