Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

IRCTC ಸ್ವರೈಲ್ ಅಪ್ಲಿಕೇಶನ್ ಆರಂಭ: ಇದರ ಉಪಯೋಗ ಏನು ಗೊತ್ತಾ? ಇಲ್ಲಿದೆ ಮಾಹಿತಿ | IRCTC Swarail app

19/05/2025 2:58 PM

BIG NEWS : ಬೆಂಗಳೂರಲ್ಲಿ ರಸ್ತೆ ಮಧ್ಯ ಕೆಟ್ಟು ನಿಂತ ‘BMTC’ ಬಸ್ : ಗರ್ಭಿಣಿ ಸೇರಿ ಎಲ್ಲ ಪ್ರಯಾಣಿಕರನ್ನು ರಕ್ಷಿಸಿದ ಪೊಲೀಸರು

19/05/2025 2:57 PM

ಶಾಸಕ ಎನ್.ಎ ಹ್ಯಾರಿಸ್ ಕೂಡಲೇ ಬಂಧಿಸುವಂತೆ ಎಎಪಿ ಆಗ್ರಹ

19/05/2025 2:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಮಳೆಹಾನಿ ಪರಿಹಾರಕ್ಕೆ 1 ಸಾವಿರ ಕೋಟಿ ಬಿಡುಗಡೆ ಮಾಡಿ: ಆರ್.ಅಶೋಕ್ ಆಗ್ರಹ
KARNATAKA

ಬೆಂಗಳೂರಿನ ಮಳೆಹಾನಿ ಪರಿಹಾರಕ್ಕೆ 1 ಸಾವಿರ ಕೋಟಿ ಬಿಡುಗಡೆ ಮಾಡಿ: ಆರ್.ಅಶೋಕ್ ಆಗ್ರಹ

By kannadanewsnow0919/05/2025 2:31 PM

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ “ಬ್ರಾಂಡ್ ಬೆಂಗಳೂರು”ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಸಿಎಂ, ಡಿಸಿಎಂ ಮತ್ತು ಸಚಿವರು ಸಾಧನಾ ಸಮಾವೇಶದಲ್ಲಿ ಮೆರೆದಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಮಧ್ಯ ರಾತ್ರಿಯಿಂದಲೇ ನಗರದ ನಾನಾ ಪ್ರದೇಶಗಳಿಂದ ತಮಗೆ ದೂರವಾಣಿ ಕರೆಗಳ ಮಹಾಪೂರ ಹರಿದು ಬರುತ್ತಿದೆ. ಅನೇಕ ಬಡಾವಣೆಗಳು ಜಲಾವೃತವಾಗಿವೆ, ನೂರಾರು ವಾಹನಗಳು ಪ್ರವಾಹದಲ್ಲಿ ತೇಲಿ ಹೋಗಿವೆ, ಅನಾಥಾಶ್ರಮಕ್ಕೂ ನೀರು ನುಗ್ಗಿದೆ, ಇಡೀ ರಾತ್ರಿ ಜನರು ಜಾಗರಣೆ ಮಾಡುತ್ತಿದ್ದಾರೆ, ಅವರಿಗೆ ಊಟದ ವ್ಯವಸ್ಥೆ ಇಲ್ಲ, ಇಷ್ಟಾದರೂ ಬಿಬಿಎಂಪಿ ನೆರವಿಗೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೊಣೆಗೇಡಿತನದ ಪರಮಾವಧಿ

ಕಳೆದ ಮುಳುಗಡೆಯಾಗಿದ್ದ ಸಾಯಿ ಬಡಾವಣೆ, ನಂದಗೋಕುಲ ಬಡಾವಣೆ ಸೇರಿದಂತೆ ಅನೇಕ ಬಡಾವಣೆಗಳಿಗೆ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಪಾಲಿಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಶಾಶ್ವತ ಪರಿಹಾರದ ಭರವಸೆ ನೀಡಿದ್ದರು. ಆದರೆ, ಅದು ಮಾತಿನಲ್ಲೇ ಉಳಿದು ಈ ಸಲ ಮತ್ತೆ ಆ ಬಡಾವಣೆಗಳು ನೀರಿನಲ್ಲಿ ಮುಳುಗಿವೆ. ಆದರೂ ನಿವಾಸಿಗಳ ಅಳಲು ಕೇಳಲು ಯಾರೂ ಮುಂದಾಗಿಲ್ಲ ಎಂದು ಟೀಕಿಸಿದ್ದಾರೆ.

