ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆ ಕಲ್ಬುರ್ಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ವಿರುದ್ಧ FIR ದಾಖಲಾಗಿದೆ. ಶರಣ ಸಿರಸಗಿ ನಿವಾಸಿ ದತ್ತಾತ್ರೇಯ ಇಲ್ಕಳಕಿ ಅವರ ದೂರಿನ ಮೇರೆಗೆ ಸ್ಟೇಶನ್ ಬಜಾರ್ ಪೊಲೀಸರು ಎನ್.ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಇದೀಗ ಎನ್ ರವಿಕುಮಾರ್ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದು, ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ, ನನ್ನ ಅಜಾಗರೂಕ ಟೀಕೆಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಾನು ಆ ಹೇಳಿಕೆಯನ್ನು ಕೂಡಲೇ ಹಿಂದಕ್ಕೆ ಪಡೆದಿದ್ದೇನೆ. ಜಿಲ್ಲಾಧಿಕಾರಿ ಅತ್ಯಂತ ಗೌರವ ಪಾತ್ರರು. ಅದು ನಾನು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆ ಅಲ್ಲ. ಅದು ಬಾಯಿ ತಪ್ಪಿನಿಂದ ಬಂದ ಹೇಳಿಕೆ. ಅಂದು ನಾನು ಆಡಿದ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿ ಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.