Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ಇಂದು, ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ `ಮಳೆ’ : `ಯೆಲ್ಲೋ ಅಲರ್ಟ್’ ಘೋಷಣೆ.!

14/05/2025 6:14 AM

BIG NEWS : ಮುಂಗಾರು ಪೂರ್ವ ಮಳೆ ಅಬ್ಬರ : ರಾಜ್ಯಾದ್ಯಂತ ಸಿಡಿಲಿಗೆ 9 ಮಂದಿ ಬಲಿ.!

14/05/2025 6:06 AM

BIG NEWS : ರಾಜ್ಯ ಸರ್ಕಾರದಿಂದ `PF’ ಚಂದಾದಾರರಿಗೆ ಗುಡ್ ನ್ಯೂಸ್ : ಬಡ್ಡಿದರ ‘ಶೇ.7.1’ರಷ್ಟು ನಿಗದಿಗೆ ಮಹತ್ವದ ಆದೇಶ | PF Interest Rate

14/05/2025 5:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮುಂಗಾರು ಪೂರ್ವ ಮಳೆ ಅಬ್ಬರ : ರಾಜ್ಯಾದ್ಯಂತ ಸಿಡಿಲಿಗೆ 9 ಮಂದಿ ಬಲಿ.!
KARNATAKA

BIG NEWS : ಮುಂಗಾರು ಪೂರ್ವ ಮಳೆ ಅಬ್ಬರ : ರಾಜ್ಯಾದ್ಯಂತ ಸಿಡಿಲಿಗೆ 9 ಮಂದಿ ಬಲಿ.!

By kannadanewsnow5714/05/2025 6:06 AM

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ನಿನ್ನೆ ಒಂದೇ ದಿನ ಸಿಡಿಲಿಗೆ 9 ಮಂದಿ ಬಲಿಯಾಗಿದ್ದಾರೆ.

ಬಳ್ಳಾರಿ, ವಿಜಯಪುರ ಹಾಗೂ ಹಾವೇರಿಯ ತಲಾ ಇಬ್ಬರು, ರಾಯಚೂರು, ಕೊಪ್ಪಳ, ಚಿಕ್ಕಮಗಳೂರಿನ ತಲಾ ಒಬ್ಬರು ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರವಿಯಲ್ಲಿ ಒಂದೇ ಕುಟುಂಬದ ಮೂವರು, ಹಾವೇರಿಯಲ್ಲಿ ಇಬ್ಬರು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ, ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ಲೆಹಳ್ಳಿ ಹಾಗು ಗದಗದಲ್ಲಿ ಒಬ್ಬೊಬ್ಬರು ಸಿಡಿಲು ಬಡಿದು ಸಾವನಪ್ಪಿದ್ದಾರೆ.

ಬಳ್ಳಾರಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ರಾರವಿ ಗ್ರಾಮದಲ್ಲಿ ಸಿಡಿಲು ಬಡಿದು ಮೂವರು ಸಾವನಪ್ಪಿದ್ದಾರೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.

ಮೃತರನ್ನು ಬೀರಪ್ಪ (45) ಸುನಿಲ್ (26) ಮತ್ತು ವಿನೋದ್ (14) ಎಂದು ತಿಳಿದು ಬಂದಿದೆ. ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮಳೆ ಬಂದಾಗ ಮೂವರು ಮರದ ಕೆಳಗೆ ನಿಂತಿದ್ದಾರೆ. ಈ ವೇಳೆ ಭಾರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

ವಿಜಯಪುರ

ಇನ್ನು ತಂಗಡಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಸಡಿಲು ಬಡಿದು ಮಲ್ಲಪ್ಪ ತಾಳಿಕೋಟೆ (47) ಸಾವನಪ್ಪಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮಲ್ಲಪ್ಪ ಸಾವನಪ್ಪಿದ್ದಾರೆ. ಘಟನೆ ಕುರಿತಂತೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು

ಅದೇ ರೀತಿಯಾಗಿ ಗೆದ್ಲೇಹಳ್ಳಿಯಲ್ಲಿ ಸಿಡಿಲು ಬಡಿದು ಕುರಿಗಾಹಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ದಲಹಳ್ಳಿ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಸಿಡಿಲು ಬಡಿದು ಕುರಿಗಾಹಿ ಲೊಕೇಶಪ್ಪ (65) ಸಾವನಪ್ಪಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.

