Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇ.26ರಂದು ಸಾಗರದಲ್ಲಿ ‘ಮಲೆನಾಡು ಮುಸ್ಲೀಂ ಒಕ್ಕೂಟ’ದಿಂದ ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ‘ಪ್ರತಿಭಟನಾ ಸಭೆ’

24/05/2025 6:23 PM

ಶೀಘ್ರವೇ ಬೆಂಗಳೂರಲ್ಲಿ 2 ಹಂತದಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಟೆಂಡರ್: ಢಿಸಿಎಂ ಡಿ.ಕೆ ಶಿವಕುಮಾರ್

24/05/2025 6:14 PM

BREAKING : ಬೆಂಗಳೂರಲ್ಲಿ ಅಕ್ರಮವಾಗಿ ನಾಡ ಪಿಸ್ತುಲ್ ಮಾರಾಟ ಮಾಡುತ್ತಿದ ರೌಡಿಶೀಟರ್ ಬಂಧಿಸಿದ ‘CCB’

24/05/2025 6:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರವೇ ಬೆಂಗಳೂರಲ್ಲಿ 2 ಹಂತದಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಟೆಂಡರ್: ಢಿಸಿಎಂ ಡಿ.ಕೆ ಶಿವಕುಮಾರ್
KARNATAKA

ಶೀಘ್ರವೇ ಬೆಂಗಳೂರಲ್ಲಿ 2 ಹಂತದಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಟೆಂಡರ್: ಢಿಸಿಎಂ ಡಿ.ಕೆ ಶಿವಕುಮಾರ್

By kannadanewsnow0924/05/2025 6:14 PM

ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆ ಆರ್ ಎಸ್ ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು.

“ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ” ಎಂದು ಮಾಹಿತಿ ನೀಡಿದರು.

“ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಡಳಿತಾಧಿಕಾರಿಗಳು ಈ ಸಭೆ ಮಾಡಿದ್ದೇವೆ” ಎಂದು ಹೇಳಿದರು.

“ಇನ್ನು ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ” ಎಂದರು.

ಕಸ ವಿಲೇವಾರಿಗೆ ಸ್ವಚ್ಛ ಬೆಂಗಳೂರು ಕಾರ್ಯಕ್ರಮ

“ಇನ್ನು ಬೆಂಗಳೂರಿನ ಕಸ ವಿಲೇವಾರಿ ವಿಚಾರವಾಗಿ ದೊಡ್ಡ ಕ್ಷೇತ್ರಗಳಲ್ಲಿ ಎರಡರಂತೆ ಪ್ರತಿಯೊಂದು ಕ್ಷೇತ್ರಕ್ಕೆ ಒಂದೊಂದರಂತೆ ಒಟ್ಟು 33 ಪ್ಯಾಕೇಜ್ ಗಳನ್ನು ಕರೆಯಲು ತೀರ್ಮಾನಿಸಿದ್ದೇವೆ. ಸುಮಾರು ₹4000 ಕೋಟಿ ಮೊತ್ತದ ಈ ಯೋಜನೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಏಳು ವರ್ಷಗಳ ಅವಧಿಗೆ ಟೆಂಡರ್ ಕರೆಯಲಾಗುತ್ತಿದೆ” ಎಂದರು.

“ಸ್ವಚ್ಛ ಬೆಂಗಳೂರು ಕಾರ್ಯಕ್ರಮದ ಮೂಲಕ ಬೆಂಗಳೂರಿನ ಎಲ್ಲಾ ಭಾಗಗಳಲ್ಲಿ ಇರುವ ಕಟ್ಟಡ ತ್ಯಾಜ್ಯ ಹಾಗೂ ಇತರೆ ಕಸವನ್ನು ಒಮ್ಮೆಲೇ ಸ್ವಚ್ಛ ಮಾಡಲು ತೀರ್ಮಾನಿಸಲಾಗಿದೆ. ನಾಗರೀಕರು ಕೂಡ ಈ ಕಾರ್ಯಕ್ರಮದಲ್ಲಿ ಕೈಜೋಡಿಸಿ, ಎಲ್ಲೆಲ್ಲಿ ಕಸ ಇದೆ ಎಂದು ಜಿಬಿಎ ಅಧಿಕಾರಿಗಳಿಗೆ ಆಪ್ ಅಥವಾ ನೀಡಲಾಗುವ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದರೆ, ಅಲ್ಲಿರುವ ಕಸವನ್ನು ತೆಗೆಯಲಾಗುವುದು. ಇದಕ್ಕಾಗಿ ಅಧಿಕಾರಿಗಳು, ಮಾರ್ಷಲ್ ಗಳನ್ನು ನಿಯೋಜಿಸಲಾಗಿದೆ” ಎಂದು ತಿಳಿಸಿದರು.

