ಬೆಂಗಳೂರು: ಗ್ರೇಟರ್ ಬೆಂಗಳೂರು. ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ ಎಂಬುದಾಗಿ ಕೇಂದ್ರ ಸಚಿವ ಹೆೆಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಸ್ತೆಗಳಲ್ಲಿಯೇ ಕೆರೆ, ಚರಂಡಿ! ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರು! ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು ಎಂದಿದ್ದಾರೆ.
ವಾರಕ್ಕೊಮ್ಮೆ ತೆರಿಗೆ ಬರೆ, ದರ ಏರಿಕೆ! ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ? ಮನಸೋಇಚ್ಛೆ ಒಡೆದು ಬಡಿದು ನುಂಗಲು!? ಎಂಬುದಾಗಿ ಪ್ರಶ್ನಿಸಿದ್ದಾರೆ.
ನಾಡು ಎಂದರೆ ಕಲ್ಲು ಬಂಡೆಗಳಲ್ಲ, ನಾಡು ಎಂದರೆ ಮನುಷ್ಯರು. ಕೆರೆಯ ನೀರನು ಕೆರೆಗೆ ಚೆಲ್ಲುತ್ತಿಲ್ಲವೇಕೆ? ಕೆರೆ ನೀರಿಗೆ ಕಮೀಷನ್ ಕೋಡಿ ಬಿದ್ದಿದೆ! ತೆರಿಗೆ ಥೈಲಿ, ಬೆಲೆ ಸುಲಿಗೆ ಹಣವೆಲ್ಲಿ? ಜಾಹೀರಾತುಗಳಲ್ಲಿ ಬಣ್ಣಬಣ್ಣವಾಗಿ ಕಾಣುವ ಬೆಂಗಳೂರು, ನೈಜವಾಗಿ ನಿಟ್ಟುಸಿರು ಬಿಡುತ್ತಿದೆ. ಏಕೆ? ಎಂದು ಕೇಳಿದ್ದಾರೆ.
ಬರುತ್ತಿರುವ ಆದಾಯ ಎಲ್ಲಿ ಹೋಗುತ್ತಿದೆ? ನಗರ ಜನರ ಬೆವರಿನ ಹಣ ಏನೇನಾಗುತ್ತಿದೆ? ಕಲೆಕ್ಷನ್ ಎಷ್ಟು? ವೆಚ್ಚ ಎಷ್ಟು? ಸ್ವಾಹಾ ಎಷ್ಟು? ಎಂದು ಪ್ರಶ್ನಿಸಿದ್ದಾರೆ.
ಗುಂಡಿ ಮುಚ್ಚಲು ಗತಿ ಇಲ್ಲ. ಚರಂಡಿ ಕಸ ಎತ್ತಲು ದಿಕ್ಕಿಲ್ಲ. ನಿತ್ಯವೂ ಗುದ್ದಲಿಪೂಜೆ, ಶಂಕುಸ್ಥಾಪನೆ!! ಹೊಸ ಶೀಶೆ, ಹಳೇ ಮದ್ಯ.
ಹಳೇ ಕಾಮಗಾರಿ, ಹೊಸ ಹೊಸ ಬಿಲ್ಲು! ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.
ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್’ಗಳ ಬೆಂಗಳೂರು ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
📌 ಗ್ರೇಟರ್ ಬೆಂಗಳೂರು!?
ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ!ರಸ್ತೆಗಳಲ್ಲಿಯೇ ಕೆರೆ, ಚರಂಡಿ! ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರು! ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು!
ವಾರಕ್ಕೊಮ್ಮೆ ತೆರಿಗೆ ಬರೆ, ದರ ಏರಿಕೆ!
ಜನರೆಂದರೆ ಜೀವರಹಿತ…— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 18, 2025