Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌: ಸಚಿವ ರಾಮಲಿಂಗಾರೆಡ್ಡಿ

01/07/2025 9:32 PM

ಮೂತ್ರದಲ್ಲಿ ‘ಸಿಹಿ ವಾಸನೆ’ಯೊಂದಿಗೆ ಈ ‘ಲಕ್ಷಣ’ಗಳು ಕಂಡು ಬಂದರೆ, ಈ ರೋಗ ಇದೆ ಎಂದರ್ಥ!

01/07/2025 9:05 PM

ಹಾಸನದಲ್ಲಿ ಸರಣಿ ಹೃದಯಾಘಾತ: ಅಧ್ಯಯನ ನಡೆಸಿ 10 ದಿನಗಳಲ್ಲಿ ವರದಿಗೆ ಸೂಚನೆ- ಸಚಿವ ದಿನೇಶ್ ಗುಂಡೂರಾವ್

01/07/2025 8:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು: ಸಿಎಂ ಸಿದ್ಧರಾಮಯ್ಯ
KARNATAKA

ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು: ಸಿಎಂ ಸಿದ್ಧರಾಮಯ್ಯ

By kannadanewsnow0912/05/2025 6:18 PM

ಮೈಸೂರು: ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವ ಕೆಲವರು ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಪ್ರಾಣಿಗಳನ್ನು ಪ್ರೀತಿಸುವುದು ತಪ್ಪಲ್ಲ, ಆದರೆ ಮನುಷ್ಯರನ್ನು ವಿರೋಧಿಸುವುದು ತಪ್ಪು ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಜಿಲ್ಲಾಡಳಿತ ಇಂದು ಹೆಚ್.ಡಿ ಕೋಟೆಯಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು

ಆರ್ಥಿಕವಾಗಿ ಸರ್ವರಿಗೂ ಶಕ್ತಿ ಬಂದರೆ ಜಾತಿ ಹೋಗುತ್ತದೆ. ಬುದ್ಧ, ಬಸವಣ್ಣ ಅವರು ಜಾತಿ ಹೋಗಬೇಕೆಂದು ಹೋರಾಟ ಮಾಡಿದರೂ ಇನ್ನೂ ಜಾತಿ ಹೋಗಿಲ್ಲ. ಬಸವಣ್ಣನನ್ನು ಪ್ರೀತಿಸ್ತೀವಿ, ಪೂಜಿಸ್ತೀವಿ ಆದರೆ ಬಸವಣ್ಣರನ್ನು ಪಾಲಿಸುವುದಿಲ್ಲ. ಇದು ಇಂದಿನ ದುರಂತ. ಜಾತಿ ಅಸಮಾನತೆ ಕಾರಣಕ್ಕೆ ನೊಂದಿದ್ದ ಅಂಬೇಡ್ಕರ್ ಅವರು ಬೌದ್ಧ ಧರ್ಮಕ್ಕೆ ಸೇರಿ, ತಾನು ಹಿಂದೂವಾಗಿ ಹುಟ್ಟಿದರೂ ಹಿಂದೂವಾಗಿ ಸಾಯುವುದಿಲ್ಲ ಎಂದು ಘೋಷಿದಿದ್ದರು ಎಂದರು.

ಒಳ‌ಮೀಸಲಾತಿ ಕುರಿತಾದ ಗೊಂದಲ ನಿವಾರಿಸಲು ನಾಗಮೋಹನ್ ದಾಸ್ ಅವರ ಸಮಿತಿ ರಚಿಸಿದ್ದೇವೆ. ಸಮಿತಿಯ ಶಿಫಾರಸ್ಸಿನಂತೆ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ಆರಂಭಿಸಿದ್ದೇವೆ. ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆ ಒಳ ಮೀಸಲಾತಿಯ ಎಲ್ಲಾ ಗೊಂದಲಗಳನ್ನು ನಿವಾರಿಸುತ್ತದೆ ಎನ್ನುವ ಭರವಸೆ ಇದೆ ಎಂದು ಹೇಳಿದರು.

ಅಂಬೇಡ್ಕರ್ ಅವರು ಮೀಸಲಾತಿ ಕೊಡದೇ ಹೋಗಿದ್ದರೆ ನಾವು ಮನುಷ್ಯರಾಗಲು ಸಾಧ್ಯವೇ ಇರಲಿಲ್ಲ. ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ . ಶತ ಶತಮಾನಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಡಲಾಗಿತ್ತು. ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆದು ಮುಖ್ಯಮಂತ್ರಿ ಆದೆ, ಇಲ್ಲದಿದ್ದರೆ ಕುರಿನೊ, ಎಮ್ಮೆನೊ ಕಾಯ್ಕಂಡು ಇರಬೇಕಿತ್ತು ಎಂದರು.

ನಮ್ಮ ಸ್ಥಿತಿಗೆ ಶಿಕ್ಷಣ ಮತ್ತು ಸಾಮಾಜಿಕ ಪರಿಸ್ಥಿತಿಗಳೇ ಕಾರಣವೇ ಹೊರತು ಹಣೆಬರಹ ಕಾರಣ ಅಲ್ಲ. ಪೂರ್ವ ಜನ್ಮದ ಪಾಪದ ಕಾರಣಕ್ಕೆ ಈಗ ಬಡತನ ಬಂದಿದೆ ಎನ್ನುವ ಕರ್ಮ ಸಿದ್ಧಾಂತ ಅಪ್ಪಟ ಸುಳ್ಳು. ಅದಕ್ಕೇ ಕರ್ಮ‌ ಸಿದ್ದಾಂತ ತಿರಸ್ಕರಿಸಿ ಎಂದು ಬಸವಣ್ಣನವರು ಕರೆ ನೀಡಿದರು. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದು ತಿಳಿಸಿದರು.

ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ ₹8,000 ಕೋಟಿ ಶಾಸಕರ ಅನುದಾನ, ಸಾವಿರಾರು ಕೋಟಿ ಹಣ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ. 55 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ತೆಗೆದಿರಿಸಿದ್ದೀವಿ. 80 ಸಾವಿರ ಕೋಟಿ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಿಟ್ಟೇವೆ. ಈ ಹಣ ಎಲ್ಲಿಂದ ಬಂತು? ಎಂದು ಪ್ರಶ್ನಿಸಿದರು.

ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ. ಹಾಲಿನ ದರ 4ರೂ ಹೆಚ್ಚು ಮಾಡಿ ಇದರಲ್ಲಿ ಒಂದೂ ರೂಪಾಯಿಯನ್ನೂ ನಾವು ಇಟ್ಟುಕೊಳ್ಳದೆ ಅಷ್ಟನ್ನೂ ರೈತರಿಗೆ, ಗೋಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವೆ. ಆದರೆ ಬಿಜೆಪಿ ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್ , ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿ ಎಲ್ಲದರ ಬೆಲೆ ಹೆಚ್ಚಿಸಿದ್ದು ಕೇಂದ್ರದ ಬಿಜೆಪಿ ಸರ್ಕಾರ. ಆದ್ದರಿಂದ ಜನಾಕ್ರೋಶ ಇರುವುದು ಬಿಜೆಪಿ ಸರ್ಕಾರದ ಮೋದಿಯವರ ವಿರುದ್ಧವೇ ಹೊರತು ನಮ್ಮ ಸರ್ಕಾರದ ಮೇಲಲ್ಲ ಎಂದರು.

BREAKING: ಭಾರತ-ಪಾಕ್ ಡಿಜಿಎಂಒ ಮಟ್ಟದ ಮಾತುಕತೆ ಅಂತ್ಯ: ಕದನ ವಿರಾಮ ಉಲ್ಲಂಘಿಸಲ್ಲವೆಂದ ಪಾಕಿಸ್ತಾನ

ಆಪರೇಷನ್ ಸಿಂಧೂರ್: ಇಂದು ರಾತ್ರಿ 8 ಗಂಟೆಗೆ ದೇಶದ ಜನತೆ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ | PM Narendra Modi Speech

Share. Facebook Twitter LinkedIn WhatsApp Email

Related Posts

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌: ಸಚಿವ ರಾಮಲಿಂಗಾರೆಡ್ಡಿ

01/07/2025 9:32 PM3 Mins Read

ಹಾಸನದಲ್ಲಿ ಸರಣಿ ಹೃದಯಾಘಾತ: ಅಧ್ಯಯನ ನಡೆಸಿ 10 ದಿನಗಳಲ್ಲಿ ವರದಿಗೆ ಸೂಚನೆ- ಸಚಿವ ದಿನೇಶ್ ಗುಂಡೂರಾವ್

01/07/2025 8:57 PM2 Mins Read

ನಾಳೆ ಬೆಂಗಳೂರು ಗ್ರಾಮಾಂತರ ಭಾಗದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

01/07/2025 8:45 PM1 Min Read
Recent News

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌: ಸಚಿವ ರಾಮಲಿಂಗಾರೆಡ್ಡಿ

01/07/2025 9:32 PM

ಮೂತ್ರದಲ್ಲಿ ‘ಸಿಹಿ ವಾಸನೆ’ಯೊಂದಿಗೆ ಈ ‘ಲಕ್ಷಣ’ಗಳು ಕಂಡು ಬಂದರೆ, ಈ ರೋಗ ಇದೆ ಎಂದರ್ಥ!

01/07/2025 9:05 PM

ಹಾಸನದಲ್ಲಿ ಸರಣಿ ಹೃದಯಾಘಾತ: ಅಧ್ಯಯನ ನಡೆಸಿ 10 ದಿನಗಳಲ್ಲಿ ವರದಿಗೆ ಸೂಚನೆ- ಸಚಿವ ದಿನೇಶ್ ಗುಂಡೂರಾವ್

01/07/2025 8:57 PM

BREAKING : ‘CUET UG- 2025 ಅಂತಿಮ ‘ಆನ್ಸರ್ ಕೀ’ ಬಿಡುಗಡೆ, ಈ ರೀತಿ ಚೆಕ್ ಮಾಡಿ!

01/07/2025 8:52 PM
State News
KARNATAKA

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌: ಸಚಿವ ರಾಮಲಿಂಗಾರೆಡ್ಡಿ

By kannadanewsnow0901/07/2025 9:32 PM KARNATAKA 3 Mins Read

ದಕ್ಷಿಣ ಕನ್ನಡ: ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌ ಮಂಜೂರಾತಿ ಹಾಗೂ ಈ ಕೆಳಕಂಡ…

ಹಾಸನದಲ್ಲಿ ಸರಣಿ ಹೃದಯಾಘಾತ: ಅಧ್ಯಯನ ನಡೆಸಿ 10 ದಿನಗಳಲ್ಲಿ ವರದಿಗೆ ಸೂಚನೆ- ಸಚಿವ ದಿನೇಶ್ ಗುಂಡೂರಾವ್

01/07/2025 8:57 PM

ನಾಳೆ ಬೆಂಗಳೂರು ಗ್ರಾಮಾಂತರ ಭಾಗದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

01/07/2025 8:45 PM

ನಿಮ್ಮ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸಲು ಒಮ್ಮೆ ಈ ಪ್ರಯತ್ನ ಮಾಡಿ

01/07/2025 8:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.