“ಇನ್ನು ಇಂಟಿಗ್ರೇಟ್ ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ಮಾಡಲು 15 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು” ಎಂದರು.

ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಶೀಘ್ರವೇ ಟೆಂಡರ್

“ಕಾವೇರಿ ಆರತಿ ನಮ್ಮ ರಾಜ್ಯದ ಸಂಸ್ಕೃತಿ, ಪರಂಪರೆಯ ಪ್ರತೀಕವಾಗಲಿದೆ. ಕೊಡಗು, ಮಲೆನಾಡು, ಕರಾವಳಿ, ಬೆಂಗಳೂರು ಭಾಗದ ಆಚರಣೆ, ಈ ಭಾಗದ ಮಠಗಳನ್ನು ಒಳಗೊಂಡು ಈ ಕಾರ್ಯಕ್ರಮದ ವಿಧಾನ ರೂಪಿಸಲಾಗುವುದು. ವಾರಾಂತ್ಯದ 3 ದಿನಗಳ ಕಾಲ ಈ ಕಾರ್ಯಕ್ರಮ ನಡೆಯಬೇಕು ಎಂದು ನಾನು ಆಲೋಚಿಸುತ್ತಿದ್ದೇನೆ. ಪೂಜಾ ಕಾರ್ಯದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಮಾಡಲಾಗುವುದು. ಇದಕ್ಕಾಗಿ ಕಾವೇರಿ ನಿಗಮದಲ್ಲಿ ₹92 ಕೋಟಿ ಹಣ ಮೀಸಲಿಡಲಾಗಿದೆ” ಎಂದು ತಿಳಿಸಿದರು.

“ಇದರ ಜತೆಗೆ ಇಂಧನ ಇಲಾಖೆ, ಲೋಕೋಪಯೋಗಿ, ಪ್ರವಾಸೋದ್ಯಮ, ಧಾರ್ಮಿಕ ದತ್ತಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೂ ಈ ಕಾರ್ಯಕ್ರಮಕ್ಕೆ ಕೈ ಜೋಡಿಸಲಿದೆ. ಈ ಕಾರ್ಯಕ್ರಮದ ಸಾರ್ವಜನಿಕ ವೀಕ್ಷಣೆಗಾಗಿ 10 ಸಾವಿರ ಆಸನಗಳ ಗ್ಯಾಲರಿಯ ವಿನ್ಯಾಸ ಕೂಡ ಸಿದ್ಧವಾಗಿದೆ. ಈ ಕಾರ್ಯಕ್ರಮಕ್ಕೆ ಅತ್ಯುತ್ತಮ ಗೀತೆ ರಚನೆಗೆ ಆಹ್ವಾನ ನೀಡಿದ್ದೇವೆ” ಎಂದರು.

“ಈ ಕಾರ್ಯಕ್ರಮ ದಕ್ಷಿಣ ಭಾರತದ ಕಾರ್ಯಕ್ರಮವಾಗಲಿದೆ. ಕಾವೇರಿ ನದಿ ಹರಿಯುವ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು. ಈ ಎಲ್ಲಾ ವಿಚಾರಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಬಹುತೇಕ ಎಲ್ಲಾ ನೀಲನಕ್ಷೆಗಳು ಸಿದ್ಧವಾಗಿವೆ. ಇವು ಪೂರ್ಣಗೊಂಡ ನಂತರ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು” ಎಂದು ಹೇಳಿದರು.

“ಹರಿಯುವ ನೀರಿನಲ್ಲಿ ಈ ಕಾರ್ಯಕ್ರಮದ ವೇದಿಕೆ ನಿರ್ಮಿಸಲಾಗುವುದು. ಈ ವೇದಿಕೆ ನಿರ್ಮಾಣಕ್ಕೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು” ಎಂದು ತಿಳಿಸಿದರು.

BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ

BREAKING: ರಾಜ್ಯದಲ್ಲಿ ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ | Covid19 Test

Share. Facebook Twitter LinkedIn WhatsApp Email

Related Posts

ಮೇ.26ರಂದು ಸಾಗರದಲ್ಲಿ ‘ಮಲೆನಾಡು ಮುಸ್ಲೀಂ ಒಕ್ಕೂಟ’ದಿಂದ ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ‘ಪ್ರತಿಭಟನಾ ಸಭೆ’

24/05/2025 6:23 PM1 Min Read

BREAKING : ಬೆಂಗಳೂರಲ್ಲಿ ಅಕ್ರಮವಾಗಿ ನಾಡ ಪಿಸ್ತುಲ್ ಮಾರಾಟ ಮಾಡುತ್ತಿದ ರೌಡಿಶೀಟರ್ ಬಂಧಿಸಿದ ‘CCB’

24/05/2025 6:04 PM1 Min Read

BIG NEWS: ಬೆಂಗಳೂರಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್, 2 ಹಂತದಲ್ಲಿ ಸುರಂಗ ರಸ್ತೆ ನಿರ್ಮಾಣ: ಡಿಸಿಎಂ ಡಿಕೆಶಿ

24/05/2025 6:02 PM1 Min Read
Recent News

ಮೇ.26ರಂದು ಸಾಗರದಲ್ಲಿ ‘ಮಲೆನಾಡು ಮುಸ್ಲೀಂ ಒಕ್ಕೂಟ’ದಿಂದ ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ‘ಪ್ರತಿಭಟನಾ ಸಭೆ’

24/05/2025 6:23 PM

ಶೀಘ್ರವೇ ಬೆಂಗಳೂರಲ್ಲಿ 2 ಹಂತದಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಟೆಂಡರ್: ಢಿಸಿಎಂ ಡಿ.ಕೆ ಶಿವಕುಮಾರ್

24/05/2025 6:14 PM

BREAKING : ಬೆಂಗಳೂರಲ್ಲಿ ಅಕ್ರಮವಾಗಿ ನಾಡ ಪಿಸ್ತುಲ್ ಮಾರಾಟ ಮಾಡುತ್ತಿದ ರೌಡಿಶೀಟರ್ ಬಂಧಿಸಿದ ‘CCB’

24/05/2025 6:04 PM

BIG NEWS: ಬೆಂಗಳೂರಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್, 2 ಹಂತದಲ್ಲಿ ಸುರಂಗ ರಸ್ತೆ ನಿರ್ಮಾಣ: ಡಿಸಿಎಂ ಡಿಕೆಶಿ

24/05/2025 6:02 PM
State News
KARNATAKA

ಮೇ.26ರಂದು ಸಾಗರದಲ್ಲಿ ‘ಮಲೆನಾಡು ಮುಸ್ಲೀಂ ಒಕ್ಕೂಟ’ದಿಂದ ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ‘ಪ್ರತಿಭಟನಾ ಸಭೆ’

By kannadanewsnow0924/05/2025 6:23 PM KARNATAKA 1 Min Read

ಶಿವಮೊಗ್ಗ : ಮೇ.26ರಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಲೆನಾಡು ಮುಸ್ಲೀಂ ಒಕ್ಕೂಟದಿಂದ ವಕ್ಫ್ ಕಾಯ್ದೆ ತಿದ್ದುಪಡಿ 2025 ವಿರೋಧಿಸಿ ಮೇ…

ಶೀಘ್ರವೇ ಬೆಂಗಳೂರಲ್ಲಿ 2 ಹಂತದಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಟೆಂಡರ್: ಢಿಸಿಎಂ ಡಿ.ಕೆ ಶಿವಕುಮಾರ್

24/05/2025 6:14 PM

BREAKING : ಬೆಂಗಳೂರಲ್ಲಿ ಅಕ್ರಮವಾಗಿ ನಾಡ ಪಿಸ್ತುಲ್ ಮಾರಾಟ ಮಾಡುತ್ತಿದ ರೌಡಿಶೀಟರ್ ಬಂಧಿಸಿದ ‘CCB’

24/05/2025 6:04 PM

BIG NEWS: ಬೆಂಗಳೂರಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್, 2 ಹಂತದಲ್ಲಿ ಸುರಂಗ ರಸ್ತೆ ನಿರ್ಮಾಣ: ಡಿಸಿಎಂ ಡಿಕೆಶಿ

24/05/2025 6:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.