Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಳೆಗಾಲದಲ್ಲಿ ಶೀತ, ಜ್ವರದಿಂದ ಬಳಲುತ್ತಿದ್ದೀರಾ.? ಈ ಬೆಳ್ಳುಳ್ಳಿ ಕರಿ ನಿಮ್ಮನ್ನ ಗುಣಪಡಿಸುತ್ತೆ!

20/08/2025 10:04 PM

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಮಹೇಶ್ ತಿಮರೋಡಿ ಅಕ್ರಮವಾಗಿ ಶವ ಹೂತಿದ್ದಾಗಿ SITಗೆ ದೂರು

20/08/2025 9:54 PM

Good News ; ದೇಶದಲ್ಲಿ ಉದ್ಯೋಗಿಗಳ ಸಂಖ್ಯೆ ಹೆಚ್ಚಳ ; ಜೂನ್’ನಲ್ಲಿ ‘EPFO’ಗೆ 21.9 ಲಕ್ಷ ಹೊಸ ಸದಸ್ಯರ ಸೇರ್ಪಡೆ

20/08/2025 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ಮೀಸಲು : CM ಸಿದ್ದರಾಮಯ್ಯ.!
KARNATAKA

BIG NEWS : ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕ’ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ಮೀಸಲು : CM ಸಿದ್ದರಾಮಯ್ಯ.!

By kannadanewsnow5717/05/2025 7:20 AM

ಬಳ್ಳಾರಿ : ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕಾರ್ಯಕ್ರಮ ಆಯೋಜನೆ ಕುರಿತಂತೆ, ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಈಗ ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಜಾರಿಗೆ ಕುರಿತಂತೆ ಚರ್ಚಿಸಲಾಗಿತ್ತು. ಪ್ರಥಮವಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿö್ಮ ಮತ್ತು ಯುವನಿಧಿ ಸೇರಿದಂತೆ ಹಂತ-ಹAತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು.

ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಪ್ರಜಾಪ್ರಭುತ್ವದ ಮತದಾರರಿಗೆ ನಮ್ಮ ಸರ್ಕಾರವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದರು.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಹಲವರು ಟೀಕಿಸುತ್ತಿದ್ದಾರೆ. ಈಗಾಗಲೇ ಗ್ಯಾರಂಟಿ ಯೋಜನೆಗಳಿಗೆ 90 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. 2024-25 ನೇ ಸಾಲಿನಲ್ಲಿ 51 ಸಾವಿರ ಕೋಟಿ ರೂ. ಗಳನ್ನು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲಾಗಿದೆ. ಕಳೆದ ವಷÀð ಗ್ಯಾರಂಟಿ ಯೋಜನೆಗಳಿಗಾಗಿಯೇ 52.9 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಈ ವಷÀð 50.18 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ, ಅಗತ್ಯಬಿದ್ದಲ್ಲಿ ಇನ್ನು ಹೆಚ್ಚಿನ ಅನುದಾನ ನೀಡಲಾಗುವುದು.

2024-25 ನೇ ಸಾಲಿನಲ್ಲಿ 3,71,000 ಕೋಟಿ ರೂ. ಬಜೆಟ್ ಗಾತ್ರವಿತ್ತು. 2025-26 ನೇ ಸಾಲಿನಲ್ಲಿ ಬಜೆಟ್ ನ ಗಾತ್ರವನ್ನು 4,09,000 ಕೋಟಿ ರೂ. ಗೆ ಹೆಚ್ಚಿಸಲಾಗಿದೆ. ಅಂದರೆ ಸುಮಾರು 38,000 ಕೋಟಿ ರೂ. ಹೆಚ್ಚಳವಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ನುಡಿದಂತೆ ನಡೆದ ಸರ್ಕಾರ ನಮ್ಮದು ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆ ಇಲ್ಲ. ನಮ್ಮ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಕೆಆರ್‌ಡಿಬಿ ಗೆ 5 ಸಾವಿರ ಕೋಟಿ ರೂ.:
ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗೆ ನಮ್ಮ ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂ. ನೀಡಿದೆ. ಈ ಭಾಗದ 371 (ಜೆ) ವಿಶೇಷ ಸ್ಥಾನಮಾನವನ್ನು ನಮ್ಮ ಸರ್ಕಾರವೇ ಜಾರಿಗೊಳಿಸಿದ್ದು ಎಂದು ಮನನ ಮಾಡಿದ ಅವರು, ಕೇಂದ್ರ ಸರ್ಕಾರವು ತಿದ್ದುಪಡಿ ಬಳಿಕ ವಿಶೇಷ ಸ್ಥಾನಮಾನ ನೀಡಲು ಪ್ರತಿಬಿಂಬಿಸಿತ್ತು, ಆದರೆ ಈವರೆಗೆ ಒಂದು ರೂ. ಕೂಡ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಸರ್ಕಾರವು ವಸತಿ ಯೋಜನೆಯಡಿ ಒಂದೇ ಒಂದು ಮನೆ ನೀಡಲಾಗಲಿಲ್ಲ, ಈ ಬಾರಿ ವಸತಿ ಯೋಜನೆಯಡಿ ಮನೆ ವಿತರಿಸುವ ಕುರಿತಂತೆ ವಸತಿ ಸಚಿವರು ಪ್ರಸ್ತಾಪಿಸಿದ್ದಾರೆ ಎಂದರು.