ಹಾವೇರಿ, ಗದಗದಲ್ಲೂ ಮೂವರು ಸಾವು

ಅಲ್ಲದೇ ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ಕೂಡ ಸಿಡಿಲು ಬಡಿದು ಮೂವರು ಸಾವನಪ್ಪಿರುವ ಘಟನೆ ವರದಿಯಾಗಿದೆ. ಹೌದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಿರೇಕೆರೂರು ತಾಲ್ಲೂಕಿನ ಡಮ್ಮಳ್ಳಿಯ ನಾಗಪ್ಪ ಬಸವಣೆಪ್ಪ ಕಣಸೋಗಿ (65), ರಟ್ಟೀಹಳ್ಳಿ ತಾಲ್ಲೂಕಿನ ಕುಡುಪಲಿ ಸುನೀಲ್ ಕಾಳೇರ (29) ಹಾಗೂ ಗದಗ ಜಿಲ್ಲೆಯ ಬಸಾಪುರದ ಮರಿಯವ್ವ ನಾಯ್ಕರ್ (60) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

BIG NEWS: Pre-monsoon rains: 9 people killed by lightning across the state!
Share. Facebook Twitter LinkedIn WhatsApp Email

Related Posts

Rain Alert : ಇಂದು, ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ `ಮಳೆ’ : `ಯೆಲ್ಲೋ ಅಲರ್ಟ್’ ಘೋಷಣೆ.!

14/05/2025 6:14 AM1 Min Read

BIG NEWS : ರಾಜ್ಯ ಸರ್ಕಾರದಿಂದ `PF’ ಚಂದಾದಾರರಿಗೆ ಗುಡ್ ನ್ಯೂಸ್ : ಬಡ್ಡಿದರ ‘ಶೇ.7.1’ರಷ್ಟು ನಿಗದಿಗೆ ಮಹತ್ವದ ಆದೇಶ | PF Interest Rate

14/05/2025 5:57 AM1 Min Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಇಲ್ಲಿದೆ ಮಾಹಿತಿ | WATCH VIDEO

14/05/2025 5:50 AM1 Min Read
Recent News

Rain Alert : ಇಂದು, ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ `ಮಳೆ’ : `ಯೆಲ್ಲೋ ಅಲರ್ಟ್’ ಘೋಷಣೆ.!

14/05/2025 6:14 AM

BIG NEWS : ಮುಂಗಾರು ಪೂರ್ವ ಮಳೆ ಅಬ್ಬರ : ರಾಜ್ಯಾದ್ಯಂತ ಸಿಡಿಲಿಗೆ 9 ಮಂದಿ ಬಲಿ.!

14/05/2025 6:06 AM

BIG NEWS : ರಾಜ್ಯ ಸರ್ಕಾರದಿಂದ `PF’ ಚಂದಾದಾರರಿಗೆ ಗುಡ್ ನ್ಯೂಸ್ : ಬಡ್ಡಿದರ ‘ಶೇ.7.1’ರಷ್ಟು ನಿಗದಿಗೆ ಮಹತ್ವದ ಆದೇಶ | PF Interest Rate

14/05/2025 5:57 AM

ಉದ್ಯೋಗಿಗಳೇ ಗಮನಿಸಿ : `PF’ ಬ್ಯಾಲೆನ್ಸ್ ಪರಿಶೀಲಿಸಲು ಜಸ್ಟ್ ಈ ಸಂಖ್ಯೆಗೆ ಮಿಸ್ಡ್ ಕಾಲ್ ಮಾಡಿದ್ರೆ ತಕ್ಷಣ ತಿಳಿಯುತ್ತೆ | PF balance

14/05/2025 5:51 AM
State News
KARNATAKA

Rain Alert : ಇಂದು, ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ `ಮಳೆ’ : `ಯೆಲ್ಲೋ ಅಲರ್ಟ್’ ಘೋಷಣೆ.!

By kannadanewsnow5714/05/2025 6:14 AM KARNATAKA 1 Min Read

ಬೆಂಗಳೂರು :ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಶುರುವಾಗಿದ್ದು, ಇಂದು ಮತ್ತು ನಾಳೆ ರಾಜ್ಯದ 17 ಜಿಲ್ಲೆಗಳಲ್ಲಿ ಗುಡುಗು ಸಹಿತ…

BIG NEWS : ಮುಂಗಾರು ಪೂರ್ವ ಮಳೆ ಅಬ್ಬರ : ರಾಜ್ಯಾದ್ಯಂತ ಸಿಡಿಲಿಗೆ 9 ಮಂದಿ ಬಲಿ.!

14/05/2025 6:06 AM

BIG NEWS : ರಾಜ್ಯ ಸರ್ಕಾರದಿಂದ `PF’ ಚಂದಾದಾರರಿಗೆ ಗುಡ್ ನ್ಯೂಸ್ : ಬಡ್ಡಿದರ ‘ಶೇ.7.1’ರಷ್ಟು ನಿಗದಿಗೆ ಮಹತ್ವದ ಆದೇಶ | PF Interest Rate

14/05/2025 5:57 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಇಲ್ಲಿದೆ ಮಾಹಿತಿ | WATCH VIDEO

14/05/2025 5:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.