Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಂದು ರಾಜ್ಯದ ‘ನೋಂದಣಿ ಸಂಖ್ಯೆ’ ಹೊಂದಿರುವ ವಾಹನ ಮತ್ತೊಂದು ರಾಜ್ಯದಲ್ಲಿ ಓಡಿಸ್ಬೋದೇ.?

12/08/2025 10:16 PM

BREAKING : ‘ಆನ್ಲೈನ್ ಪಾವತಿ ಸಂಗ್ರಾಹಕ’ವಾಗಿ ಕಾರ್ಯ ನಿರ್ವಹಿಸಲು ‘ಪೇಟಿಎಂ ಪಾವತಿ ಸೇವೆ’ಗಳಿಗೆ ‘RBI’ ಅನುಮೋದನೆ

12/08/2025 9:37 PM

ಉಚಿತ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಗಾಗಿ ಅರ್ಜಿ ಆಹ್ವಾನ

12/08/2025 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ‘ಮುಂಬಡ್ತಿ’ಯಲ್ಲಿ ಶೇ.4ರಷ್ಟು ಮೀಸಲಾತಿ ನೀಡಿ ಆದೇಶ
KARNATAKA

BIG NEWS: ರಾಜ್ಯದ ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ‘ಮುಂಬಡ್ತಿ’ಯಲ್ಲಿ ಶೇ.4ರಷ್ಟು ಮೀಸಲಾತಿ ನೀಡಿ ಆದೇಶ

By kannadanewsnow0917/05/2025 3:10 PM

ಬೆಂಗಳೂರು: ರಾಜ್ಯದ ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಂಗವೈಕಲ್ಯ ಉಳ್ಳಂತ ಸರ್ಕಾರಿ ನೌಕರರಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ಮುಂಬಡ್ತಿ ನೀಡುವಲ್ಲಿ ಶೇ.4ರಷ್ಟು ಮೀಸಲಾತಿ ನಿಗದಿ ಪಡಿಸಿ ಆದೇಶಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, ದಿನಾಂಕ:28.03.2023ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಕಲ್ಪಿಸಲಾಗಿರುತ್ತದೆ.

ದಿನಾಂಕ:28.11.2023ರ ಸರ್ಕಾರಿ ಆದೇಶದ ಅನುಬಂಧ-2ರಲ್ಲಿ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ನೌಕರರಿಗೆ ಗ್ರೂಪ್ ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್ ಸಿ ಯಿಂದ ಗ್ರೂಪ್-ಸಿ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂದರ್ಭದಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಮರಿನಲ್ಲಿ 5, 30, 55, 82ನೇ ಬಿಂದುಗಳನ್ನು ಗುರುತಿಸಲಾಗಿದೆ.

ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ಸೇರಿದ ಎದ್ದು ಕಾಣುವ ಅಂಗಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೂ ಸಹ ವಿಸ್ತರಿಸುವ ಬಗ್ಗೆ ಸರ್ಕಾರ ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ:28.03.2023ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 121 ಸನನಿ 2020ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್- ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ದಿನಾಂಕ:28.03.2023ರ ಆದೇಶದಲ್ಲಿನ ಎಲ್ಲಾ ಷರತ್ತು ಮತ್ತು ಉಪಬಂಧಗಳಲ್ಲಿ ಯಾವುದೇ ಬದಲಾವಣೆ ಇಲ್ಲದ (ಅನುಬಂಧವನ್ನು ಹೊರತುಪಡಿಸಿ) ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದದ ಹುದ್ದೆಗಳಿಗೂ ಸಹ ವಿಸ್ತರಿಸಿ ಆದೇಶಿಸಲಾಗಿದೆ.

ಈ ಆದೇಶವನ್ನು ಸಚಿವ ಸಂಪುಟ ಸಭೆಯ ಪ್ರಕರಣ ಸಂಖ್ಯೆ: 249/2025 ದಿನಾಂಕ 09-05-2025ರಲ್ಲಿ ನಿರ್ಣಯದಂತೆ ಹೊರಡಿಸಿದೆ ಎಂದಿದ್ದಾರೆ.