1.03 ಲಕ್ಷ ಹಕ್ಕುಪತ್ರ ವಿತರಣೆ:
ನಮ್ಮ ಸರ್ಕಾರವು ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದ್ದು, ಇನ್ನುಮುಂದೆಯೂ ನಡೆಯುತ್ತೇವೆ ಎಂದು ಜನರಿಗೆ ತಿಳಿಯಪಡಿಸಲು ಮೇ 20 ರಂದು ನಡೆಯುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮದಲ್ಲಿ ಹಾಡಿ, ಹಟ್ಟಿ ಮತ್ತು ತಾಂಡಾ ಪ್ರದೇಶದ ಕನಿಷ್ಠ 1.03 ಲಕ್ಷ ಫಲಾನುಭವಿಗಳಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತದೆ. ಇದರಿಂದ ಜನರಿಗೆ ಸೌಲಭ್ಯ ಸಮರ್ಪಿಸುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಇದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಕಾರ್ಯಕ್ರಮಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿರೋಧ ಪಕ್ಷದ ನಾಯಕರು, ಶಾಸಕರುಗಳನ್ನು ಸಹ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತರಲಾಗುವುದು. ಕನಿಷ್ಠ 3 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನಸ್ತೋಮ ಸೇರುವ ನಿರೀಕ್ಷೆ ಹೊಂದಲಾಗಿದೆ. ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಝೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಡಾ.ಹೆಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಣ್ಣನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ಸಂಸದ ಈ.ತುಕಾರಾಮ್, ಶಾಸಕರಾದ ಹೆಚ್.ಆರ್.ಗವಿಯಪ್ಪ, ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಎಂ.ಪಿ.ಲತಾ, ಶ್ರೀನಿವಾಸ ನಾಯ್ಕ ಮತ್ತು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಮೊಹಮದ್ ನೊಂಗ್ಜಾಯ್ ಅಕ್ರಂ ಅಲಿ ಪಾಷಾ, ಎಸ್ಪಿಗಳಾದ ಡಾ.ಶೋಭರಾಣಿ.ವಿ.ಜೆ., ಶ್ರೀಹರಿಬಾಬು ಸೇರಿದಂತೆ ಅನೇಕರು ಹಾಜರಿದ್ದರು.

BIG NEWS: State government allocates Rs 5000 crore for development of 'Kalyana Karnataka': CM Siddaramaiah!
Share. Facebook Twitter LinkedIn WhatsApp Email

Related Posts

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಮಹೇಶ್ ತಿಮರೋಡಿ ಅಕ್ರಮವಾಗಿ ಶವ ಹೂತಿದ್ದಾಗಿ SITಗೆ ದೂರು

20/08/2025 9:54 PM1 Min Read

ತುಂಗಭದ್ರಾ ಅಣೆಕಟ್ಟೆ ನೂತನ ‘ಕ್ರೆಸ್ಟ್ ಗೇಟ್’ಗಳ ತಯಾರಿಕೆ ಪ್ರಗತಿಯಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

20/08/2025 9:41 PM3 Mins Read

ಮೇಲ್ಮನೆಯಲ್ಲೂ ಬಾಲ್ಯ ವಿವಾಹ ನಿಷೇಧ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್‌

20/08/2025 9:39 PM1 Min Read
Recent News

ಮಳೆಗಾಲದಲ್ಲಿ ಶೀತ, ಜ್ವರದಿಂದ ಬಳಲುತ್ತಿದ್ದೀರಾ.? ಈ ಬೆಳ್ಳುಳ್ಳಿ ಕರಿ ನಿಮ್ಮನ್ನ ಗುಣಪಡಿಸುತ್ತೆ!

20/08/2025 10:04 PM

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಮಹೇಶ್ ತಿಮರೋಡಿ ಅಕ್ರಮವಾಗಿ ಶವ ಹೂತಿದ್ದಾಗಿ SITಗೆ ದೂರು

20/08/2025 9:54 PM

Good News ; ದೇಶದಲ್ಲಿ ಉದ್ಯೋಗಿಗಳ ಸಂಖ್ಯೆ ಹೆಚ್ಚಳ ; ಜೂನ್’ನಲ್ಲಿ ‘EPFO’ಗೆ 21.9 ಲಕ್ಷ ಹೊಸ ಸದಸ್ಯರ ಸೇರ್ಪಡೆ

20/08/2025 9:47 PM

ತುಂಗಭದ್ರಾ ಅಣೆಕಟ್ಟೆ ನೂತನ ‘ಕ್ರೆಸ್ಟ್ ಗೇಟ್’ಗಳ ತಯಾರಿಕೆ ಪ್ರಗತಿಯಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

20/08/2025 9:41 PM
State News
KARNATAKA

ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್: ಮಹೇಶ್ ತಿಮರೋಡಿ ಅಕ್ರಮವಾಗಿ ಶವ ಹೂತಿದ್ದಾಗಿ SITಗೆ ದೂರು

By kannadanewsnow0920/08/2025 9:54 PM KARNATAKA 1 Min Read

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ನೂರಾರು ಶವ ಹೂತ ಪ್ರಕರಣಕ್ಕೆ ಹೊಸ ದೂರುದಾರ ಎಂಟ್ರಿಯಾಗಿದ್ದು, ಮಹೇಶ್…

ತುಂಗಭದ್ರಾ ಅಣೆಕಟ್ಟೆ ನೂತನ ‘ಕ್ರೆಸ್ಟ್ ಗೇಟ್’ಗಳ ತಯಾರಿಕೆ ಪ್ರಗತಿಯಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

20/08/2025 9:41 PM

ಮೇಲ್ಮನೆಯಲ್ಲೂ ಬಾಲ್ಯ ವಿವಾಹ ನಿಷೇಧ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್‌

20/08/2025 9:39 PM

ಯುಜಿಸಿಇಟಿ/ನೀಟ್ ಗೆ 2ನೇ ಸುತ್ತಿನ ಕೌನ್ಸೆಲಿಂಗ್ ಆರಂಭ: ಆ.29ಕ್ಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

20/08/2025 9:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.