Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಮಾಸೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಬಾಟಲಿಯಿಂದ ಹೊಡೆದು ವ್ಯಕ್ತಿ ಮೇಲೆ ದುಷ್ಕರ್ಮಿ ಹಲ್ಲೆ

28/05/2025 9:32 PM

BREAKING: ರಾಜ್ಯದಲ್ಲಿಂದು 40 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆ | Karnataka Covid19 Update

28/05/2025 8:53 PM

ಪ್ಲೇ ಹೋಂ, LKG, UKG ಸೇರಿ ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳ ನೋಂದಣಿ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಆದೇಶ

28/05/2025 8:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಕೊರೊನ ಪ್ರಕರಣಗಳು ಹೆಚ್ಚಳ : ಸಹಾಯವಾಣಿ ಆರಂಭಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ
KARNATAKA

BIG NEWS : ರಾಜ್ಯದಲ್ಲಿ ಕೊರೊನ ಪ್ರಕರಣಗಳು ಹೆಚ್ಚಳ : ಸಹಾಯವಾಣಿ ಆರಂಭಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

By kannadanewsnow0526/05/2025 7:56 PM

ಬೆಂಗಳೂರು : ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕೊರೋನಾ ತಡೆಗಟ್ಟುವ ಕುರಿತಂತೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೊರೋನಾ ನಿಯಂತ್ರಣಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ. ಕೋವಿಡ್ ಹೆಲ್ಪ್ಲೈನ್ ತೆರೆಯಿರಿ. ಕಳೆದ ಬಾರಿ ಆದಂತೆ ಈ ಬಾರಿ ಯಾವುದೇ ಸಮಸ್ಯೆ ಆಗಬಾರದು. ಜ್ವರ ನೆಗಡಿ ಇರುವ ಮಕ್ಕಳಿಗೆ ರಜೆ ನೀಡಲು ಸೂಚನೆ ನೀಡಿ ಎಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ನಡೆದ ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಈ ಕೆಳಗಿನ ಸೂಚನೆಗಳನ್ನು ನೀಡಿದರು…

1) ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.

2) ಸದ್ಯಕ್ಕೆ ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ.

3) ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.

4) ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.

5) ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.

6) ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ, ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.

7) ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು.

8) ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೂ ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.

9) SARI ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ

10) ರಾಜ್ಯದಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು

11) ಮಕ್ಕಳಿಗೆ ಜ್ವರ ಕೆಮ್ಮು ಮುಂತಾದ ಲಕ್ಷಣಗಳು ಕಂಡು ಬಂದರೆ ಶಾಲೆಗೆ ಕಳಿಸದಂತೆ ಪೋಷಕರು ಕ್ರಮ ವಹಿಸಲು , ಶಾಲಾ ಕಾಲೇಜು ಮಂಡಳಿಗಳು ನಿಗಾ ವಹಿಸಲು ಸೂಚಿಸುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

12) ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ, ಎಂತಹುದೇ ಪರಿಸ್ಥಿತಿ ಎದುರಿಸಲು. ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿರುವಂತೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು

13) ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸಭೆಯಲ್ಲಿ ಉಪಸ್ಥಿತರಿದ್ದ ಆರೋಗ್ಯಾಧಿಕಾರಿ ಗಳಿಗೆ ಸೂಚಿಸಿದರು .

14) ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭ ಮಾಡಲು ಸೂಚನೆ ನೀಡಿದರು .

15) ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಲು ಕ್ರಮ ವಹಿಸುವಂತೆ ಸೂಚಿಸಿದರು.

16) ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಇರಬಾರದು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರುವಂತೆ ಸೂಚಿಸಿದರು.

17) ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಲು ಸೂಚಿಸಿದರು .

18) ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಈಗಾಗಲೇ ಪಾಲಿಸುತ್ತಿದ್ದೇವೆ. ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣ ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್ ಗಳನ್ನು ಸಿದ್ದವಾಗಿಟ್ಟು ಕೊಳ್ಳಲು ಸೂಚಿಸಿದರು

19) ಸಾಮಾಜಿಕ ಮಾಧ್ಯಮಗಳಲ ಮೂಲಕ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಸೂಚಿಸಿದರು.

Share. Facebook Twitter LinkedIn WhatsApp Email

Related Posts

ಸಾಗರದ ಮಾಸೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಬಾಟಲಿಯಿಂದ ಹೊಡೆದು ವ್ಯಕ್ತಿ ಮೇಲೆ ದುಷ್ಕರ್ಮಿ ಹಲ್ಲೆ

28/05/2025 9:32 PM1 Min Read

BREAKING: ರಾಜ್ಯದಲ್ಲಿಂದು 40 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆ | Karnataka Covid19 Update

28/05/2025 8:53 PM1 Min Read

ಪ್ಲೇ ಹೋಂ, LKG, UKG ಸೇರಿ ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳ ನೋಂದಣಿ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಆದೇಶ

28/05/2025 8:42 PM1 Min Read
Recent News

ಸಾಗರದ ಮಾಸೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಬಾಟಲಿಯಿಂದ ಹೊಡೆದು ವ್ಯಕ್ತಿ ಮೇಲೆ ದುಷ್ಕರ್ಮಿ ಹಲ್ಲೆ

28/05/2025 9:32 PM

BREAKING: ರಾಜ್ಯದಲ್ಲಿಂದು 40 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆ | Karnataka Covid19 Update

28/05/2025 8:53 PM

ಪ್ಲೇ ಹೋಂ, LKG, UKG ಸೇರಿ ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳ ನೋಂದಣಿ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಆದೇಶ

28/05/2025 8:42 PM

BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ‘ಜನೌಷಧಿ ಕೇಂದ್ರ’ ತೆರವಿಗೆ ‘ಕಾಂಗ್ರೆಸ್ ಶಾಸಕ’ರಿಂದಲೇ ವಿರೋಧ

28/05/2025 8:31 PM
State News
KARNATAKA

ಸಾಗರದ ಮಾಸೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಬಾಟಲಿಯಿಂದ ಹೊಡೆದು ವ್ಯಕ್ತಿ ಮೇಲೆ ದುಷ್ಕರ್ಮಿ ಹಲ್ಲೆ

By kannadanewsnow0928/05/2025 9:32 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ಸಮೀಪದ ಮಾಸೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಅಮಾಯಕ ವ್ಯಕ್ತಿಯ ಮೇಲೆ ದುಷ್ಕರ್ಮಿಯೊಬ್ಬ ಬಾಟಲಿಯಿಂದ ಹೊಡೆದು…

BREAKING: ರಾಜ್ಯದಲ್ಲಿಂದು 40 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆ | Karnataka Covid19 Update

28/05/2025 8:53 PM

ಪ್ಲೇ ಹೋಂ, LKG, UKG ಸೇರಿ ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳ ನೋಂದಣಿ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಆದೇಶ

28/05/2025 8:42 PM

BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ‘ಜನೌಷಧಿ ಕೇಂದ್ರ’ ತೆರವಿಗೆ ‘ಕಾಂಗ್ರೆಸ್ ಶಾಸಕ’ರಿಂದಲೇ ವಿರೋಧ

28/05/2025 8:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.