ಮೂರು ವ್ಯಾಲಿಗಳಲ್ಲೂ ಪ್ರವಾಹ

ಹೆಬ್ಬಾಳ, ಕೋರಮಂಗಲ ಮತ್ತು ವೃಷುಭಾವತಿ ವ್ಯಾಲಿಯಲ್ಲಿ ಪ್ರವಾಹ ಬಂದಿದೆ. ಇನ್ನೂ ಮೂರು – ನಾಲ್ಕು ದಿನ ಭಾರಿ ಮಳೆ ಬೀಳುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಕ್ಷಣ ತುರ್ತು ಪರಿಹಾರ ಕಾರ್ಯಪಡೆ ರಚಿಸಿ, ಸಹಾಯವಾಣಿ ಆರಂಭಿಸಬೇಕು.

ನೀರು ನುಗ್ಗಿರುವ ಮನೆಗಳಿಗೆ ತಲಾ ಕನಿಷ್ಠ ಒಂದು ಲಕ್ಷ ರೂ. ಪರಿಹಾರ ವಿತರಿಸಬೇಕು. ಆ ಮನೆಯವರಿಗೆ ಊಟ, ತಿಂಡಿ ವ್ಯವಸ್ಥೆ ಮಾಡಿ ಎರಡು ತಿಂಗಳಿಗೆ ಆಗುವಷ್ಟು ಪರಿಹಾರ ವಿತರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಅಪಮಾನ

ಹಿಂದಿನ ವರ್ಷದ ಲೋಪಗಳಿಂದ ಪಾಠ ಕಲಿಯದ ಸರ್ಕಾರದ ಬೇಜವಾಬ್ದಾರಿತನದಿಂದ ನಗರದಲ್ಲಿ ಅನಾಹುತ ಸಂಭವಿಸಿದೆ. ಮುಂಚಿತವಾಗಿ ಮೋರಿ, ಚರಂಡಿ, ರಾಜ ಕಾಲುವೆಗಳಲ್ಲಿ ಹೂಳು ತೆಗೆಸುವ ಕೆಲಸ ಮಾಡಬೇಕಿತ್ತು. ನಗರದ ಅನೇಕ ಕಡೆ ವೈಟ್ ಟಾಫಿಂಗ್ ಮತ್ತು ರಿಪೇರಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿನ ಅವಶೇಷಗಳನ್ನು ತೆರವು ಮಾಡಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ.

ಬಿಬಿಎಂಪಿ ಮುನ್ನೆಚ್ಚರಿಕೆ ವಹಿಸದಿರುವುದೇ ಅನಾಹುತಗಳಿಗೆ ಕಾರಣ ಎಂದು ಖುದ್ದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ. ಉಸ್ತುವಾರಿ ಸಚಿವ ಡಿಕೆಶಿ ಅವರ ವೈಫಲ್ಯಕ್ಕೆ ಇದಕ್ಕಿಂತ ಇನ್ಯಾವುದೇ ಸರ್ಟಿಫಿಕೇಟ್ ಬೇಕಾ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಮನೆ ಬಾಗಿಲಿಗೆ ಪರಿಹಾರ ಅಲ್ಲ; ಕೊಳಚೆ ನೀರು

ಕಳೆದ ವರ್ಷ ವಿಧಾನಸಭೆ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಪರಿಹಾರ ಹೆಸರಿನಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಿದ್ದ ಶಿವಕುಮಾರ್ ಅವರು, ಸಾರ್ವಜನಿಕರಿಗೆ ಭರವಸೆಗಳ ಮಹಾಪೂರವನ್ನೇ ಹರಿಸಿದ್ದರು. ಈಗ ಅದೆಲ್ಲಾ ಏನಾಯಿತು ಎಂಬ ಉತ್ತರ ನೀಡಬೇಕು. ಅವರು ಪರಿಹಾರ ನೀಡಲಿಲ್ಲ, ಪ್ರವಾಹದ ನೀರು ಮತ್ತು ಕಸದ ರಾಶಿಯನ್ನು ಮನೆಬಾಗಿಲಿಗೆ ತಂದು ಹಾಕಿದ್ದಾರೆ ಎಂದು ಗೇಲಿ ಮಾಡಿದ್ದಾರೆ.

ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ವರ್ತಿಸಿರುವ ಶಿವಕುಮಾರ್ ಅವರು, ಹಿಂದಿನ ಸರ್ಕಾರದ ಲೋಪ ಅನಾಹುತಕ್ಕೆ ಕಾರಣ ಎಂದಿದ್ದಾರೆ. ಆಗಾದರೆ ಎರಡು ವರ್ಷಗಳ ಕಾಲ ಇವರು ಕಡಿದು ಕಟ್ಟೆ ಹಾಕಿದ್ದೇನು? ಇದೇನಾ ಇವರ ಬ್ರಾಂಡ್ ಬೆಂಗಳೂರು? ಹೆಸರಿಗೆ ಮಾತ್ರ ಗ್ರೆಟರ್, ದಿನವೂ ಜನರಿಗೆ ಟಾರ್ಚರ್ ತಪ್ಪಿಲ್ಲ. ಒಂದೇ ಮಳೆಗೆ ಇವರ ಬ್ರಾಂಡ್ ಬೆಂಗಳೂರು ಕೊಚ್ಚಿ ಹೋಯ್ತು. ಜಾಗತಿಕ ಮಟ್ಟದಲ್ಲಿ ಬೆಂಗಳೂರು ಮಾನ ಹರಾಜಾಗಿದೆ ಎಂದು ಅಶೋಕ್ ಕಿಡಿ ಕಾರಿದ್ದಾರೆ.

