ಮೈಸೂರು : ಮೈಸೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, KSRTC ಬಸ್ ಒಂದು ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಮಂಚನಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ.
ಮೃತ ಕಾರು ಚಾಲಕನನ್ನು ಮೈಸೂರಿನ ಕನಕದಾಸ ನಗರದ ಸುನಿಲ್ (34) ಎಂದು ತಿಳಿದುಬಂದಿದೆ. ಸುನಿಲ್ ಮೂಲತಃ ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಎಂದು ತಿಳಿದು ಬಂದಿದೆ ಇನ್ನು ಕಾರಿನಲ್ಲಿ ಇದ್ದ ಮತ್ತೊರ್ವ ರಮೇಶ್ ಎನ್ನುವವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರುನಿಂದ ಕಾರು ಹಾಸನದ ಕಡೆಗೆ ತೆರಳುತ್ತಿತ್ತು. ಹಾಗೆಯೇ ಚಿಕ್ಕಮಗಳೂರಿನಿಂದ ಮೈಸೂರು ಕಡೆಗೆ ಕೆಎಸ್ಆರ್ಟಿಸಿ ಬಸ್ ಚಲಿಸುತ್ತಿತ್ತು.ಈ ವೇಳೆ ಈ ಒಂದು ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.