GOOD NEWS: ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

ALERT : ಸಾರ್ವಜನಿಕರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಹೆಸರಿನಲ್ಲಿ `ಸಿಮ್ ಕಾರ್ಡ್’ ಬಳಸುತ್ತಾರೆ ವಂಚಕರು.!

Share. Facebook Twitter LinkedIn WhatsApp Email

Related Posts

ಉಚಿತ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಗಾಗಿ ಅರ್ಜಿ ಆಹ್ವಾನ

12/08/2025 9:08 PM1 Min Read

FC ಕಾರಣ ನೀಡಿ ಕಾರಿನ ರಿಪೇರಿ ಖರ್ಚು ನೀಡದ ವಿಮಾ ಕಂಪನಿಗೆ 1.50 ಲಕ್ಷ ದಂಡ ವಿಧಿಸಿದ ಕೋರ್ಟ್

12/08/2025 8:57 PM2 Mins Read

ರಾಜ್ಯಾಧ್ಯಂತ ‘ಎ-ಖಾತಾ ವ್ಯವಸ್ಥೆ’ ಜಾರಿ: ಸಚಿವ ಬೈರತಿ ಸುರೇಶ್

12/08/2025 8:42 PM1 Min Read
Recent News

ಒಂದು ರಾಜ್ಯದ ‘ನೋಂದಣಿ ಸಂಖ್ಯೆ’ ಹೊಂದಿರುವ ವಾಹನ ಮತ್ತೊಂದು ರಾಜ್ಯದಲ್ಲಿ ಓಡಿಸ್ಬೋದೇ.?

12/08/2025 10:16 PM

BREAKING : ‘ಆನ್ಲೈನ್ ಪಾವತಿ ಸಂಗ್ರಾಹಕ’ವಾಗಿ ಕಾರ್ಯ ನಿರ್ವಹಿಸಲು ‘ಪೇಟಿಎಂ ಪಾವತಿ ಸೇವೆ’ಗಳಿಗೆ ‘RBI’ ಅನುಮೋದನೆ

12/08/2025 9:37 PM

ಉಚಿತ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಗಾಗಿ ಅರ್ಜಿ ಆಹ್ವಾನ

12/08/2025 9:08 PM

BREAKING : ರಾಜಸ್ಥಾನ-ಹರಿಯಾಣ ಗಡಿಯಲ್ಲಿ 2 ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆ, ಹಲವು ವಾಹನಗಳಿಗೆ ಬೆಂಕಿ

12/08/2025 9:01 PM
State News
KARNATAKA

ಉಚಿತ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಗಾಗಿ ಅರ್ಜಿ ಆಹ್ವಾನ

By kannadanewsnow0912/08/2025 9:08 PM KARNATAKA 1 Min Read

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಮೊಬೈಲ್…

FC ಕಾರಣ ನೀಡಿ ಕಾರಿನ ರಿಪೇರಿ ಖರ್ಚು ನೀಡದ ವಿಮಾ ಕಂಪನಿಗೆ 1.50 ಲಕ್ಷ ದಂಡ ವಿಧಿಸಿದ ಕೋರ್ಟ್

12/08/2025 8:57 PM

ರಾಜ್ಯಾಧ್ಯಂತ ‘ಎ-ಖಾತಾ ವ್ಯವಸ್ಥೆ’ ಜಾರಿ: ಸಚಿವ ಬೈರತಿ ಸುರೇಶ್

12/08/2025 8:42 PM

ವ್ಯಾಪಾರಸ್ಥರು ‘ಟ್ರೇಡ್ ಲೈಸೆನ್ಸ್’ ಪಡೆಯುವುದು ಕಡ್ಡಾಯ: ಸಚಿವ ಬೈರತಿ ಸುರೇಶ್

12/08/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.