ಸಾರ್ವಜನಿಕರೇ ಗಮನಿಸಿ : ನಿಮ್ಮ `ಮೊಬೈಲ್’ ಕಳ್ಳತನವಾದ್ರೆ ಚಿಂತೆಬೇಡ, ಜಸ್ಟ್ ಈ ರೀತಿ ಮಾಡಿ.!

BREAKING : ಎಲ್ಲಾ ಹೈಕೋರ್ಟ್ ನ್ಯಾಯಾಧೀಶರು ಪೂರ್ಣ ಪಿಂಚಣಿಗೆ ಅರ್ಹರು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ರಸ್ತೆ ಮಧ್ಯ ಕೆಟ್ಟು ನಿಂತ ‘BMTC’ ಬಸ್ : ಗರ್ಭಿಣಿ ಸೇರಿ ಎಲ್ಲ ಪ್ರಯಾಣಿಕರನ್ನು ರಕ್ಷಿಸಿದ ಪೊಲೀಸರು

19/05/2025 2:57 PM1 Min Read

ಶಾಸಕ ಎನ್.ಎ ಹ್ಯಾರಿಸ್ ಕೂಡಲೇ ಬಂಧಿಸುವಂತೆ ಎಎಪಿ ಆಗ್ರಹ

19/05/2025 2:46 PM2 Mins Read

BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಕ್ಕಳಾಗಿಲ್ಲ ಎಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಅತ್ತೆ!

19/05/2025 2:45 PM1 Min Read
Recent News

IRCTC ಸ್ವರೈಲ್ ಅಪ್ಲಿಕೇಶನ್ ಆರಂಭ: ಇದರ ಉಪಯೋಗ ಏನು ಗೊತ್ತಾ? ಇಲ್ಲಿದೆ ಮಾಹಿತಿ | IRCTC Swarail app

19/05/2025 2:58 PM

BIG NEWS : ಬೆಂಗಳೂರಲ್ಲಿ ರಸ್ತೆ ಮಧ್ಯ ಕೆಟ್ಟು ನಿಂತ ‘BMTC’ ಬಸ್ : ಗರ್ಭಿಣಿ ಸೇರಿ ಎಲ್ಲ ಪ್ರಯಾಣಿಕರನ್ನು ರಕ್ಷಿಸಿದ ಪೊಲೀಸರು

19/05/2025 2:57 PM

ಶಾಸಕ ಎನ್.ಎ ಹ್ಯಾರಿಸ್ ಕೂಡಲೇ ಬಂಧಿಸುವಂತೆ ಎಎಪಿ ಆಗ್ರಹ

19/05/2025 2:46 PM

BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಕ್ಕಳಾಗಿಲ್ಲ ಎಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಅತ್ತೆ!

19/05/2025 2:45 PM
State News
KARNATAKA

BIG NEWS : ಬೆಂಗಳೂರಲ್ಲಿ ರಸ್ತೆ ಮಧ್ಯ ಕೆಟ್ಟು ನಿಂತ ‘BMTC’ ಬಸ್ : ಗರ್ಭಿಣಿ ಸೇರಿ ಎಲ್ಲ ಪ್ರಯಾಣಿಕರನ್ನು ರಕ್ಷಿಸಿದ ಪೊಲೀಸರು

By kannadanewsnow0519/05/2025 2:57 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಇದೀಗ ವರುಣ ಅಬ್ಬರಿಸುತ್ತಿದ್ದು, ಕಳೆದ ಎರಡು ದಿನಗಳಿಂದ ಬೆಂಗಳೂರು ಮಹಾನಗರದಲ್ಲಿ ಭಾರಿ ಮಳೆ ಆಗುತ್ತಿದೆ. ನಿನ್ನೆ…

ಶಾಸಕ ಎನ್.ಎ ಹ್ಯಾರಿಸ್ ಕೂಡಲೇ ಬಂಧಿಸುವಂತೆ ಎಎಪಿ ಆಗ್ರಹ

19/05/2025 2:46 PM

BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಕ್ಕಳಾಗಿಲ್ಲ ಎಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಅತ್ತೆ!

19/05/2025 2:45 PM

BREAKING : ಶಿವಮೊಗ್ಗದಲ್ಲಿ ಕೊಲೆ ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್ : ಓರ್ವ ಕಾನ್ಸ್ಟೇಬಲ್ ಗೆ ಗಾಯ

19/05/2025 2:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.