ಮೈಸೂರು: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಹೃದಯ ವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲ್ಲೂಕಿನ ಬೂದನೂರು ಕೆರೆಗೆ ಹಾರಿ ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಮಹದೇವಸ್ವಾಮಿ, ಪತ್ನಿ ಮಂಜುಳಾ, ಹರ್ಷಿತಾ ಎಂಬುವರಾಗಿದ್ದಾರೆ.
ಹುಡುಗನೊಬ್ಬನನ್ನು ಪ್ರೀತಿಸಿದ್ದ ಅರ್ಪಿತಾ, ಕುಟುಂಬಸ್ಥರನ್ನು ತೊರೆದು, ಮನೆ ಬಿಟ್ಟು ಹೋಗಿದ್ದಳು. ಇದರಿಂದ ಮನನೊಂದು ತಂದೆ ಮಹದೇವಸ್ವಾಮಿ, ತಾಯಿ ಮಂಜುಳಾ ಹಾಗೂ ಸಹೋದರಿ ಹರ್ಷಿತಾ ಹಗ್ಗಕಟ್ಟಿಕೊಂಡು ಬೂದನೂರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.