ದಕ್ಷಿಣಕನ್ನಡ : ವಿಧವೆ ಬಳಿ 5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಖಜಾನೆಯ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಖಜಾನೆ ಮುಖ್ಯ ಲೆಕ್ಕಿಗ ಹಾಗು FDA ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ವಿಧವೆಯಿಂದ 5000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೂರುದಾರ ಮಹಿಳೆಯ ಪತಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆಗಿದ್ದರು. ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯದರ್ಶಿಯಾಗಿದ್ದರು. 2023 ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿದ್ದು, ಮಹಿಳೆಯ ಪತಿ 2024 ಜೂನ್ ತಿಂಗಳಲ್ಲಿ ಮೃತಪಟ್ಟಿದ್ದಾರೆ. ಮುಖ್ಯ ಲೆಕ್ಕಿಗರ ಬಳಿ ಮರಣ ಉಪದಾನ ನೀಡುವಂತೆ ಕೇಳಿದ್ದಾರೆ.
ಗಂಡನ ಮರಣ ಉಪದಾನ ನೀಡುವಂತೆ ವಿಧವೆ ಮಹಿಳೆ ಕೇಳಿದ್ದಾರೆ. ಎರಡು ಬಾರಿ ಖಜಾನೆಗೆ ಹೋಗಿ ವಿಚಾರಿಸಿದರೂ ಕೂಡ ಕೆಲಸ ಮಾಡಿಕೊಟ್ಟಿಲ್ಲ. ಹಣ ಜಮೆ ಮಾಡಲು ಖಜಾನೆಯ ಮುಖ್ಯ ಲೇಕ್ಕಿಗ ಭಾಸ್ಕರ್, ಹಾಗೂ ಎಫ್ಡಿಎ ಬಸವೇಗೌಡ 5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ವಿಧವೆ ಮಹಿಳೆ ಮಂಗಳೂರು ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದಾರೆ. ಇಂದು ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಲೋಕಾಯುಕ್ತ ಎಸ್ ಪಿ ಕುಮಾರಸ್ವಾಮಿ ಈ ಒಂದು ಕಾರ್ಯಾಚರಣೆ ನಡೆದಿದೆ.